ಪುಸ್ತಕೋದ್ಯಮದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿಲ್ಲ: ಡಾ| ಸತೀಶಕುಮಾರ

ಆಧುನಿಕ ಕಥನಕ್ಕೆ ಅಮೀನಪುರದ ಸಂತೆ ಕೊಡುಗೆ

Team Udayavani, Mar 15, 2021, 7:20 PM IST

Book

ಕಲಬುರಗಿ: ಅಮೀನಪುರ ಸಂತೆ ಕಥೆಗಳು ಕನ್ನಡ ಸಾಹಿತ್ಯದ ಸಣ್ಣ ಕಥೆಗಳ ಲೋಕಕ್ಕೆ ನೀಡಿದ ಅಪಾರ ಕೊಡುಗೆಯಾಗಿದೆ. ಬಂಡಾಯದ ಜನಪದರತೆ ಮತ್ತು ನವ್ಯದ ಆಕೃತಿ ಸೂಕ್ಷ್ಮಗಳನ್ನು ಲೇಖಕರು ಸಮರ್ಥ ವಾಗಿ ಬಳಸಿಕೊಂಡಿದ್ದಾರೆ ಎಂದು ಹಿರಿಯ ಸಾಹಿತಿ ಸುಬ್ಬರಾವ್‌ ಕುಲಕರ್ಣಿ ಹೇಳಿದರು.

ನಗರದ ಸಿದ್ದಲಿಂಗೇಶ್ವರ ಬುಕ್‌ ಮಾಲ್‌ ದಲ್ಲಿ ನಡೆದ “ಅಟ್ಟದ ಮೇಲೆ ಬೆಟ್ಟದಂತ ವಿಚಾರ’ ಪಾಕ್ಷಿಕ ಪುಸ್ತಕ ಪರಿಚಯ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಹಿರೇಮಠ ರಚಿಸಿದ “ಅಮೀನಪುರದ ಸಂತೆ’ ಕೃತಿ ಕುರಿತು ಅವರು ಮಾತನಾಡಿದರು.

ತಮ್ಮ ವಿಶಿಷ್ಟ ಸಂವೇದನಶೀಲ ಬರಹದಿಂದ ಕಥೆಗಳನ್ನು ಅವರ ಬದುಕಿನಲ್ಲಿ ಒಂದಾಗಿಸುವ ಮೂಲಕ  ಆಧುನಿಕ ಕಥನ ಸಾಹಿತ್ಯಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ. ಅಮೀನಪುರದ ಸಂತೆ ಸಂಕಲನದ ಮೂಲಕ ಸಣ್ಣಕಥೆಗಳು ಹಿಡಿಯುತ್ತಿರುವ ಹೊಸ ಹಾದಿಯನ್ನು ಪರಿಚಯಿಸಿದ್ದಾರೆ ಎಂದರು. ಲೇಖಕರ ಬಹುತೇಕ ಕಥೆಗಳು ಶೋಷಿತರನ್ನು ಗಮನದಲ್ಲಿ ಇರಿಸಿಕೊಂಡು ಸೃಷ್ಟಿಯಾಗಿವೆ. ಕಥೆಗಳಲ್ಲಿ ಶೋಷಿತರ ಬದುಕಿನೊಳಗೆ ತಣ್ಣಗೆ ಹುದುಗಿರುವ ಉದಾತ್ತ ಮೌಲ್ಯಗಳನ್ನು ಬಯಲಿಗೆಳೆಯಲಾಗಿದೆ. ಒಟ್ಟಾರೆ ನವೋದಯ, ಪ್ರಗತಿಶೀಲ, ನವ್ಯ, ದಲಿತ, ಬಂಡಾಯಗಳೆಂಬ ಘಟ್ಟಗಳ ಮೂಲಕ ಹಾಯ್ದು ಬಂದ ಕನ್ನಡ ಸಾಹಿತ್ಯ ಶತಮಾನದ ಅಂಚಿನಲ್ಲಿ ಮತ್ತೆ ಹೊಸತನಕ್ಕಾಗಿ ಹಾತೊರೆಯುತ್ತಿದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕರಾದ ಡಾ| ಸತೀಶ ಕುಮಾರ ಹೊಸಮನಿ ಮಾತನಾಡಿ, ಪುಸ್ತಕೋದ್ಯಮ ಕ್ಷೇತ್ರದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿಲ್ಲ, ಯಾವುದೇ ಪ್ರದೇಶಕ್ಕೂ ಕಡಿಮೆಯಿಲ್ಲದಂತೆ ಬೆಳೆದಿದೆ  ಎಂದರು. ವ್ಯಾಪಾರಿಯಾಗಿದ್ದ ಬಸವರಾಜ ಕೊನೆಕ್‌ ಅವರ ಸತತ ಪ್ರಯತ್ನ ಹಾಗೂ 44 ವರ್ಷಗಳ ಕಠಿಣ ಪರಿಶ್ರಮ, ಹೋರಾಟದ ಫಲವಾಗಿ ಈ ಪ್ರದೇಶ ಪುಸ್ತಕೋದ್ಯಮದಲ್ಲಿ ಹಿಂದುಳಿದಿದೆ ಎನ್ನುವ ಕಳಂಕ ದೂರವಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಬಸವರಾಜ ಕೊನೆಕ್‌ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಲೇಖಕರ ಪುಸ್ತಕಗಳನ್ನು ವಿಮರ್ಶೆಗೆ ಒಳಪಡಿಸಿ ಪುಸ್ತಕ ರೂಪದಲ್ಲಿ ಹೊರತರುವ ಮೂಲಕ ವಿಮರ್ಶಕರನ್ನು ಹುಟ್ಟುಹಾಕುವ ಕೆಲಸ ಪ್ರಕಾಶನ ಮಾಡುತ್ತಿದೆ ಎಂದು ನುಡಿದರು.

ಡಾ| ಚಿ.ಸಿ. ನಿಂಗಣ್ಣ, ಸಂಚಾಲಕ ಶಿವರಾಜ ಪಾಟೀಲ, ಡಾ| ಶ್ರೀನಿವಾಸ ಶಿರನೂರಕರ್‌, ಡಾ| ಕಲ್ಯಾಣರಾವ್‌ ಪಾಟೀಲ, ಸುರೇಶ ಬಡಿಗೇರ, ಕಾವ್ಯಶ್ರೀ ಮಹಾಗಾಂಕರ್‌, ಡಾ| ಶ್ರೀಶೈಲ ನಾಗರಾಳ, ಪ್ರೊ| ಎಸ್‌.ಎಲ್‌. ಪಾಟೀಲ, ರೋಲೇಕರ್‌ ನಾರಾಯಣ, ಶಿವರಂಜನ್‌ ಸತ್ಯಂಪೇಟೆ, ಡಾ| ಅಜಯ, ನಾಗಪ್ಪ ಟಿ. ಗೋಗಿ, ಬಿ.ಎಚ್‌. ನಿರಗುಡಿ, ಸುರೇಶ್‌ ಜಾಧವ, ಪ. ಮನು ಸಗರ್‌, ಸಂಗಪ್ಪ ತವಡೆ ಮತ್ತಿತರರು ಇದ್ದರು. ಡಾ| ಶರಣಬಸಪ್ಪ ವಡ್ಡನಕೇರಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.