ಆರೋಗ್ಯ ಸಿಬ್ಬಂದಿ ಸೇವೆ ದೇಶಕ್ಕೆ ಹೆಮ್ಮೆ

ಕೋವಿಡ್‌ ಸೊಂಕಿನಿಂದ ರೋಗಿ ಗುಣಮುಖವಾಗಿ ಹೊರಹೋಗುವ ಕ್ಷಣವೇ ಶುಶ್ರೂಷಕರಿಗೆ ಸಂತಸ

Team Udayavani, May 13, 2020, 10:38 AM IST

12-May-01

ಕಲಬುರಗಿ: ಇಎಸ್‌ಐಸಿ ಆಸ್ಪತ್ರೆಯಲ್ಲಿ ಫ್ಲಾರೆನ್ಸ್‌ ನೈಟಿಂಗೇಲ್‌ ಜನ್ಮದಿನದ ಅಂಗವಾಗಿ ನಡೆದ ವಿಶ್ವ ಶುಶ್ರೂಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಬಿ. ಶರತ್‌ ಹಾಗೂ ಇತರರು ಭಾಗವಹಿಸಿದ್ದರು.

ಕಲಬುರಗಿ: ಮಹಾಮಾರಿ ಕೋವಿಡ್ ವಿರುದ್ಧ ಹೋರಾಟದಲ್ಲಿರುವ ಶುಶ್ರೂಷಾಧಿಕಾರಿಗಳು ಸೇರಿದಂತೆ ವೈದ್ಯ ಮತ್ತು ಆರೋಗ್ಯ ಸಿಬ್ಬಂದಿ ನಿಸ್ವಾರ್ಥ ಸೇವೆ ಕಂಡು ದೇಶ ಹೆಮ್ಮೆಪಡುತ್ತಿದೆ ಎಂದು ಜಿಲ್ಲಾಧಿಕಾರಿ ಶರತ್‌ ಬಿ. ಶ್ಲಾಘಿ ಸಿದರು.

ನಗರದ ಇಎಸ್‌ಐಸಿ ಆಸ್ಪತ್ರೆಯಲ್ಲಿ ಮಹಾಮಾತೆ ಫ್ಲಾರೆನ್ಸ್‌ ನೈಟಿಂಗೇಲ್‌ ಅವರ ಜನ್ಮ ದಿನದ ಅಂಗವಾಗಿ ಮಂಗಳವಾರ ಆಯೋಜಿಸಲಾಗಿದ್ದ ವಿಶ್ವ ಶುಶ್ರೂಷಕರ ದಿನಾಚರಣೆಯಲ್ಲಿ ಮಹಾಮಾತೆ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದ ನಂತರ ಅವರು ಮಾತನಾಡಿದರು.

ಆರೋಗ್ಯ ಸಿಬ್ಬಂದಿಯಿಂದಲೇ ಮಹಾಮಾರಿ ಕೋವಿಡ್‌-19 ವಿರುದ್ಧದ ನಮ್ಮ ಹೋರಾಟ ನಿರಂತರ ಸಾಗಿದೆ. ಶುಶ್ರೂಷಾಧಿಕಾರಿಗಳು ನಮ್ಮನ್ನು ಬದುಕಿಸುವವರಾಗಿದ್ದಾರೆ ಎಂಬುದನ್ನು ಯಾರು ಮರೆಯುವಂತಿಲ್ಲ. ಇಂದಿನ ಪರಿಸ್ಥಿತಿ ಅವಲೋಕಿಸಿ ಹೇಳುವುದಾದರೆ ಕೋವಿಡ್‌ ಸೊಂಕಿನಿಂದ ಗುಣಮುಖರಾಗಿ ರೋಗಿ ಆಸ್ಪತ್ರೆಯಿಂದ ಹೊರಗಡೆ ಹೆಜ್ಜೆ ಇಡುವ ಕ್ಷಣವಿದೆಯಲ್ಲ ಅದುವೇ ಶುಶ್ರೂಷಕರಿಗೆ ಹೆಚ್ಚಿನ ಸಂತಸದ ಕ್ಷಣವಾಗಿದೆ ಎಂದು ನರ್ಸಿಂಗ್‌ ಸಿಬ್ಬಂದಿ ಸೇವೆ ಕೊಂಡಾಡಿದರು.

ಇಎಸ್‌ಐಸಿ ಮೆಡಿಕಲ್‌ ಕಾಲೇಜಿನ ಡೀನ್‌ ಡಾ| ಎ.ಎಲ್‌. ನಾಗರಾಜು ಮಾತನಾಡಿ, ಕೊರೊನಾ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವ ಕಳೆದಕೊಂಡ ವೈದ್ಯ ಸಿಬ್ಬಂದಿ ಸೇವೆ ನೆನೆದರು. ಸಾಂಕ್ರಾಮಿಕ ಸೊಂಕಿನ ನಿಯಂತ್ರಣದಲ್ಲಿ ಜಿಲ್ಲಾಡಳಿತದ ನಿರ್ದೆಶನ ಪಾಲಿಸುತ್ತ ಇಎಸ್‌ಐಸಿ ತನ್ನನ್ನು ತಾನು ಸಂಪೂರ್ಣವಾಗಿ ತೊಡಗಿಸಿಕೊಂಡಿದೆ ಎಂದು ಹೇಳಿದರು.

ವೈದ್ಯರಿಗೆ ಹೂವಿನ ಸುರಿಮಳೆ: ಇದೇ ಸಂದರ್ಭದಲ್ಲಿ ಕೋವಿಡ್‌-19 ವಿರುದ್ಧ ಹೋರಾಟದಲ್ಲಿರುವ ಇಎಸ್‌ಐಸಿ ಮೆಡಿಕಲ್‌ ಕಾಲೇಜಿನ ಡೀನ್‌ ಡಾ| ಎ.ಎಲ್‌. ನಾಗರಾಜು, ವೈದ್ಯಕೀಯ ಅಧೀಕ್ಷಕ ಡಾ| ಎಸ್‌.ಕೆ. ಚೌಧರಿ, ಕೋವಿಡ್‌-19 ವಾರ್ಡ್‌ನ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳುತ್ತಿರುವ ಡಾ| ಲೋಬೊ, ಸಮುದಾಯ ಮೆಡಿಸಿನ್‌ ವಿಭಾಗದ ಡಾ| ಸ್ವಾತಿ, ಡಿವೈನ್‌ ನರ್ಸಿಂಗ್‌ ಕಾಲೇಜಿನ ಪ್ರಾಂಶುಪಾಲ ಡಾ| ಕಿರಣ, ಡಾ| ಎಲಿಜಾಬೆತ್‌ ಸೇರಿದಂತೆ ಇಎಸ್‌ಐಸಿ ಆಸ್ಪತ್ರೆ ವಿವಿಧ ವಿಭಾಗದ ವೈದ್ಯರನ್ನು ಡಿಸಿ ಶರತ್‌ ಬಿ. ಸನ್ಮಾನಿಸಿದರು. ಮೇಲಿಂದ ವಿದ್ಯಾರ್ಥಿಗಳು ವೈದ್ಯರಿಗೆ ಹೂವಿನ ಸುರಿಮಳೆಗೈದರು.

ಕೈಯಲ್ಲಿ ದೀಪ ಹಿಡಿದು ಮಾತೆಗೆ ಗೌರವ: ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನರ್ಸಿಂಗ್‌ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಗಳು ಕೈಯಲ್ಲಿ ದೀಪ ಹಿಡಿದುಕೊಂಡು ಮಾತೆಗೆ ಗೌರವ ಸಲ್ಲಿಸಿದರು. ಗಮನ ಸೆಳೆದ ರಂಗೋಲಿ: ವಿಶ್ವ ಶುಶ್ರೂಷಕರ ದಿನದ ಅಂಗವಾಗಿ ಕಾರ್ಯಕ್ರಮ ಸ್ಥಳದಲ್ಲಿ ವಿವಿಧ ಬಣ್ಣಗಳಿಂದ ಬಿಡಿಸಲಾದ ಬೃಹತ್‌ ಆಕಾರದ ರಂಗೋಲಿ ಸಭಿಕರ ಗಮನ ಸೆಳೆಯಲ್ಲಿ ಯಶಸ್ವಿಯಾಯಿತು.

ಜಿಪಂ ಸಿಇಒ ಡಾ| ಪಿ. ರಾಜಾ, ಪ್ರೊಬೇಷನರ್‌ ಐಎಎಸ್‌ ಅಧಿಕಾರಿ ಡಾ| ಗೋಪಾಲಕೃಷ್ಣ ಬಿ., ಇಎಸ್‌ಐಸಿಯ ಡಾ| ಥಾಮಸನ್‌, ಡಾ| ಸುಧಾಕರ್‌ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ನರ್ಸಿಂಗ್‌ ವಿದ್ಯಾರ್ಥಿಗಳು, ಆಸ್ಪತ್ರೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.