ನಗರ ಸೌಂದರ್ಯೀಕರಣಕ್ಕೆ ಚಾಲನೆ
ಗೋಡೆಗಳ ಮೇಲೆ ಸಮ್ಮೇಳನ ಲಾಂಛನ ವಿದ್ಯಾರ್ಥಿಗಳಿಂದ ಪ್ರಚಾರ
Team Udayavani, Jan 24, 2020, 10:52 AM IST
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆ. 5, 6 ಮತ್ತು 7ರಂದು ನಡೆಯುತ್ತಿರುವ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ನಗರವನ್ನು
ಸಿಂಗರಿಸಲಾಗುತ್ತಿದೆ ಮತ್ತು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಲಾಗುತ್ತಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ರಾಹುಲ್ ತುಕಾರಾಂ ಪಾಂಡ್ವೆ ಹೇಳಿದರು.
ನಗರದ ಕನ್ನಡ ಭವನದಲ್ಲಿ 85ನೇ ಅಖೀಲ ಭಾರತ ಕನ್ನಡ
ಸಾಹಿತ್ಯ ಸಮ್ಮೇಳನದ ಅಲಂಕಾರ ಸಮಿತಿಯಿಂದ ಹಮ್ಮಿಕೊಂಡಿದ್ದ ನಗರ
ಸೌಂದಯೀìಕರಣ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಗತ್ ವೃತ್ತದ ವರೆಗೆ ಹಾಗೂ ಅನ್ನಪೂರ್ಣ ಕ್ರಾಸ್ನಿಂದ ಗುಲಬರ್ಗಾ ವಿಶ್ವವಿದ್ಯಾಲಯ, ಕೇಂದ್ರ ಬಸ್ ನಿಲ್ದಾಣದಲ್ಲಿರುವ ಸರ್ಕಾರಿ ಕಟ್ಟಡಗಳ ಆವರಣ ಗೋಡೆಗಳ ಮೇಲೆ ಸಮ್ಮೇಳನದ ಲಾಂಛನ ಹಾಗೂ ವಿವಿಧ
ಆಕರ್ಷಕ ಚಿತ್ರಗಳನ್ನು ಬಿಡಿಸಲಾಗುತ್ತದೆ ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಪರಿಸರ ಅಭಿಯಂತರ ಮುನಾಫ್ ಪಟೇಲ್ ಮಾತನಾಡಿ, ನಗರ ಸೌಂದರ್ಯೀಕರಣಕ್ಕೆ ಖಾಸಗಿ ಸಂಸ್ಥೆಯವರಾದ ಶಿರಶಿಮೆ ಅವರು ಗೋಡೆ ಬರಹ ಬರೆಯುವ ಮೂಲಕ ಸಾಹಿತ್ಯ ಸಮ್ಮೇಳನಕ್ಕೆ ಉಚಿತ ಸೇವೆ ನೀಡಲು ಮುಂದೆ ಬಂದಿದ್ದಾರೆ ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ, ಅಲಂಕಾರ ಸಮಿತಿಯ ಸದಸ್ಯರು, ಮಹಾನಗರ ಪಾಲಿಕೆ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ