ಕಲಬುರಗಿ : ಕೋವಿಡ್ ತಪಾಸಣೆಗೆ ಬಂದ ಕೈದಿ ಜಿಮ್ಸ್ ಆಸ್ಪತ್ರೆ ಮಹಡಿಯಿಂದ ಬಿದ್ದು ಸಾವು
ಎಂಟು ತಿಂಗಳ ಹಿಂದೆ ಈತನ ಸಹೋದರನೂ ಬಾವಿಗೆ ಬಿದ್ದು ಸಾವನ್ನಪ್ಪಿದ್ದ
Team Udayavani, Aug 27, 2022, 7:44 AM IST
ಕಲಬುರಗಿ: ಕೋವಿಡ್ ತಪಾಸಣೆಗೆ ಹೆದರಿ ಪೋಲೀಸರಿಂದ ತಪ್ಪಿಸಿಕೊಂಡು ಓಡುವ ಸಂದರ್ಭದಲ್ಲಿ ಮಹಡಿ ಮೇಲಿಂದ ಬಿದ್ದು ಓರ್ವ ಕೈದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡ ರಾತ್ರಿ ಜಿಮ್ಸ್ ಆವರಣದಲ್ಲಿ ನಡೆದಿದೆ.
ಮೃತನನ್ನು ಶೇಖ ಜಾವೇದ್ ಅಲಿಯಾಸ್ ಮುನ್ನಾ ಎಂದು ಗುರುತಿಸಲಾಗಿದೆ.
ಈತ ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ. ಎಂಟು ತಿಂಗಳ ಹಿಂದೆ ಇತನ ಸಹೋದರ ನಗರದ ಪಬ್ಲಿಕ್ ಗಾರ್ಡನ್ ದಲ್ಲಿ ವ್ಯಕ್ತಿಯೊಬ್ಬರ ಮೊಬೈಲ್ ಕಿತ್ತುಕೊಂಡು ಓಡುವ ಭರಾಟೆ ಯಲ್ಲಿ ಜೆಡಿಎಸ್ ಕಚೇರಿಯ ಸಮೀಪದಲ್ಲಿ ಇರುವ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದ. ಈಗ ಆತನ ಸಹೋದರ ಮುನ್ನಾ ಜಿಮ್ಸ್ ಆಸ್ಪತ್ರೆ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ.
ಮುನ್ನಾ ಕಳವು ಇನ್ನಿತರ ಕೇಸ್ ನಲ್ಲಿ ಜಾಮೀನು ಪಡೆದು ನಂತರ ಕೋರ್ಟ್ ಗೆ ಹಾಜರಾಗಿರಲಿಲ್ಲ. ಹೀಗಾಗಿ ಕೋರ್ಟ್ ಬಂಧನಕ್ಕಾಗಿ ವಾರೆಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಶುಕ್ರವಾರ ಆರೋಗ್ಯ ತಪಾಸಣೆ ಮಾಡಿಸಲು ಜಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.
ವೈದ್ಯರು ತಪಾಸಣೆ ಮಾಡಿದ ಬಳಿಕ ಕೋವಿಡ್ ಟೆಸ್ಟ್ ಮಾಡಲು ಕರೊನಾ ವಾರ್ಡ ಕಡೆಗೆ ಪೊಲೀಸರು ಆತನನ್ನು ಕರೆದುಕೊಂಡು ಹೋಗುವಾಗ ಅವರಿಂದ ತಪ್ಪಿಸಿಕೊಂಡು ಓಡಲು ಶುರುವಿಟ್ಟಿದ್ದಾನೆ. ಆಸ್ಪತ್ರೆ ಮಹಡಿಯನ್ನು ಹತ್ತಿ ತಪ್ಪಿಸಿಕೊಳ್ಳಲು ಪ್ರಯತ್ನಿದ್ದಾನೆ. ಈ ವೇಳೆ ಆತನನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಆತ ಮೇಲಂತಸ್ತಿನಿಂದ ಕೆಳಗೆ ಜಿಗಿದಿದ್ದಾನೆ. ಕೆಳಗೆ ಮೆಟ್ಟಿಲು ಇದ್ದ ಕಾರಣ ಭಾರಿ ಪ್ರಮಾಣದ ಗಾಯಗಳಾಗಿವೆ ಎಂದು ದವಾಖಾನೆ ಮೂಲಗಳು ತಿಳಿಸಿವೆ.
ಕೂಡಲೇ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಿಸಿಲ್ಲ ಎಂದು ಗೊತ್ತಾಗಿದೆ.
ಸ್ಥಳಕ್ಕೆ ಎಸಿಪಿ ಗಿರೀಶ ಎಸ್.ಬಿ., ಇನ್ಸ್ಪೆಕ್ಟರ್ ರಾಘವೇಂದ್ರ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದರು. ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ