ಕೊರೊನಾ ಭೀತಿಯಲೂ ಕೊರೊನಾ ಭೀತಿಯಲ್ಲೂ ಬಣ್ಣ ದಾಟ…


Team Udayavani, Mar 11, 2020, 10:37 AM IST

11-March-1

ಕಲಬುರಗಿ: ವಿಶ್ವವ್ಯಾಪಿ ಕಾಡುತ್ತಿರುವ ಕೊರೊನೊ ವೈರಸ್‌ ಭೀತಿ ನಡುವೆ ಹೊಳಿ ಹಬ್ಬವನ್ನು ಮಂಗಳವಾರ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಬೆಳಗ್ಗೆಯಿಂದಲೇ ಚಿಣ್ಣರು, ಯುವಕ-ಯುವತಿಯರು, ಮಹಿಳೆಯರು ವಿವಿಧ ಬಗೆಯ ಬಣ್ಣಗಳನ್ನು ಪರಸ್ಪರ ಎರಚಿಕೊಂಡು ಸಂಭ್ರಮಿಸಿದರು. ಹಳ್ಳಿಗಳಲ್ಲದೇ ಮಹಾನಗರದ ಪ್ರತಿ ಬಡಾವಣೆಯ ಬೀದಿಗಳಲ್ಲೂ ಜನತೆ ಮುಖ ಮತ್ತು ಮೈಗೆ ಬಣ್ಣ ಬಳಿದುಕೊಂಡು ರಂಗಿನಾಟ ಆಡಿದರು.

ಹೋಳಿ ಹುಣ್ಣಿಮೆ ದಿನವಾದ ಸೋಮವಾರದಿಂದಲೇ ಜಿಲ್ಲೆಯಲ್ಲಿ ಬಣ್ಣದಾಟ ಆರಂಭಿಸಲಾಗಿತ್ತು. ಕೆಲವು ಕಡೆಗಳಲ್ಲಿ ಸೋಮವಾರ ರಾತ್ರಿ ಕಾಮದಹನ ಮಾಡಲಾಯಿತು. ಮಂಗಳವಾರ ಬೆಳಗ್ಗೆಯಿಂದ ಬಣ್ಣದಾಟ ಮತ್ತಷ್ಟು ರಂಗೇರಿತ್ತು. ನಗರದಾದ್ಯಂತ ಎಲ್ಲಿ ನೋಡಿದರೂ ಬಣ್ಣದೋಕುಳಿಯ ಚಿತ್ತಾರ ಮೂಡಿತ್ತು. ಪ್ರತಿ ಬೀದಿ, ರಸ್ತೆಗಳಲ್ಲಿ ಚೆಲ್ಲಿದ ಬಣ್ಣವೇ ಚೆಲ್ಲಾಟವೇ ಕಾಣುತ್ತಿತ್ತು.

ಮಕ್ಕಳು, ಯುವಕರು, ಯುವತಿಯರು ಸೇರಿದಂತೆ ಎಲ್ಲ ವಯಸ್ಸಿನವರು ಬಣ್ಣಗಳನ್ನು ಪರಸ್ಪರ ಎರಚಿ ಹೋಳಿ ಆಚರಿಸಿದರು. ಯುವಕರು ಮಾತ್ರವಲ್ಲದೇ ಗಲ್ಲಿ-ಗಲ್ಲಿಗಳಲ್ಲಿ ಮಹಿಳೆಯರು ಗುಂಪು ಕಟ್ಟಿಕೊಂಡು ಬಣ್ಣದಾಟದಲ್ಲಿ ಉತ್ಸಾಹದಿಂದ ತೊಡಗಿರುವುದು ಕಂಡು ಬಂತು. ಬ್ಯಾರೆಲ್‌ಗ‌ಳಲ್ಲಿ ಬಣ್ಣದ ನೀರು ತುಂಬಿ ಬಕೆಟ್‌ಗಳಿಂದ ಎತ್ತಿ ಪರಸ್ಪರ ಸುರಿದುಕೊಂಡು ಸಂಭ್ರಮಿಸಿದ್ದು ವಿಶೇಷವಾಗಿತ್ತು.

ಯುವಕರು ಒಬ್ಬರಿಗೊಬ್ಬರ ಮೇಲೆ ಎರಚಾಟದಲ್ಲಿ ತೊಡಗಿದ್ದರೆ, ಮಕ್ಕಳು ಪಿಚಕಾರಿ, ಬಾಟಲಿಗಳಲ್ಲಿ ತುಂಬಿಕೊಂಡು ಬಣ್ಣದಲ್ಲಿ ಮಿಂದೆದ್ದರು. ಯುವತಿಯರು ತಾವೂ ಯಾರಿಗೂ ಕಮ್ಮಿ ಇಲ್ಲವೆಂಬಂತೆ ರಸ್ತೆಯಲ್ಲಿ ಬಣ್ಣ ಬಳಿದುಕೊಂಡು ಸಂತಸ ಪಟ್ಟರು.

ಶಾಂತಿನಗರ, ವಡ್ಡರಗಲ್ಲಿ, ಬ್ರಹ್ಮಪುರ ಬಡಾವಣೆ, ಗಂಗಾನಗರ, ಆಳಂದ ನಾಕಾ ರಸ್ತೆ, ಕೋಟೆ ಪ್ರದೇಶ, ಸೂಪರ್‌ ಮಾರ್ಕೆಟ್‌, ಕೋಟೆ ವೆಂಕಟೇಶ ನಗರ, ಗೋವಾ ಹೋಟೆಲ್‌, ಆನಂದ ಹೋಟೆಲ್‌, ಮಹಾವೀರ ನಗರ, ಲಾಲಗೇರಿ ಕ್ರಾಸ್‌, ಶಹಾಬಜಾರ, ಸುಂದರ ನಗರ, ಜಗತ್‌ ವೃತ್ತ, ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತ ಸೇರಿದಂತೆ ನಗರದ ತುಂಬೆಲ್ಲ ರಂಗಿನಾಟ ಜೋರಾಗಿತ್ತು.

ಸೂಪರ್‌ ಮಾರ್ಕೆಟ್‌ನ ಚೌಕ್‌ಯಲ್ಲಿ ಯುವಕರು ಗುಂಪು ಧ್ವನಿವರ್ಧಕಗಳನ್ನು ಹಚ್ಚಿ ಕುಣಿದು ಕುಪ್ಪಳಿಸಿದರು. ಹಲವೆಡೆ ಮೊಸರಿನ ಗಡಿಗೆ ಕಟ್ಟಿ ಅದನ್ನು ಯುವಕರು ಒಬ್ಬರ ಮೇಲೆ ಒಬ್ಬರು ನಿಂತು ಹರಸಾಹಸ ಪಟ್ಟು ಒಡೆದು ಸಂಭ್ರಮಿಸಿದರು.

ಜತೆಗೆ ಪ್ರಮುಖ ರಸ್ತೆಗಳಲ್ಲಿ ನಿಂತು ಯುವಕರು ಬಣ್ಣವನ್ನು ಮೈಮೇಲೆ ಹಾಕಲು ಕಾಯ್ದುಕುಳಿತಿದ್ದರು. ಅನೇಕ ಕಡೆಗಳಲ್ಲಿ ವಾಹನ ಸವಾರರು, ಪಾದಚಾರಿಗಳು ಬಣ್ಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದರೂ ಮಕ್ಕಳು, ಯುವಕರು ಓಡೋಡಿ ಬಣ್ಣ ಎರಚಿದರು.

ಬಿಗಿ ಬಂದೋಬಸ್ತ್: ಹೋಳಿ ಆಚರಣೆಯಿಂದಾಗಿ  ಗರದಾದ್ಯಂತಹ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ಅಹಿತರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು, ಸಿಐಎಸ್‌ಎಫ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಅಡ್ಡಾ-ದಿಡ್ಡಿ ಬೈಕ್‌ ಓಡಾಟ ತಡೆಯಲು ರಸ್ತೆಗಳ ಮಧ್ಯೆ ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು.

ನಗರ ಸ್ತಬ್ದ: ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ಇಡೀ ನಗರ ಸ್ತಬ್ದವಾಗಿತ್ತು. ಅಂಗಡಿ-ಮುಗಟ್ಟುಗಳು, ಹೋಟೆಲ್‌, ಮಾಲ್‌ ಗಳು ಮುಚ್ಚಿದ್ದರಿಂದ ಸ್ವಯಃ ಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿತ್ತು. ಬೆಳಗ್ಗೆಯಿಂದ ನಗರ ಸಾರಿಗೆ ಬಸ್‌ಗಳು, ಭಾರಿ ಗಾತ್ರದ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು. ಅಲ್ಲಲ್ಲಿ ಆಟೋಗಳು, ಕಾರುಗಳು, ಬೈಕ್‌ಗಳ ಸಂಚಾರ ಸಾಮಾನ್ಯವಾಗಿತ್ತು. ಸಂಜೆ ವೇಳೆಗೆ ನಗರ ಮತ್ತೆ ಯಥಾ ಸ್ಥಿತಿಗೆ ಮರಳಿತು.

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.