Kalburgi: ಮರಳಿನ ಟಿಪ್ಪರ್ ಹಾದು ದಂಪತಿ ಸಾವು ಮಗು ಪಾರು
Team Udayavani, Apr 21, 2023, 10:07 PM IST
ಕಲಬುರಗಿ: ನಗರದ ರಾಮ ಮಂದಿರ ವೃತ್ತದಲ್ಲಿ ಶುಕ್ರವಾರ ಸಂಜೆ ಮರಳಿನ ಲಾರಿ ಅಡಿ ಸಿಲುಕಿ ಪತಿ ಹಾಗೂ ಪತ್ನಿ ಸಾವನ್ನಪ್ಪಿದ ದಾರುಣ ಘಟನೆ ಸಂಭವಿಸಿದೆ.
ಮರಳಿನ ಲಾರಿಯ ಚಕ್ರದಲ್ಲಿ ಸಿಕ್ಕು ಸಾವನ್ನಪ್ಪಿರುವ ದಂಪತಿಯನ್ನು ಶರಣ ಸಿರಸಗಿ ನಿವಾಸಿಗಳಾದ ರಾಣೋಜಿ (45) ಮತ್ತು ರೇಣುಕಾ (35) ಎಂದು ಗುರುತಿಸಲಾಗಿದೆ. ಈ ವೇಳೆ ದಂಪತಿಯ ಮಡಿಲಲ್ಲಿದ್ದ ಮಗು ಮಲ್ಲಿಕಾರ್ಜುನ ಆಶ್ಚರ್ಯ ರೀತಿಯಲ್ಲಿ ಬದುಕು ಉಳಿದಿದೆ.
ಘಟನೆಯ ಕುರಿತು ರಾಮಮಂದಿರ ಸರ್ಕಲ್ ಬಳಿಯಲ್ಲಿ ಸಾರ್ವಜನಿಕರು ಸಂಚಾರಿ ಪೋಲಿಸರ ವಿರುದ್ಧ ಬಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮ ಮಂದಿರ ವೃತ್ತದಲ್ಲಿ ಸಂಚಾರಿ ನಿಯಮಗಳ ಪಾಲನೆ ಕಟ್ಟು ನಿಟ್ಟಿನಿಂದ ಆಗುತ್ತಿಲ್ಲ. ದೀಪಗಳು ಉರಿಯುತ್ತಿದ್ದರೂ ವಿರುದ್ಧ ದಿಕ್ಕಿನಲ್ಲಿ ವಾಹನಗಳ ಮತ್ತು ಜನರ ಚಲನೆ ಇರುತ್ತದೆ. ಸಂಚಾರಿ ಪೊಲೀಸರು ಕರ್ತವ್ಯದಲ್ಲಿದ್ದರೂ ಕ್ರಮ ಕೈಗೊಳ್ಳುವುದಿಲ್ಲ. ಹೀಗಾಗಿ ಅಫಘಾತ ನಡೆಯುತ್ತಿವೆ ಎಂದು ಪ್ರತ್ಯಕ್ಷ ದರ್ಶಿಗಳು ದೂರಿದ್ದಾರೆ. ಹಗಲಿನಲ್ಲಿಯೇ ಮರಳು ತುಂಬಿದ ಟಿಪ್ಪರ್ ಲಾರಿಗಳು ನಗರದ ಹಲವಾರು ವೃತ್ತಗಳಲ್ಲಿ ರಾಜರೋಷವಾಗಿ ಓಡಾಡುತ್ತಿವೆ. ಇದರಿಂದಾಗಿ ಜನಸಂದಣಿ ಇರುವ ರಸ್ತೆಯಲ್ಲಿ ಪ್ರಯಾಣಿಸುವುದು ದುಸ್ತರವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆಯಲ್ಲಿ ಸಂಚಾರಿ ಪೊಲೀಸರು ದಂಪತಿ ದೇಹವನ್ನು ಸ್ಥಳದಿಂದ ಜಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಕುರಿತು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Karnataka Election ವಿಜಯಪುರದಲ್ಲಿ 7 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ