46 ಅಡಿ ಎತ್ತರದ ಪೆಂಡಾಲ್‌ ನಿರ್ಮಾಣ

ಗಣ್ಯರಿಗೆ ಹವಾನಿಯಂತ್ರಿತ ಕೋಣೆ ನಿರ್ಮಾಣಏಕಕಾಲಕ್ಕೆ 25 ಸಾವಿರ ಜನ ಊಟ ಸೇವಿಸುವ ವ್ಯವಸ್ಥೆ

Team Udayavani, Jan 16, 2020, 10:56 AM IST

16-January-2

ಕಲಬುರಗಿ: 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯನ್ನು ಉತ್ತಮವಾಗಿ, ಬಲವಾಗಿ ನಿರ್ಮಿಸಲು ಯೋಜಿಸಲಾಗಿದ್ದು, ಆರು ಸಾವಿರ ಚದರಡಿ ಮುಖ್ಯ ವೇದಿಕೆ, ಮುಂಭಾಗದಲ್ಲಿ 25 ಸಾವಿರ ಆಸನಗಳ ಸಾಮರ್ಥ್ಯದ ಸುಮಾರು 1.19 ಲಕ್ಷ ಚದರಡಿ ವಿಸ್ತೀರ್ಣ, 46 ಅಡಿ ಎತ್ತರದ ಪೆಂಡಾಲ್‌ ಹಾಕಲು ಭರದ ಸಿದ್ಧತೆ ನಡೆದಿವೆ.

ಮುಖ್ಯವೇದಿಕೆ ಹಿಂಭಾಗದಲ್ಲಿ ಗಣ್ಯರಿಗಾಗಿ ಹವಾನಿ ಯಂತ್ರಿತ (ಎಸಿ) ವಿಶ್ರಾಂತಿ
(ಲಾಂಚ್‌) ಕೋಣೆಗಳನ್ನು ನಿರ್ಮಿಸಲಾಗುತ್ತಿದೆ. ಗುಲಬರ್ಗಾ ವಿಶ್ವ
ವಿದ್ಯಾಲಯ ಆವರಣದ ಪರೀಕ್ಷಾಂಗ ವಿಭಾಗದ ಪಕ್ಕದ ವಿಶಾಲವಾದ 35 ಎಕರೆ ಜಾಗದಲ್ಲಿ ಸಮ್ಮೇಳನದ ಸಂಪೂರ್ಣ ವ್ಯವಸ್ಥೆ ಮಾಡಲಾಗುತ್ತಿದೆ. ಮುಖ್ಯ ವೇದಿಕೆ, ವೇದಿಕೆ ಮುಂಭಾಗದಲ್ಲಿ ಬೃಹತ್‌ ಪೆಂಡಾಲ್‌, ಎಡ ಮತ್ತು ಬಲಕ್ಕೆ ಪುಸ್ತಕ ಮಳಿಗೆ, ವಾಣಿಜ್ಯ ಮಳಿಗೆ, ಊಟದ ಬೃಹತ್‌ ಪೆಂಡಾಲ್‌ ಹಾಕಲಾಗುತ್ತದೆ.

ಬೆಂಗಳೂರಿನ ಉಡುಪ ಸರ್ವೀಸ್‌ ವೇದಿಕೆ ನಿರ್ಮಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ವೇದಿಕೆ ನಿರ್ಮಾಣದ ಸ್ಥಳವನ್ನು ಜೆಸಿಬಿ, ರೋಲರ್‌, ಟ್ರ್ಯಾಕ್ಟರ್‌ ಮೂಲಕ ಸಮತಟ್ಟು ಮಾಡುವ ಕೆಲಸ ಸಮರೋಪಾದಿಯಲ್ಲಿ ಸಾಗಿದೆ. ದಕ್ಷಿಣಾಭಿಮುಖ ವೇದಿಕೆ: ಸಮ್ಮೇಳನದ ವೇದಿಕೆಯನ್ನು ಕುಸನೂರ ರಸ್ತೆಗೆ ದಕ್ಷಿಣಾಭಿಮುಖವಾಗಿ ನಿರ್ಮಿಸಲಾಗುತ್ತಿದೆ. 50×120 (6,000 ಚದರಡಿ)
ಅಡಿಯ ಪ್ರದೇಶದಲ್ಲಿ ಬೃಹತ್‌ ವೇದಿಕೆ ಇರಲಿದ್ದು, ಅನಾಯಾಸವಾಗಿ 100ರಿಂದ 150 ಗಣ್ಯರು ಕುಳಿತುಕೊಳ್ಳಬಹುದಾಗಿದೆ. ವೇದಿಕೆ ಮುಂಭಾಗದಲ್ಲಿ 550×216 (1,18,800 ಚದರಡಿ) ಅಡಿ ವಿಶಾಲವಾದ ಸಾರ್ವನಿಕರಿಗಾಗಿ ಪೆಂಡಾಲ್‌ ಹಾಕಲಾಗುತ್ತದೆ.

ಇದರಲ್ಲಿ 25 ಸಾವಿರ ಕುರ್ಚಿ ಹಾಕಬಹುದಾಗಿದೆ. ಗುಡಿಸಿಲಿನ ಮಾದರಿಯಲ್ಲಿ ಟೆಂಟ್‌ ಇರಲಿದ್ದು, ಗರಿಷ್ಠ ಎತ್ತರ 46 ಅಡಿ ಹಾಗೂ ಅಂತ್ಯದಲ್ಲಿ 20 ಅಡಿ ಎತ್ತರ ಇರಲಿದೆ. ಬಲಕ್ಕೆ ಪುಸ್ತಕ ಮಳಿಗೆ: ಮುಖ್ಯ ವೇದಿಕೆ ಬಲ ಭಾಗಕ್ಕೆ ಪುಸ್ತಕ ಮಳಿಗೆ, ಪ್ರದರ್ಶನ ಟೆಂಟ್‌ ನಿರ್ಮಿಸಲಾಗುತ್ತದೆ. ಇದು ಒಂದು ಲಕ್ಷ ಚದರಡಿ ವಿಸ್ತೀರ್ಣದಲ್ಲಿ ನಿರ್ಮಾಣವಾದರೆ, ಎಡ ಭಾಗಕ್ಕೆ ವಾಣಿಜ್ಯ ಮಳಿಗೆ ಟೆಂಟ್‌ ಹಾಕಲಾಗುತ್ತಿದೆ. ಇದರ ವಿಸ್ತೀರ್ಣ 40 ಸಾವಿರ ಚದರಡಿ ಇರಲಿದೆ. ಪುಸ್ತಕ ಮಳಿಗೆ ಹಿಂಭಾಗದಲ್ಲಿ ಊಟದ ವ್ಯವಸ್ಥೆ ಇರಲಿದೆ.

25000 ಜನರಿಗೆ ಒಟ್ಟಿಗೆ ಊಟ: ಸಮ್ಮೇಳನದಲ್ಲಿ ಊಟಕ್ಕೆ ನೂಕುನುಗ್ಗಲು, ಗದ್ದಲಕ್ಕೆ ಅವಕಾಶ ಮಾಡಿಕೊಡದಂತೆ ಅಚ್ಚುಕಟ್ಟಾಗಿ ನಿರ್ವಹಿಸಲು ಯೋಜಿಸಲಾಗಿದೆ. ಇದಕ್ಕಾಗಿ 100 ಊಟದ ಕೌಂಟರ್‌ ಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ಇದಕ್ಕೆ ಅನುಕೂಲವಾಗುವ ರೀತಿಯಲ್ಲಿ ಊಟದ ವ್ಯವಸ್ಥೆಗೆ ಬೃಹತ್‌ ಪೆಂಡಾಲ್‌ ನಿರ್ಮಿಸಲಾಗುತ್ತದೆ. ಇದರಲ್ಲಿ ಏಕಕಾಲಕ್ಕೆ ಬರೋಬ್ಬರಿ 25 ಸಾವಿರ ಜನರು ಊಟ ಮಾಡಬಹುದಾಗಿದೆ. ಆವರಣದಲ್ಲಿ ಸಾಕಷ್ಟು ಗಿಡಗಳಿದ್ದು, ಅವುಗಳಿಗೆ ಧಕ್ಕೆ ಮಾಡದಂತೆ ನೋಡಿಕೊಳ್ಳಲು ಎಲ್ಲ ಪೆಂಡಾಲ್‌ಗ‌ಳನ್ನು ಎತ್ತರದಲ್ಲಿ ನಿರ್ಮಿಸಲಾಗುತ್ತಿದೆ.

„ರಂಗಪ್ಪ ಗಧಾರ

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.