![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕೋವಿಡ್ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ:ಪ್ರಿಯಾಂಕ್
Team Udayavani, Jun 3, 2020, 2:45 PM IST
![03-June-22](https://www.udayavani.com/wp-content/uploads/2020/06/03-June-22-572x465.gif)
ಕಲಬುರಗಿ: ಮಹಾಮಾರಿ ಕೋವಿಡ್ ವೈರಸ್ ತಡೆಗಟ್ಟುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಮಾಲೋಚನೆ ನಡೆಸದೇ ಯಾರದ್ದೇ ಅಭಿಪ್ರಾಯ ಪಡೆಯದೇ ತೆಗೆದುಕೊಂಡ ನಿರ್ಧಾರಗಳೇ ಕಾರಣವಾಗಿವೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಸರಕಾರ ಯಾವುದೇ ತಜ್ಞರ, ಪ್ರಮುಖರ ಅಭಿಪ್ರಾಯ ಪಡೆಯದೇ ಏಕ ಪಕ್ಷೀಯವಾಗಿ ನಿರ್ಧಾರ ಕೈಗೊಂಡಿರುವುದೇ ಕಾರಣವಾಗಿದೆ ಎಂದು ಆರೋಪಿಸಿದರು. ಯಾವುದೇ ನಿಟ್ಟಿನಲ್ಲಿ ಚರ್ಚಿಸದೇ ನೋಟು ಅಮಾನ್ಯೀಕರಣ, ಜಿಎಸ್ಟಿ ಜಾರಿಗೆ ತಂದಿರುವುದರಿಂದ ಎದುರಾದ ಪರಿಸ್ಥಿತಿ ಅರಿವಿದ್ದರೂ ಕೋವಿಡ್ ನಂತಹ ವೈರಸ್ ತಡೆಗಟ್ಟುವಲ್ಲಿ ಸಹ ಹುಡುಗಾಟದಂತೆ ನಡೆದುಕೊಂಡಿರುವ ಪರಿಣಾಮ ಪರಿಸ್ಥಿತಿ ಕೈ ಮೀರಿದೆ. ಈಗಲಾದರೂ ಎಚ್ಚೆತ್ತು ಬರೀ ಮಾತನಾಡದೇ ಪರಿಣಾಮಕಾರಿ ಕ್ರಮಕ್ಕೆ ಮುಂದಾಗಬೇಕು ಎಂದರು.
ಪ್ರಧಾನಿಯವರು ಆಗೊಮ್ಮೆ- ಈಗೊಮ್ಮೆ ಟಿವಿಯಲ್ಲಿ ಬಂದು ಪ್ರವಚನ ನೀಡುತ್ತಾರೆ. ಯಾರೊಂದಿಗೆ ಸಮಾಲೋಚನೆ ನಡೆಸದೇ ಏನೇನೋ ಹೇಳುತ್ತಾರೆ. ತದನಂತರ ಎಲ್ಲ ಅಧಿಕಾರ ರಾಜ್ಯಗಳಿಗೆ ಬಿಟ್ಟು ಬಿಡುತ್ತಾರೆ. ಈತ್ತ ರಾಜ್ಯದಲ್ಲಿ ಮುಂಜಾನೆ ಒಂದು ನಿರ್ಧಾರ, ಸಂಜೆ ಮತ್ತೂಂದರ ಕುರಿತಾಗಿ ಆದೇಶ ಹೊರಡಿಸಲಾಗುತ್ತದೆ. ಹೀಗಾಗಿ ಅಧಿ ಕಾರಿಗಳು ಗೊಂದಲದಲ್ಲಿ ಮುಳುಗಿದ್ದಾರೆ. ಒಟ್ಟಾರೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ಕೊರೊನಾ ನಿಯಂತ್ರಣ ಕ್ಕೆ ಬಾರದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಪತ್ರಕ್ಕೆ ಉತ್ತರವಿಲ್ಲ: ಕಾರ್ಮಿಕರನ್ನು ಮಾರ್ಚ್ ತಿಂಗಳಲ್ಲೇ ಕರೆದುಕೊಂಡು ಬರುವಂತೆ ಪತ್ರ ಬರೆಯಲಾಗಿತ್ತು. ಅದೇ ರೀತಿ ಕೋವಿಡ್ ಹೊರತಾಗಿ ಇತರ ರೋಗಗಳಿಂದ ಕಲಬುರಗಿ ಜಿಲ್ಲೆಯಲ್ಲಿ ಎಷ್ಟು ಜನರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಕೇಳಿ ಬರೆಯಲಾದ ಮಾಹಿತಿಗೂ ಜಿಲ್ಲಾಡಳಿತದಿಂದ ಉತ್ತರ ಬಂದಿಲ್ಲ. ಬಹುಶ: ತಮಗೆ ಉತ್ತರ ನೀಡದಿರುವಂತೆ ಸರ್ಕಾರ ನಿರ್ದೇಶನ ನೀಡಿರಬಹುದು ಎಂದು ಖರ್ಗೆ ವ್ಯಂಗ್ಯವಾಡಿದರು.
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ಯುವ ಘಟಕದ ಅಧ್ಯಕ್ಷ ಈರಣ್ಣ ಝಳಕಿ, ಮುಖಂಡರಾದ ಡಾ. ಕಿರಣ ದೇಶಮುಖ, ಸುಭಾಷ ರಾಠೊಡ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![13-sedam](https://www.udayavani.com/wp-content/uploads/2024/07/13-sedam-150x90.jpg)
Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ
![1-sci](https://www.udayavani.com/wp-content/uploads/2024/07/1-sci-150x91.jpg)
Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ
![ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು](https://www.udayavani.com/wp-content/uploads/2024/07/chikk1-150x83.jpg)
Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು
![Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ](https://www.udayavani.com/wp-content/uploads/2024/07/chittapura-1-150x84.jpg)
Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
![Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ](https://www.udayavani.com/wp-content/uploads/2024/07/chittapura-150x94.jpg)
Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.