ಮಾರಕಾಸ್ತ್ರ-ಆಟಿಕೆ ಪಿಸ್ತೂಲ್‌ ತೋರಿಸಿ ದರೋಡೆ


Team Udayavani, Jun 13, 2020, 6:55 AM IST

ಮಾರಕಾಸ್ತ್ರ-ಆಟಿಕೆ ಪಿಸ್ತೂಲ್‌ ತೋರಿಸಿ ದರೋಡೆ

ಕಲಬುರಗಿ: ಅಪಾರ್ಟಮೆಂಟ್‌ನಲ್ಲಿ ಉದ್ಯಮಿಯೊಬ್ಬರ ಮನಗೆ ನುಗ್ಗಿದ ನಾಲ್ವರು ದರೋಡೆಕೋರರು ಮಾರಕಾಸ್ತ್ರ ಮತ್ತು ಆಟಿಕೆ ಪ್ಲಾಸ್ಟಿಕ್‌ ಪಿಸ್ತೂಲ್‌ ತೋರಿಸಿ 50 ಸಾವಿರ ರೂ. ನಗದು ಮತ್ತು ಕಾರು ದೋಚಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ನಗರದ ಸ್ಟೇಷನ್‌ ಬಜಾರ್‌ ಪೊಲೀಸರು ಓರ್ವನನ್ನು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.

ಇಲ್ಲಿನ ಕುವೆಂಪು ನಗರದ ಏಷಿಯನ್‌ ಲೈಫ್‌ಸ್ಟೈಲ್‌ ಅಪಾರ್ಟಮೆಂಟ್‌ನಲ್ಲಿ ವಾಸವಾಗಿರುವ ಫುಡ್‌ ಸಪ್ಲೈ ಉದ್ಯಮಿ ಖಾಲೀದ್‌ ಅಹ್ಮದ್‌ ಚಾಂದಸಾಬ್‌ ಎನ್ನುವರ ಮನೆಯಲ್ಲಿ ಗುರುವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಈ ದರೋಡೆ ನಡೆದಿದೆ. ಕೋವಿಡ್ ಸೋಂಕು ತಡೆ ಮಾಸ್ಕ್ ಧರಿಸಿದ್ದ ದರೋಡೆಕೋರರು, ಅಪಾರ್ಟಮೆಂಟ್‌ನ ಬೆಲ್‌ ಬಾರಿಸಿದಾಗ ಖಾಲೀದ್‌ ಅಹ್ಮದ್‌ ಬಾಗಿಲು ತೆರೆದಿದ್ದಾರೆ. ಬಾಗಿಲು ತೆರೆಯುತ್ತಿದ್ದಂತೆ ಒಳಗೆ ನುಗ್ಗಿದ ಖದೀಮರು ಹಾಲ್‌ನಲ್ಲಿ ಮಲಗಿದ್ದ ವಾಹನ ಚಾಲಕ ಚಂದ್ರಶೇಖರನನ್ನು ಎಬ್ಬಿಸಿ ಹೊಡೆದಿದ್ದಾರೆ.

ನಂತರ ಇಬ್ಬರನ್ನು ಮನೆಯ ಬಾಲ್ಕನಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಓರ್ವ ಖದೀಮ ಇಬ್ಬರ ಬಳಿ ಕಾವಲಿದ್ದು, ಉಳಿದ ಮೂವರು ಮನೆಯೆಲ್ಲ ತಡಕಾಡಿ ಅಲ್ಮಾರಿಯಲ್ಲಿದ್ದ 50 ಸಾವಿರ ರೂ. ನಗದು, ಮೂರು ಮೊಬೈಲ್‌ ದೋಚಿಸಿದ್ದಾರೆ. ಅಲ್ಲದೇ, ಮಹೀಂದ್ರಾ ಕಾರು ಸೇರಿದಂತೆ ಒಟ್ಟು 4,52,500 ರೂ. ಮೌಲ್ಯದ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ. ಈ ಬಗ್ಗೆ ಖಾಲೀದ್‌ ಅಹ್ಮದ್‌ ಸ್ಟೇಷನ್‌ ಬಜಾರ್‌ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು, ಶುಕ್ರವಾರ ಎಂಎಸ್‌ಕೆ ಮಿಲ್‌ ಪ್ರದೇಶದ ಆಸೀಫ್‌ ಖಾನ್‌ ಎನ್ನುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಗ ಆರೋಪಿ ಸತ್ಯಾಂಶ ಬಾಯ್ಬಿಟ್ಟಿದ್ದು, ಅವನಿಂದ 18 ಸಾವಿರ ರೂ. ನಗದು, ಮಹೀಂದ್ರ ಕಾರು, ಚಾಕು ಮತ್ತು ಆಟಿಕೆ ಪ್ಲಾಸ್ಟಿಕ್‌ ಪಿಸ್ತೂಲ್‌, ಮೂರು ಮೊಬೈಲ್‌, ದರೋಡೆಗೆ ಬಳಸಿದ ಬಜಾಜ್‌ ಪಲ್ಸರ್‌ ಸೇರಿ ಒಟ್ಟು 4.30 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಪೊಲೀಸ್‌ ಆಯುಕ್ತ ಎನ್‌. ಸತೀಶಕುಮಾರ, ಉಪ ಆಯುಕ್ತ ಡಿ.ಕಿಶೋರ್‌ಬಾಬು, ಎ-ಉಪವಿಭಾಗದ ಸಹಾಯಕ ಪೊಲೀಸ್‌ ಆಯುಕ್ತ ವಿಜಯಕುಮಾರ ಮಾರ್ಗದರ್ಶನದಲ್ಲಿ ಸ್ಟೇಷನ್‌ ಬಜಾರ್‌ ಠಾಣೆಯ ಇನ್ಸ್‌ಪೆಕ್ಟರ್‌ ಎಲ್‌. ಎಚ್‌. ಗೌಂಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ದರೋಡೆಕೋರರು ಉದ್ಯಮಿ ಖಾಲೀದ್‌ ಅಹ್ಮದ್‌ಗೆ ಪರಿಚಿತರೇ ಆಗಿದ್ದು, ಮುಖಕ್ಕೆ ಮಾಸ್ಕ್ ಧರಿಸಿದ್ದರಿಂದ ಗೊತ್ತಾಗಿಲ್ಲ. ಉಳಿದ ಮೂವರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.