ಇಬ್ಬರು ಹೆಣ್ಣು ಮಕ್ಕಳಿಗೆ ವಿಷ ಕುಡಿಸಿ ಪಾಪಿ ತಂದೆ ಪರಾರಿ
Team Udayavani, Jan 3, 2020, 10:36 AM IST
ಕಲಬುರಗಿ: ತಂದೆಯೋರ್ವ ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ವಿಷ ಕುಡಿಸಿ ಹತ್ಯೆ ಮಾಡಿರುವ ದಾರುಣ ಘಟನೆ ಗುರುವಾರ ರಾತ್ರಿ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.
ಮಿರಿಯಾಣ ಪೊಲೀಸ್ ಠಾಣೆ ವ್ಯಾಪ್ತಿಯ ಭೈರಂಪಳ್ಳಿ ತಾಂಡಾದಲ್ಲಿ ಈ ಘಟನೆ ನಡೆದಿದ್ದು, ರೋಹಿತಾ (4), ಪರ್ವಿತಾ (2) ತಂದೆಯಿಂದಲೇ ಕೊಲೆಯಾದ ದುರ್ದೈವಿಗಳು. ಸಂಜು ಆಲಿಯಾಸ್ ಕುಮ್ಶೆಟ್ಟಿ ಮಕ್ಕಳನ್ನು ಕೊಲೆಗೈದ ಪಾಪಿ.
ಹೈದರಾಬಾದ್ ನಲ್ಲಿ ಸಂಜು ಕೆಲಸ ಮಾಡುತ್ತಿದ್ದ ಇತ್ತೀಚಿಗೆ ತಾಂಡಾಕ್ಕೆ ಬಂದಿದ್ದ. ಮದ್ಯ ವ್ಯಸನಿಯಾಗಿರುವ ಇವನು ಇಬ್ಬರು ಮಕ್ಕಳನ್ನು ಹೊಲಕ್ಕೆ ಕರೆದೊಯ್ದು ವಿಷಕುಡಿಸಿ ಸಾಯಿಸಿದ್ದಾನೆ ಎನ್ನಲಾಗಿದೆ.
ತಾಂಡಾದ ಖೀರುನಾಯಕ ಎಂಬುವರ ಹೊಲದಲ್ಲಿ ಇಬ್ಬರು ಮಕ್ಕಳ ಶವಗಳು ಪತ್ತೆಯಾಗಿದ್ದು, ಸ್ಥಳಕ್ಕೆ ಮಿರಿಯಾಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ನಾಪತ್ತೆಯಾಗಿದ್ದಾನೆ. ಆತನ ಬಗೆಗೂ ಅನುಮಾನಗಳಿದ್ದು, ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’