ಕನ್ನಡ ಬೆಳವಣಿಗೆ ಮಾಧ್ಯಮದಲ್ಲಿ ಅಡಕ


Team Udayavani, Oct 28, 2021, 9:59 AM IST

3kannada

ಕಲಬುರಗಿ: ಕನ್ನಡ ಭಾಷೆ ಬೆಳವಣಿಗೆ ಹಾಗೂ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ ದೊಡ್ಡದು ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಆರ್‌. ವೆಂಕಟೇಶ ಕುಮಾರ ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಾಧ್ಯಮದಲ್ಲಿ ಕನ್ನಡ ಬಳಕೆ ಕುರಿತು ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜನತೆ ಹೆಚ್ಚೆಚ್ಚು ಪತ್ರಿಕೆ ಓದುತ್ತಿರುತ್ತಾರೆ. ಹೀಗಾಗಿ ಕನ್ನಡ ಅಭಿವೃದ್ಧಿ ಮಾಧ್ಯಮಗಳಲ್ಲಿಯೇ ಅಡಕವಾಗಿದೆ. ಆದ್ದರಿಂದ ಪತ್ರಕರ್ತರು ಕನ್ನಡ ಭಾಷೆ ಪರಿಪೂರ್ಣವಾಗಿ ಬಲ್ಲವರಾಗಿರಬೇಕು. ಸ್ಥಳೀಯತೆ ಬಿಂಬಿಸುವ ಶಬ್ದಗಳನ್ನು ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.

ಕನ್ನಡ ಭಾಷೆ, ಸಂಸ್ಕೃತಿ ಬೆಳವಣಿಗೆಗೆ ಕೆಕೆಆರ್‌ ಡಿಬಿಯಿಂದ ಕಾರ್ಯಕ್ರಮ ರೂಪಿಸಲಾಗುವುದು ಎಂದು ಪ್ರಕಟಿಸಿದರು. ಕಲ್ಯಾಣ ಕರ್ನಾಟಕದ ಇತಿಹಾಸ, ಭಾಷೆ ಹಾಗೂ ಸಂಸ್ಕೃತಿ ಉನ್ನತಿಗೆ ಗುಲ್ಬರ್ಗಾ ವಿವಿಯಲ್ಲಿ ಅಧ್ಯಯನ ಪೀಠ ಕಾರ್ಯ ಕೈಗೊಳ್ಳುತ್ತಿದ್ದು, ಇದರಿಂದ ಕನ್ನಡ ಬೆಳವಣಿಗೆ ನಿಟ್ಟಿನಲ್ಲಿ ರಚನಾತ್ಮಕ ಕಾರ್ಯ ಕೈಗೊಳ್ಳಬಹುದು. ಅಲ್ಲದೇ ವಿದ್ಯಾರ್ಥಿಗಳು ಸೇರಿದಂತೆ ಜನತೆ ಪ್ರತಿನಿತ್ಯ ಒಂದು ಗಂಟೆಯಾದರೂ ದಿನಪತ್ರಿಕೆಗಳನ್ನು ಓದಿ, ಅಂದಿನ ದಿನದ ಮಾಹಿತಿಯನ್ನು ಅರಿಯಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಕನ್ನಡ ಜಾಗೃತಿ ಸಮಿತಿ ಸದಸ್ಯರೂ ಆಗಿರುವ ಹಿರಿಯ ಸಾಹಿತಿ ಡಾ| ಸ್ವಾಮಿರಾವ್‌ ಕುಲಕರ್ಣಿ ಮಾತನಾಡಿ, ಮಾಧ್ಯಮ ಕ್ಷೇತ್ರದಲ್ಲಿ ಕೆಲವು ವಿದ್ಯುನ್ಮಾನಗಳಲ್ಲಿ ಕನ್ನಡ ಭಾಷೆಯ ಸೊಗಡು ಕ್ಷೀಣಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಹಿರಿಯ ಪತ್ರಕರ್ತ ಚಾಮರಾಜ ಸವಡಿ ವಿಷಯ ಮಂಡಿಸಿ, ನಾವು ಬಳಸುವ ಪ್ರತಿ ಶಬ್ದ ಹಾಗೂ ಉದ್ಘಾರವಾಚಕಗಳನ್ನು ಹಲವಾರು ಬಾರಿ ಯೋಚಿಸಿ ಬಳಸಬೇಕು. ಆದರೆ ತಾಂತ್ರಿಕ ಯುಗದಲ್ಲಿ ಅವಸರದಿಂದ ಶಬ್ದಗಳ ಬಳಕೆಯಾಗುತ್ತಿದೆ. ಇದರಿಂದ ಭಾಷೆಯ ಗಟ್ಟಿತನಕ್ಕೆ ಹೊಡೆತ ಬೀಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಧ್ಯಯನ ಶೀಲತೆ ಕೊರತೆ ಎಲ್ಲರಲ್ಲೂ ಕಾಡುತ್ತಿದೆ. ಒತ್ತಡದ ಬದುಕಿನಲ್ಲಿ ಇವತ್ತಿನ ಕೆಲಸ ಮುಗಿಯಿತು ಸಾಕು ಎನ್ನುವ ಮನೋಭಾವನೆ ಹೆಚ್ಚುತ್ತಿದೆ. ಇದರಿಂದ ಭಾಷೆ ಬಳಕೆಯಲ್ಲಿ ಅಧ್ಯಯನ ಕೊರತೆ ಎದ್ದು ಕಾಣುತ್ತಿದೆ. ಆದ್ದರಿಂದ ಓದುವಿಕೆಯನ್ನು ಕಡ್ಡಾಯವಾಗಿ ಮೈಗೂಡಿಸಿಕೊಳ್ಳಬೇಕು ಎಂದರು.

ಸಾಹಿತ್ಯ ಹಾಗೂ ಮಾಧ್ಯಮದ ಭಾಷೆ ಬೇರೆ ಬೇರೆಯಾಗಿದೆ. ಕನ್ನಡ ಸರಿಯಾಗಿ ಅರಿತರೆ ಎಲ್ಲ ಭಾಷೆ ಕಲಿಕೆಗೂ ಪೂರಕವಾಗುವುದು. ಹೀಗಾಗಿ ಆಸಕ್ತಿಯಿಂದ ಶಬ್ದ ಬಳಕೆ ಮಾಡಿ ಎಂದು ಹೇಳಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿಸಿಂಗ್‌ ಠಾಕೂರ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ ಮಾತನಾಡಿ, ಪ್ರಾಧಿಕಾರದಿಂದ ಕೈಗೊಂಡಿರುವ ಕಾರ್ಯಗಳನ್ನು ವಿವರಿಸಿದರು.

ಮಾಧ್ಯಮ ಅಕಾಡೆಮಿ ಸದಸ್ಯ ದೇವಿಂದ್ರಪ್ಪ ಕಪನೂರ, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹಣಮಂತರಾವ ಭೈರಾಮಡಗಿ, ಖಜಾಂಚಿ ರಾಜು ದೇಶಮುಖ ಮುಂತಾದವರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಆವಂಟಿ, ಕಾರ್ಯಕಾರಿ ಸಮಿತಿ ಸದಸ್ಯ ಸಂಗಮನಾಥ ರೇವತಗಾಂವ ನಿರೂಪಿಸಿದರು.

ಇದನ್ನೂ ಓದಿ: ಮದ್ಯ ಅಂಗಡಿ ತೆರವಿಗೆ ಒತ್ತಾಯ

ಭಾಷೆ ಮರೆತರೆ ತಾಯಿ ಮರೆತಂತೆ

ಭಾಷೆ ಅಭಿಮಾನ ಮರೆತರೆ ಸಂಸ್ಕೃತಿ ಹಾಗೂ ತಾಯಿಯನ್ನೇ ಮರೆತಂತೆ ಎಂದು ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂಹನದ ಮುಖ್ಯಸ್ಥ ಹಾಗೂ ಹಿರಿಯ ಪತ್ರಕರ್ತ ಟಿ.ವಿ. ಶಿವಾನಂದನ್‌ ಹೇಳಿದರು.

ಕಾರ್ಯಾಗಾರದ ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಭಾಷೆ ಬಗ್ಗೆ ಹೆಮ್ಮೆ ಇರಬೇಕು. ಭಾಷೆ ಸರಿಯಾಗಿ ಕೇಳಬೇಕು. ಸರಿಯಾಗಿ ಮಾತನಾಡಬೇಕು ಎಂದರು.

ಭಾಷೆ ಅಭಿಮಾನ ಬೆಳೆಸಬೇಕು. ಕೇರಳ ಹಾಗೂ ತಮಿಳನಾಡು ರಾಜ್ಯದವರ ಹಾಗೆ ನಾವೂ ಭಾಷೆ ಬಗ್ಗೆ ಅಭಿಮಾನ, ಹೆಮ್ಮೆ ಬೆಳೆಸಿಕೊಳ್ಳಬೇಕು. ತಮ್ಮದು ಮೂಲತಃ ಭಾಷೆ ಬೇರೆಯದಾಗಿದ್ದರೂ ಕನ್ನಡವನ್ನೇ ಮಾತೃಭಾಷೆಯನ್ನಾಗಿ ಮಾಡಿಕೊಂಡಿದ್ದೇನೆ. ಕನ್ನಡ ಅನ್ನ, ನೀರು ಕೊಟ್ಟಿದೆ ಎಂದರು.

ಆಕಾಶವಾಣಿ ಕಾರ್ಯಕ್ರಮ ನಿರ್ವಹಣಾ ಅಧಿಕಾರಿ ಡಾ| ಸದಾನಂದ ಪೆರ್ಲಾ ಮಾತನಾಡಿ, ಭಾಷಾ ಜ್ಞಾನ ಹೊಂದಿರಬೇಕು. ಪತ್ರಿಕೋದ್ಯಮದಲ್ಲಿ ಪ್ರಮಾಣಿಕತೆ ಮುಖ್ಯ. ಸಾಮಾಜಿಕ ಕಾಳಜಿ ಅತ್ಯವಶ್ಯಕ ಎಂದು ಹೇಳಿದರು. ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಡಾ| ಆನಂದ ಸಿದ್ಧಾಮಣಿ ಮಾತನಾಡಿದರು. ಪತ್ರಕರ್ತ ಮಹಾದೇವ ವಡಗಾಂವ ಸ್ವಾಗತಿಸಿದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.