ಮುಂಗಾರು ಪೂರ್ವ ಮಳೆ ಅಬ್ಬರ!
ಬಿಸಿಲಿನಿಂದ ಕಂಗೆಟ್ಟಿದ್ದ ಜನರಲ್ಲಿ ನೆಮ್ಮದಿ ನಿಟ್ಟುಸಿರು ಭೂಮಿ ಹದಗೊಳಿಸುತ್ತಿರುವ ರೈತರು
Team Udayavani, Jun 3, 2020, 10:51 AM IST
ಸಾಂದರ್ಭಿಕ ಚಿತ್ರ
ಕಲಬುರಗಿ: ಮುಂಗಾರು ಆರಂಭದ ಮೃಗಶಿರ ಮಳೆ ಮುಂಚೆಯೇ ರೋಹಿಣಿ ಮಳೆಯು ರವಿವಾರ ಸಂಜೆ ಹಾಗೂ ಸೋಮವಾರ ಬೆಳಗಿನ ಜಾವ ಜಿಲ್ಲೆಯಾದ್ಯಂತ ಸುರಿದಿದ್ದ ಮಳೆಯು ಮಂಗಳವಾರ ಬೆಳಗಿನ ಜಾವವೂ ಬಿದ್ದಿದ್ದು, ಮುಂಗಾರು ಹಂಗಾಮಿನ ಬಿತ್ತನೆಗೆ ಶುರು ಎನ್ನುವಂತೆ ವಾತಾವರಣ ನಿರ್ಮಿಸಿದೆ.
ರವಿವಾರ ಸಂಜೆ ಹಾಗೂ ಸೋಮವಾರ ಜಿಲ್ಲೆಯಾದ್ಯಂತ ಒಟ್ಟಾರೆ 10 ಮಿಮೀ ಮಳೆ ಬಿದ್ದಿದ್ದರೆ ಮಂಗಳವಾರ ಬೆಳಗಿನ ಜಾವ ಜಿಲ್ಲೆಯಾದ್ಯಂತ 19 ಮಿಮೀ ಮಳೆಯಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮಳೆ ಆಗಿರುವುದು ನೆಮ್ಮದಿ ತರುವಂತಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಮಳೆ ಸುರಿದಿರುವುದು ವಿಶೇಷವಾಗಿದೆ. 46 ಡಿಗ್ರಿ ಸೆಲ್ಸಿಯಸ್ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಈ ಮಳೆ ತಂಪೆರೆದಿದೆ. ಮುಂಗಾರು ಬಿತ್ತನೆಗೆ ಹದ ಮಾಡಿಟ್ಟಿದ್ದ ಭೂಮಿ ಮೆತ್ತಗಾಗುವಂತಾಗಿದೆ.
ಮಂಗಳವಾರ ಅಫಜಲಪುರ ತಾಲೂಕಿನಲ್ಲಿ 5 ಮಿಮೀ, ಆಳಂದ ತಾಲೂಕಿನಲ್ಲಿ 18 ಮಿಮೀ, ಚಿಂಚೋಳಿ ತಾಲೂಕಿನಲ್ಲಿ 15 ಮಿಮೀ, ಚಿತ್ತಾಪುರ ತಾಲೂಕಿನಲ್ಲಿ 32 ಮಿಮೀ, ಕಲಬುರಗಿ ತಾಲೂಕಿನಲ್ಲಿ 26 ಮಿಮೀ, ಜೇವರ್ಗಿ ತಾಲೂಕಿನಲ್ಲಿ 13 ಮಿಮೀ ಹಾಗೂ ಸೇಡಂ ತಾಲೂಕಿನಲ್ಲಿ 22 ಮಿಮೀ ಮಳೆಯಾಗಿದೆ. ಒಟ್ಟಾರೆ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ಸೋಮವಾರ ಬೆಳಗಿನ ಜಾವ ಅಫಜಲಪುರ ತಾಲೂಕಿನಲ್ಲಿ 11 ಮಿಮೀ, ಆಳಂದ ತಾಲೂಕಿನಲ್ಲಿ 5 ಮಿಮೀ, ಚಿಂಚೋಳಿ ತಾಲೂಕಿನಲ್ಲಿ 6 ಮಿಮೀ, ಚಿತ್ತಾಪುರ ತಾಲೂಕಿನಲ್ಲಿ 10 ಮಿಮೀ, ಕಲಬುರಗಿ ತಾಲೂಕಿನಲ್ಲಿ 14 ಮಿಮೀ, ಜೇವರ್ಗಿ ತಾಲೂಕಿನಲ್ಲಿ 13 ಮಿಮೀ ಹಾಗೂ ಸೇಡಂ ತಾಲೂಕಿನಲ್ಲಿ 11 ಮಿಮೀ ಮಳೆಯಾಗಿತ್ತು. ಅಲ್ಲಲ್ಲಿ ಮಳೆಯಿಂದ ಗಿಡಮರಗಳು ನೆಲಕ್ಕುರುಳಿವೆ. ಆದರೆ ಯಾವುದೇ ಜೀವ ಹಾನಿ ಸಂಭವಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ