![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಬಸಲಿಂಗಯ್ಯ ಹಿರೇಮಠಗೆ ಬೀಳ್ಕೊಡುಗೆ
Team Udayavani, Jun 4, 2020, 3:39 PM IST
![04-June-21](https://www.udayavani.com/wp-content/uploads/2020/06/04-June-21-620x415.gif)
ಕಲಬುರಗಿ: ಸೇವಾ ನಿವೃತ್ತಿ ಹೊಂದಿದ ಬಸಲಿಂಗಯ್ಯ ಹಿರೇಮಠ ದಂಪತಿಯನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಕಲಬುರಗಿ: ಕಾಯಕವೇ ಕೈಲಾಸವೆಂದು ಸೇವೆಯುದ್ದಕ್ಕೂ ಉತ್ತಮ ಸೇವೆ ಸಲ್ಲಿಸಿದ್ದ ಪಿಎಸ್ಐ ಹುದ್ದೆಯೊಂದಿಗೆ ನಿವೃತ್ತಿಯಾಗಿರುವ ಬಸಲಿಂಗಯ್ಯ ಹಿರೇಮಠ ಬಸವಣ್ಣನವರ ಕರ್ಮಭೂಮಿಯಲ್ಲಿ ಪದೋನ್ನತ್ತಿ ಪಡೆದು ನಿವೃತ್ತಿಯಾಗುತ್ತಿರುವುದು ಸಂತಸ ತಂದಿದೆ ಎಂದು ಅಬಕಾರಿ ಇಲಾಖೆ ಜಂಟಿ ಆಯುಕ್ತ ಎಸ್.ಕೆ. ಕುಮಾರ ಹೇಳಿದರು.
ನಗರದ ಅಬಕಾರಿ ಉಪ ಆಯುಕ್ತರ ಕಚೇರಿಯಲ್ಲಿ ಆಯೋಜಿಸಿದ ಸೇವಾ ನಿವೃತ್ತಿ ಮತ್ತು ಪದೋನ್ನತಿ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದಾ ಹಸನ್ಮುಖೀ ಬಸಲಿಂಗಯ್ಯನವರಿಗೆ ಇನ್ನೇನು ಹಿರಿಯ ರಕ್ಷಕ ಹುದ್ದೆಯಿಂದ ನಿವೃತ್ತಿ ಹೊಂದುತ್ತಾರೆ ಎನ್ನುವ ಕೆಲವೇ ಕ್ಷಣದಲ್ಲಿ ಸರಕಾರ ಪಿಎಸ್ಐ ಹುದ್ದೆಗೆ ಪದೋನ್ನತ್ತಿ ನೀಡಿ ಆದೇಶಿಸಿರುವುದು ಅವರಿಗೆ ನೀಡಿದ ಪದೋನ್ನತಿ ಉಡುಗೊರೆಯೆಂತಲೇ ಹೇಳಬೇಕು ಎಂದು ಪ್ರಶಂಸಿಸಿದರು.
ಅಧೀಕ್ಷಕರ ಹುದ್ದೆಗೆ ಪದೋನ್ನತಿ ಹೊಂದಿರುವ ಸಂಜಯಕುಮಾರ ಗ್ಲ್ಯಾಡಸನ್, ಇಂದೂಮತಿ ಹಾಗೂ ಅದೇ ಹುದ್ದೆಗೆ ಪದೋನ್ನತಿ ಹೊಂದಿದ್ದರೂ ಅದನ್ನು ನಿರಾಕರಿಸಿರುವ ಮಹ್ಮದ್ ಇಸ್ಲಾಯಿಲ್ ಇನಾಮದಾರಗೆ ಸತ್ಕಾರ ನೀಡಿ ಬೀಳ್ಕೊಡಲಾಯಿತು. ಅಬಕಾರಿ ಅಧೀಕ್ಷಕ ಸಂಗನಗೌಡ ಪಾಟೀಲ ಮಾತನಾಡಿದರು. ಅಬಕಾರಿ ನಿರೀಕ್ಷಕರಾದ ಬಾಲಕೃಷ್ಣ ಮದುಕಣ್ಣ, ಗೋಪಾಲ ಪಂಡಿತ, ವನಿತಾ ಸಿತಾಳೆ, ಕಚೇರಿ ಅಧೀಕ್ಷಕ ಸಂಜಯಸಿಂಗ್, ಸೈಯ್ಯದ್ ನಜರೊದ್ದೀನ್, ಉಮೇಶ್ ಷನ್ಮುಖ, ಸಂತೋಷ ಕಡಿಮನಿ, ಶರಣು ಮೋತಕಪಲ್ಲಿ ಸೇರಿದಂತೆ ಹಲವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಅಬಕಾರಿ ನಿರೀಕ್ಷಕ ವಿಠಲ ವಾಲಿ ನಿರೂಪಿಸಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![13-sedam](https://www.udayavani.com/wp-content/uploads/2024/07/13-sedam-150x90.jpg)
Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ
![1-sci](https://www.udayavani.com/wp-content/uploads/2024/07/1-sci-150x91.jpg)
Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ
![ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು](https://www.udayavani.com/wp-content/uploads/2024/07/chikk1-150x83.jpg)
Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು
![Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ](https://www.udayavani.com/wp-content/uploads/2024/07/chittapura-1-150x84.jpg)
Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
![Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ](https://www.udayavani.com/wp-content/uploads/2024/07/chittapura-150x94.jpg)
Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.