ಕನ್ನಡ ಪ್ರೌಢಶಾಲೆ ವಿದ್ಯಾರ್ಥಿಗಳ ರಸಪ್ರಶ್ನೆ ಕಾರ್ಯಕ್ರಮ


Team Udayavani, Feb 23, 2019, 5:06 AM IST

gul-7.jpg

ಶಹಾಬಾದ: ಭಂಕೂರ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಚಿತ್ತಾಪುರ ಹಾಗೂ ಸರಕಾರಿ ಪ್ರೌಢಶಾಲೆ ಭಂಕೂರ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಅಂತರ್‌ ಕನ್ನಡ ಪ್ರೌಢಶಾಲೆ ವಿದ್ಯಾರ್ಥಿಗಳ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು.

ಶಹಾಬಾದ ನಗರ,ಹೊನಗುಂಟಾ, ಭಂಕೂರ, ಮುಗುಳನಾಗಾವ, ಮಾಲಗತ್ತಿ, ಪೇಠಸಿರೂರ ಸೇರಿದಂತೆ ಅನುದಾನಿತ, ಅನುದಾನರಹಿತ ಹಾಗೂ ಸರಕಾರಿ ಪ್ರೌಢಶಾಲೆ ಮಕ್ಕಳು ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಸೇರಿದ್ದರು. ಸುಮಾರು 249 ವಿದ್ಯಾರ್ಥಿಗಳಿಂದ ಕನ್ನಡ, ಇಂಗ್ಲಿಷ್‌, ಗಣಿತ, ವಿಜ್ಞಾನ, ಸಮಾಜ ವಿಷಯಕ್ಕೆ ಸಂಬಂಧಿಸಿದಂತೆ ಒಟ್ಟು 50 ಪ್ರಶ್ನೆಗಳ ಲಿಖೀತ ಪರೀಕ್ಷೆ ತೆಗೆದುಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿವಿಧ ಶಾಲೆ ಶಿಕ್ಷಕರಿಗೆ ಉತ್ತರ ನೀಡಿ ಮೌಲ್ಯಮಾಪನ ಮಾಡಿಸಲಾಯಿತು. ಲಿಖೀತ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮೊದಲ 12 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು. ಚೀಟಿ ಎತ್ತುವ ಮೂಲಕ ವಿದ್ಯಾರ್ಥಿಗಳ ಒಂದೊಂದು ಗುಂಪಾಗಿ ಮಾಡಲಾಯಿತು. ಒಟ್ಟು ನಾಲ್ಕು ಗುಂಪು ಮಾಡಿ ನಿಷ್ಪಕ್ಷಪಾತವಾಗಿ ಎಲ್ಲ ಶಿಕ್ಷಕರ ಮುಂದೆ ಪ್ರಶ್ನೆ ಕೇಳಲಾಯಿತು.

ಅಲ್ಲದೇ ಆಯ್ಕೆಯಾಗದ ವಿದ್ಯಾರ್ಥಿಗಳ ಒಂದು ಗುಂಪು ಮಾಡಿ ಅವರಿಗೂ ಪ್ರಶ್ನೆ ಕೇಳಿ ಉತ್ತರ ನೀಡಿದ ವಿದ್ಯಾರ್ಥಿಗಳಿಗೆ ಸ್ಥಳದಲ್ಲಿಯೇ ಬಹುಮಾನ ವಿತರಣೆ ಮಾಡಲಾಯಿತು. ಗಂಗಾ ತಂಡದ ವಿದ್ಯಾರ್ಥಿಗಳಾದ ಚಂದನಾ ಅಶೋಕ (ಬಸವ ಸಮಿತಿ ಪ್ರೌಢಶಾಲೆ ಭಂಕೂರ), ಪ್ರೇಮ ಸೂರ್ಯಕಾಂತ (ಸರಕಾರಿ ಪ್ರೌಢಶಾಲೆ ಭಂಕೂರ), ವಿಶಾಲ ಮನೋಹರ (ಕೂ.ಸಂ.ಪ್ರೌ.ಶಾಲೆ ಶಹಾಬಾದ) ಪ್ರಥಮ, ಭೀಮಾ ತಂಡದ ವಿದ್ಯಾರ್ಥಿಗಳಾದ ಪೃಥ್ವಿರಾಜ ಜೈಸಾಗರ (ಬಸವ ಸಮಿತಿ ಪ್ರೌಢಶಾಲೆ ಭಂಕೂರ), ವಿದ್ಯಾಶ್ರೀ ರಾಜಶೇಖರ (ಸರಕಾರಿ ಪ್ರೌಢಶಾಲೆ ಪೇಠಸಿರೂರ), ಮಹಾದೇವಿ ಮಲ್ಲಿಕಾರ್ಜುನ (ಸರಕಾರಿ ಪ್ರೌಢಶಾಲೆ ಮಾಲಗತ್ತಿ) ದ್ವಿತೀಯ ಸ್ಥಾನ ಪಡೆದುಕೊಂಡರು.

ರಸಪ್ರಶ್ನೆ ಕಾರ್ಯಕ್ರಮದ ಆಯೋಜಕ ದತ್ತಪ್ಪ ಕೋಟನೂರ, ದಾನಿಗಳಾದ ಹೊನಗುಂಟಾ ಪ್ರೌಢಶಾಲೆ ದೈಹಿಕ ಶಿಕ್ಷಕ ಎಚ್‌.ವೈ. ರಡ್ಡೇರ, ಶಿಕ್ಷಕರಾದ ಈರಣ್ಣ ಕೆಂಭಾವಿ, ವಿಷ್ಣುತೀರ್ಥ ಆಲೂರ, ಶಾಂತಮಲ್ಲ ಶಿವಭೋ, ಎಂ.ಡಿ. ಜಕಾತೆ, ಸೀತಮ್ಮ ಎನ್‌., ಆನಂದ ಕುಲಕರ್ಣಿ, ಶಿವಲಿಂಗಪ್ಪ,
ದತ್ತಾತ್ರೇಯ ಕುಲಕರ್ಣಿ, ಗಿರಿಮಲ್ಲಪ್ಪ ವಳಸಂಗ, ಸುಧೀರ ಕುಲಕರ್ಣಿ, ರಮೇಶ ಜೋಗದನಕರ್‌ ಹಾಜರಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.