ಕಲಬುರಗಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ: ಜನಜೀವನ ಅಸ್ತವ್ಯಸ್ಥ, ಉತ್ತರಾದಿ ಮಠ ಜಲಾವೃತ
Team Udayavani, Oct 14, 2020, 8:40 AM IST
ಕಲಬುರಗಿ: ಜಿಲ್ಲಾದ್ಯಂತ ವರುಣನ ಆರ್ಭಟ ಜೋರಾಗಿದ್ಧು, ಜನ-ಜೀವನ ಅಸ್ತವ್ಯಸ್ಥವಾಗಿದೆ. ನಗರ ಸೇರಿದಂತೆ ಅನೇಕ ಕಡೆಗಳಲ್ಲಿ ಮನೆಗಳು ಜಲಾವೃತಗೊಂಡು ಜನರು ಪರದಾಡುತ್ತಿದ್ದಾರೆ.
ಮಂಗಳವಾರ ರಾತ್ರಿ ಸುಮಾರು 7 ಗಂಟೆಗೆ ಆರಂಭವಾದ ಮಳೆ ಎಡೆಬಿಡದೆ ಸುರಿಯುತ್ತಿದೆ. ಸೇಡಂ ತಾಲೂಕಿನಲ್ಲಿ ಕಾಗಿಣಾ ನದಿ ಪ್ರವಾಹದಿಂದಾಗಿ ಮಳಖೇಡದ ಉತ್ತರಾದಿ ಮಠ ಸಂಪೂರ್ಣ ಜಲಾವೃತವಾಗಿದೆ. ಜಯತೀರ್ಥರು, ಅಕ್ಷೋಭ್ಯ ತೀರ್ಥರು ಮತ್ತು ರಘುನಾಥ ತೀರ್ಥರ ವೃಂದಾವನಗಳು ಮುಳುಗಡೆಗೊಂಡಿವೆ.
ಇದನ್ನೂ ಓದಿ: ಧಾರಾಕಾರ ಮಳೆ: ಗೋಡೆ ಕುಸಿದ ಪರಿಣಾಮ 9 ಮಂದಿ ದಾರುಣ ಸಾವು
ಅಲ್ಲದೇ, ಮಳಖೇಡ ಸೇತುವೆ, ಕಾಚೂರು, ದಂಡೋತಿ ಸೇತುವೆಗಳು ಮುಳುಗಡೆಯಾಗಿದ್ದು, ಕಲಬುರಗಿ-ಸೇಡಂ, ಕಾಚೂರು-ಸೇಡಂ ರಸ್ತೆ ಸಂಪರ್ಕ ಕಡಿತಗೊಂಡಿದೆ. ಚಿಂಚೋಳಿ ಪಟ್ಟಣದ ಅನೇಕ ಬಡಾವಣೆಗಳು ಸಹ ಜಲಾವೃತವಾಗಿವೆ. ಹರಿಜನವಾಡಾ, ಮೋಮಿನಪುರ ಮತ್ತಿತರ ಬಡಾವಣೆಗಳಿಗೆ ನದಿ ನೀರು ಹೊಕ್ಕು ಮನೆಯಲ್ಲಿದ್ದ ವಸ್ತುಗಳು ಎಲ್ಲ ನೀರು ಪಾಲಾಗಿವೆ.
ಇದನ್ನೂ ಓದಿ: 14 ತಿಂಗಳ ಬಳಿಕ ಗೃಹ ಬಂಧನದಿಂದ ಮೆಹಬೂಬಾ ಮುಫ್ತಿಗೆ ಮುಕ್ತಿ !
ಚಿಂಚೋಳಿ ತಾಲೂಕಿನ ಬೆನಕನಹಳ್ಳಿ ಗ್ರಾಮ ಮಳೆ ನೀರಿನಿಂದ ಆವೃತವಾಗಿದೆ. ಕಾಳಗಿ ತಾಲೂಕಿನ ಹೆಬ್ಬಾಳ ಗ್ರಾಮ ಕೂಡ ಜಲಾವೃತವಾಗಿದೆ. ಇನ್ನು, ಕಲಬುರಗಿ ನಗರದ ಅನೇಕ ಬಡಾವಣೆಗಳು ಸಹ ಜಲಾವೃತವಾಗಿದೆ. ಪೂಜಾ ಕಾಲೋನಿ, ಓಂ ನಗರ ಸೇರಿದಂತೆ ಅನೇಕ ಬಡಾವಣೆಗಳಲ್ಲಿ ಮಳೆ ನೀರು ಮನೆಯೊಳಗೆ ನುಗ್ಗಿದ ಪರಿಣಾಮ ಜನರು ಕಂಗಾಲಾಗಿದ್ದಾರೆ. ಜೇವರ್ಗಿ ಮತ್ತು ಶಹಾಬಾದ್ ಪಟ್ಟಣಗಳಲ್ಲೂ ಮನೆಗಳಿಗೆ ಮಳೆ ನೀರು ನುಗ್ಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್