ಕನ್ನಡ ಸಾಹಿತ್ಯ ಸಮ್ಮೇಳನ ನಾಳೆ


Team Udayavani, Feb 23, 2018, 10:29 AM IST

gul-2.jpg

ಕಲಬುರಗಿ: ಇಲ್ಲಿನ ಅಪ್ಪನ ಕರೆ ಬಳಿ ಇರುವ ಶರಣಬಸವೇಶ್ವರ ಶತಮಾನೋತ್ಸವ ಸಭಾಂಗಣದಲ್ಲಿ ಫ. 24ರಂದು ಕಲಬುರಗಿ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಿ.ಎಸ್‌.ಮಾಲಿಪಾಟೀಲ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2-3ಸಾವಿರ ಜನರು ಸೇರುವ ನಿರೀಕ್ಷೆ ಇದೆ. ವಿಶೇಷ ಉಪನ್ಯಾಸ ಗೋಷ್ಠಿ, ಕಾವ್ಯ ಸಿಂಚನ ಗೋಷ್ಠಿ, ಸಮ್ಮೇಳನಾಧ್ಯಕ್ಷರ ವಿಶೇಷ ಉಪನ್ಯಾಸ, ಸಂಗೀತ ಗಾಯನ, ಸಂಜೆ 3:30ಕ್ಕೆ ಬಹಿರಂಗ ಅಧಿವೇಶನ, ಸಂಜೆ 4:00ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು. ಪೂಜ್ಯದೊಡ್ಡಪ್ಪ ಅಪ್ಪ ಮಹಾ ವೇದಿಕೆಯಲ್ಲಿ ನಡೆಯುವ ಸಮೇ¾ಳನವನ್ನು ಕರ್ನಾಟಕ ಜಾನಪದ ವಿವಿ ಕುಲಪತಿ ಡಾ| ಡಿ.ಬಿ. ನಾಯಕ ಉದ್ಘಾಟಿಸುವರು. ಇದಕ್ಕೂ ಮುನ್ನ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಗೆ ಮೇಯರ್‌ ಶರಣಕುಮಾರ ಮೋದಿ ಚಾಲನೆ ನೀಡುವರು.

ಸಾಂಸ್ಕೃತಿಕ ತಂಡಗಳ ಜಾಥಾಕ್ಕೆ ದತ್ತಪ್ಪ ಸಾಗನೂರು ಚಾಲನೆ ನೀಡುವರು. ಶಾಸಕ ದತ್ತಾತ್ರೇಯ ಪಾಟೀಲ ರೇವೂರ ರಾಷ್ಟ್ರಧಜಾರೋಹಣ ಮತ್ತು ಸಿ.ಎಸ್‌. ಮಾಲಿಪಾಟೀಲ ಪರಿಷತ್ತಿನ ಧ್ವಜಾರೋಹಣ ನೆರವೇರಿಸುವರು. ಡಾ| ಶರಣಬಸವಪ್ಪ ಅಪ್ಪಾ ಉದ್ಘಾಟನಾ ಸಮಾರಂಭದ ಸಾನ್ನಿಧ್ಯವಹಿಸುವರು. ಶಾಸಕ ದತ್ತಾತ್ರೇಯ ಪಾಟೀಲ ಆಶಯ ನುಡಿಗಳನ್ನಾಡಲಿದ್ದಾರೆ. ಸಾಹಿತಿ ಡಾ|
ಎಂ.ಜಿ.ಬಿರಾದಾರ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು ಎಂದು ತಿಳಿಸಿದರು.

ನಿವೃತ್ತ ಪ್ರಾಧ್ಯಾಪಕ ಡಾ| ವಿ.ಜಿ. ಪೂಜಾರ ಅವರ ಅಧ್ಯಕ್ಷತೆಯಲ್ಲಿ ಜರುಗುವ ಮೊದಲ ಗೋಷ್ಠಿಯಲ್ಲಿ ಸಾಹಿತಿ ಪ್ರೊ| ಶಿವರಾಜ ಶಾಸ್ತ್ರೀ ಹೇರೂರ ಅವರು ಕಾಯಕ ದಾಸೋಹ ತತ್ವ ಶರಣಬಸವರು, ಪ್ರಾಧ್ಯಾಪಕ ಡಾ| ಟಿ.ಆರ್‌. ಗುರುಬಸಪ್ಪ ಅವರು ಒತ್ತಡ ಮತ್ತು ಸಮಾಜ, ನಿವೃತ್ತ ಪ್ರಾಧ್ಯಾಪಕ ಪ್ರೊ| ನಾಗಣಗೌಡ ಪಾಟೀಲ ಅವರು ಕೃಷಿ ಸಂಸ್ಕೃತಿ ಮತ್ತು ಜಾಗತೀಕರಣ, ಸಂಶೋಧಕ ಪ್ರೊ| ಬಿ.ಎ.ಪಾಟೀಲ ಅವರು ವಚನ ಸಾಹಿತ್ಯದಲ್ಲಿ ವೈಜ್ಞಾನಿಕತೆ ಕುರಿತು ಉಪನ್ಯಾಸ ನೀಡುವರು. ನಂತರ ಗುಂಡಣ್ಣ ಡಿಗ್ಗಿ ಅವರಿಂದ
ಹಾಸ್ಯ ಲಾಸ್ಯ ಕಾರ್ಯಕ್ರಮ ಜರುಗಲಿದೆ. ಮಧ್ಯಾಹ್ನ 1:30ಕ್ಕೆ ಪ್ರಾಧ್ಯಾಪಕ ಡಾ| ಬಸವಂತರಾಯ್‌ ಪಾಟೀಲ ಜವಳಿ ಅವರು ಸಮ್ಮೇಳನಾಧ್ಯಕ್ಷರ ವಿಶೇಷ ಉಪನ್ಯಾಸ ನೀಡುವರು. 2:30ಕ್ಕೆ ಹಿರಿಯ ಸಾಹಿತಿ ಡಾ| ವಸಂತ ಕುಷ್ಠಗಿ ಅವರ ಅಧ್ಯಕ್ಷತೆಯಲ್ಲಿ ಕಾವ್ಯ ಸಿಂಚನ ಗೋಷ್ಠಿ ಜರುಗಲಿದೆ. 

ನಂತರ ಸಂಗೀತ ಗಾಯನ ಜರುಗಲಿದೆ. ಮಧ್ಯಾಹ್ನ 3:30ಕ್ಕೆ ಬಹಿರಂಗ ಅ ಧಿವೇಶನ ಜರುಗಲಿದೆ ಎಂದು ತಿಳಿಸಿದರು.
ಲಿಂಗರಾಜ ಸಿರಗಾಪುರ, ಚಿ.ಸಿ.ಲಿಂಗಣ್ಣ, ಪ.ಮಾನು ಸಗರ, ಸಂಗಮೇಶ ಹಿರೇಮಠ, ವೆಂಕಟೇಶ ನೀರಡಗಿ ಇನ್ನೂ
ಹಲವರು ಸುದ್ದಿಗೋಷ್ಠಿಯಲ್ಲಿದ್ದರು. 

ಸಮ್ಮೇಳನಾಧ್ಯಕ್ಷ ಪಾಟೀಲ
ಕಲಬುರಗಿ ತಾಲೂಕು ಕಮಲಾಪುರ ಹೋಬಳಿ ಕಿಣ್ಣಿ ಸಡಕ್‌ ಗ್ರಾಮದ ಸಾಹಿತ್ಯಿಕ ಚಿಂತಕ ಡಾ| ಕಲ್ಯಾಣರಾವ ಪಾಟೀಲ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಾಟೀಲ ಅವರು ಪ್ರಾಥಮಿಕ ಮತ್ತು ಮಾಧ್ಯಮಿಕ ಹಾಗೂ ಪದವಿ ಶಿಕ್ಷಣವನ್ನು
ಕಲಬುರಗಿಯಲ್ಲಿಯೇ ಮುಗಿಸಿದ್ದಾರೆ.

ವಿಮರ್ಶಾತ್ಮಕ ಲೇಖನಗಳು, ಸಂಶೋಧನಾ ಪ್ರಬಂಧಗಳು, ಅಭಿನಂದನಾ ಗ್ರಂಥಗಳು, ಜೀವನಸಾಧನೆ ಚಿತ್ರಗಳು, ಎಲ್ಲೂ ಸೇರಿ ಒಟ್ಟು 83 ಕೃತಿಗಳಿಗಾಗಿ ಕೆಲಸ ಮಾಡಿದ್ದಾರೆ. ಖುದ್ದಾಗಿ 31 ಕೃತಿ ರಚಿಸಿದ್ದಾರೆ. ಇವುಗಳಲ್ಲಿ ಭಕ್ತಿ ಭಂಡಾರಿ, ದಾಸೋಹ ಸಂಸ್ಕೃತಿ ಮತ್ತು ಸ್ವಾಮಿ ವಿವೇಕಾನಂದ ಜೀವನ ಚರಿತ್ರೆ ಪ್ರಮುಖವಾದವು. ಕನ್ನಡ ಭಾಷೆ ಮತ್ತು ಸಾಹಿತ್ಯ ಬಗ್ಗೆ ಅಪಾರ ಕಾಳಜಿ ಮತ್ತು ಕಕ್ಕುಲಾತಿ ಇರುವ ಆವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನಗರದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಾಲೂಕು ಕಸಾಪ ಅಧ್ಯಕ್ಷ ಮಾಲಿಪಾಟೀಲ ತಿಳಿಸಿದರು.

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.