ಕನ್ನಡ ಸಾಹಿತ್ಯದಲ್ಲಿ ತತ್ವ ಪದ-ವಚನ ಅಡಕ

ತತ್ವ ಪದ-ವಚನಗಳಿಗೆ ಗುರುವೇ ಮಾರ್ಗದರ್ಶಿಶಿಕ್ಷಣದಿಂದ ದೂರ ಉಳಿಸುವ ಹುನ್ನಾರ

Team Udayavani, Jan 18, 2020, 10:55 AM IST

18-January-2

ಕಲಬುರಗಿ: ತತ್ವಪದಗಳು ಕನ್ನಡ ಸಾಹಿತ್ಯದಲ್ಲಿ ಆಳ ಹಾಗೂ ಅಗಲವಾಗಿರುವಷ್ಟು ಬೇರ್ಯಾವುದೇ ಭಾಷೆಯ ಸಾಹಿತ್ಯದಲ್ಲಿ ವಿಸ್ತಾರವಾಗಿ ವ್ಯಾಪಿಸಿಕೊಂಡಿಲ್ಲ ಎಂದು ಚಿಂತಕ ತುಮಕೂರಿನ ನಟರಾಜ ಬೂದಾಳು ಹೇಳಿದರು.

ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ವಿಜಿ ಮಹಿಳಾ ಕಾಲೇಜು, ಗುವಿವಿ, ಸಿಯುಕೆ ಜತೆಗೂಡಿ ನಗರದ ಪಿಡಿಎ ಕಾಲೇಜಿನ ಆವರಣದಲ್ಲಿರುವ ಸ್ಯಾಕ್‌ ಸಭಾಂಗಣದಲ್ಲಿ ಆಯೋಜಿಸಿರುವ “ಕನ್ನಡ ತತ್ವಪದ ಸಾಹಿತ್ಯ-ಅವಲೋಕನ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಮುಖ್ಯ ಅತಿಥಿಯಾಗಿ ಅವರು ಆಶಯ ಭಾಷಣ ಮಾಡಿದರು.

ಗ್ರಾಮೀಣ ಭಾಷೆಯಾಗಿರುವ ತತ್ವಪದದ ನಿಜಶಕ್ತಿಯನ್ನು ಹೊಸಕಿ ಹಾಕುವ ಹುನ್ನಾರ ಆರಂಭದಿಂದಲೂ ಮಾಡಿಕೊಂಡು ಬರಲಾಗುತ್ತಿದೆ. ಅದರ ಪರಿಣಾಮವಾಗಿಯೇ ತತ್ವಪದ, ಏಕತಾರಿ, ವಚನಗಳು ಶಿಕ್ಷಣದಿಂದ ಹೊರಗುಳಿದಿದ್ದವು. ಈಗ ಹೊಸ್ತಿಲೊಳಗೆ ಕರೆಯಲು ಆರಂಭಿಸಿರುವುದು ಮಾದರಿ ಕೆಲಸವಾಗಿದೆ ಎಂದರು.

ತತ್ವಪದ, ವಚನಗಳು ಮೊದಲಾದವು ದೈವಿ ಮಾರ್ಗವಲ್ಲ, ಅವು ಗುರು ಮಾರ್ಗಿ ಎಂದ ಅವರು, ಚಿನ್ನದ ನಾಣ್ಯಗಳಿಂದ ತುಂಬಿರುವ ಹಳೆಯ ಪೆಟ್ಟಿಗೆ ಮೇಲೆ ಕುಳಿತುಕೊಂಡು ಭಿಕ್ಷೆ ಬೇಡುವ ಸ್ಥಿತಿ ನಿರ್ಮಾಣವಾಗಿದೆ. ಒಮ್ಮೆ ಪೆಟ್ಟಿಗೆ ತೆಗೆದು ನೋಡಿದರೆ ಅದರಲ್ಲಿ ಚಿನ್ನದ ನಾಣ್ಯಗಳಿರುವುದು ಗೊತ್ತಾಗುತ್ತದೆ ಎಂದು ಹೇಳಿದರು.

ಸಿಯುಕೆ ಸಮಕುಲಪತಿ ಡಾ| ಜಿ.ಆರ್‌.ನಾಯಕ ಉದ್ಘಾಟಿಸಿದರು. ಎಚ್‌ಕೆಇ ಆಡಳಿತ ಮಂಡಳಿ ಸದಸ್ಯ ನಿತೀನ್‌ ಬಿ.ಜವಳಿ ಅಧ್ಯಕ್ಷತೆ ವಹಿಸಿದ್ದರು. ಗುವಿವಿ ಕುಲಪತಿ ಡಾ| ದೇವಿದಾಸ ಮಾಲೆ, ಸಾಹಿತಿ ಡಾ| ಕೆ. ಷರೀಫಾ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಜಿ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ| ಮೀನಾಕ್ಷಿ ಬಾಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಚ್‌ಕೆಇ ಆಡಳಿತ ಮಂಡಳಿ ಸದಸ್ಯ ಡಾ.ವೀರಭದ್ರಪ್ಪ ನಂದ್ಯಾಳ, ಸತೀಶಚಂದ್ರ ಹಡಗಲಿಮಠ, ಸಿಯುಕೆ ರಜಿಸ್ಟಾರ್‌ ಮುಕ್ತಾಕ ಪಟೇಲ್‌ ಅಹ್ಮದ್‌, ವಿಜಿ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ| ರಾಜೇಂದ್ರ ಕೊಂಡಾ, ಉಪ ಪ್ರಾಚಾರ್ಯ ವೀಣಾ ಹೊನಗುಂಟಿಕರ್‌, ಗುವಿವಿ ಕನ್ನಡ ಅಧ್ಯಯನ ಸಂಸ್ಥೆ ಡೀನ್‌ ಡಾ| ಎಚ್‌.ಟಿ. ಪೋತೆ, ಸಿಯುಕೆ ಕನ್ನಡ ವಿಭಾಗ ಮುಖ್ಯಸ್ಥ ಡಾ| ವಿಕ್ರಮ ವಿಸಾಜಿ, ತತ್ವಪದ ಹಾಡುಗಾರ ನಾಗಪ್ಪ ಪಂಚಾಳ, ಡಾ| ಮೀನಾಕ್ಷಿ ಬಾಳಿ ಹಾಜರಿದ್ದರು. ಡಾ| ನಾಗೇಂದ್ರ ಮಸೂತಿ, ಡಾ| ಶಾಂತಾ ಮಠ ನಿರೂಪಿಸಿದರು.

ಕೆ.ನೀಲಾ, ಕಾಶೀನಾಥ ಅಂಬಲಗಿ, ಪ್ರಭು ಖಾನಾಪುರ, ಆರ್‌.ಕೆ.ಹುಡಗಿ, ಡಾ| ಈಶ್ವರಯ್ಯ ಮಠ, ಶಾಂತಾ ಭೀಮಸೇನರಾವ್‌, ಡಾ| ಉಮಾ ರೇವೂರ, ಡಾ| ವಿಜಯಕುಮಾರ ಪರೂತೆ, ಡಾ| ನಾಗೇಂದ್ರಪ್ಪ ಮಸೂತಿ, ಡಾ| ಶ್ರೀಶೈಲ ನಾಗರಾಳ, ಡಾ| ಶಾಂತಾ ಮಠ, ಡಾ| ರೇಣುಕಾ, ಕೋದಂಡರಾಮ, ಪವಿತ್ರಾ ವಸ್ತ್ರದ, ಮಹೇಶ ಗವ್ಹಾಂರ ಮುಂತಾದವರಿದ್ದರು.

ನಂತರ ನಡೆದ ಗೋಷ್ಠಿಗಳಲ್ಲಿ ಕೇರಳದ ಶಿವರಾಮ ಶೆಟ್ಟಿ, ಕಲಬುರಗಿಯ ಡಾ| ಕಲ್ಯಾಣರಾವ್‌ ಪಾಟೀಲ, ಬೆಳಗಾವಿಯ ವೈ.ಬಿ. ಹಿಮ್ಮಡಿ, ಹಂಪಿಯ ರೆಹಮತ್‌ ತರೀಕೆರೆ, ಸೊಲ್ಲಾಪುರದ ಗುರುಲಿಂಗಪ್ಪ ದಬಾಲೆ, ದಾವಣಗೆರೆಯ ಮಲ್ಲಿಕಾರ್ಜುನ ಕಡಕೋಳ ವಿಷಯ ಮಂಡಿಸಿದರು.

ದೇಶ ಸದ್ಯ ಆತಂಕದ ಸ್ಥಿತಿಯಲ್ಲಿದೆ. ಇಂತಹ ಸಂದರ್ಭಗಳಿಗೆ ಸೂಕ್ತ
ಔಷಧ ಸಿಗುವುದು ತತ್ವಪದಗಳು ಮತ್ತು ವಚನಗಳಿಂದ ಮಾತ್ರ. ತತ್ವಪದಗಳು ನಮ್ಮನ್ನು ನಾವು ಅರಿತುಕೊಳ್ಳುವ ಮಾರ್ಗವನ್ನು ತೋರಿಸುವ ಶಕ್ತಿ ಹೊಂದಿವೆ. ನಾನು ಯಾರು ಎನ್ನುವುದರ ಆಸ್ಮಿತೆಯನ್ನು ತತ್ವಪದ ತೋರಿಸುತ್ತದೆ.
ನಟರಾಜ ಬೂದಾಳು,
ಚಿಂತಕ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.