ಕಲಬುರಗಿ: ಅಕ್ಕ-ತಂಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ
Team Udayavani, Dec 7, 2020, 10:45 PM IST
ಕಲಬುರಗಿ: ಮನೆಯಲ್ಲೇ ಅಕ್ಕ, ತಂಗಿ ಇಬ್ಬರೂ ಏಕಕಾಲಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಐಶ್ವರ್ಯ ಸುತಾರ (20) ಮತ್ತು ಸಾರಿಕಾ ಸುತಾರ (17) ಎಂಬುವವರೇ ನೇಣಿಗೆ ಶರಣಾದ ಅಕ್ಕ-ತಂಗಿ. ಮನೆಯಲ್ಲಿ ಯಾರೂ ಇಲ್ಲದೆ ಇರುವ ಸಮಯದಲ್ಲಿ ಇಬ್ಬರೂ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ತಂದೆ ವಿಶ್ವನಾಥ ಸುತಾರ ಐನಾಪುರ ಗ್ರಾಮದಲ್ಲೇ ಚಹಾ ಅಂಗಡಿ ನಡೆಸುತ್ತಿದ್ದಾರೆ. ಇವರಿಗೆ ಒಟ್ಟು ಐವರು ಹೆಣ್ಣು ಮಕ್ಕಳೇ ಇದ್ದಾರೆ. ಈಗಾಗಲೇ ಮೂವರ ಮದುವೆಯಾಗಿದೆ. ಐದನೆಯವಳಾದ ಸಾರಿಕಾಗೆ ಒಂದೂವರೆ ತಿಂಗಳ ಹಿಂದೆ ಮದುವೆ ನಿಶ್ಚಯವಾಗಿತ್ತು. ಆದರೆ, ನಾಲ್ಕನೆಯವಳಾದ ಐಶ್ವರ್ಯ ಇನ್ನೂ ಯಾವುದೇ ಮದುವೆ ನಿಶ್ಚಯವಾಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯಾಹ್ನ ತಂದೆ ಚಹಾ ಅಂಗಡಿಯಿಂದ ಮನೆಗೆ ಬಂದಾಗ ಊಟ ಇವರೇ ಬಡಿಸಿದ್ದಾರೆ. ನಂತರ ತಂದೆ ಮರಳಿ ಹೋಗಿದ್ದಾರೆ. ಸಂಜೆ ತಾಯಿ ಹೊಲದಿಂದ ಮನೆಗೆ ಬಂದಾಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ವಿಷಯ ತಿಳಿದ ಸಬ್ಇನ್ಸ್ಪೆಕ್ಟರ್ ರಾಜಶೇಖರ ರಾಠೋಡ ಸ್ಥಳಕ್ಕೆ ಭೇಟಿ, ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಚಿಂಚೋಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ