ಶಿಥಿಲಾವಸ್ಥೆಯಲ್ಲಿ ಕರ್ಚಖೇಡ ಸರ್ಕಾರಿ ಶಾಲೆ
Team Udayavani, Jul 25, 2022, 2:57 PM IST
ಚಿಂಚೋಳಿ: ತಾಲೂಕಿನ ಕರ್ಚಖೇಡ ಗ್ರಾಮದ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಮಳೆಯಿಂದ ಸೋರಿಕೆಯಾಗುತ್ತಿದ್ದು, ಅಪಾಯ ಸಂಭವಿಸುವ ಮುನ್ನ ನೂತನ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮದ ಮುಖಂಡರು ಆಗ್ರಹಿಸಿದ್ದಾರೆ.
ಹಿರಿಯ ಮುಖಂಡ ಗುಮಡಾರೆಡ್ಡಿ ಪಾಟೀಲ ಬೇಡಿಕೆಯಂತೆ ಆಗಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ 1966ರಲ್ಲಿ ಐದು ಕೋಣೆಗಳುಳ್ಳ ಈ ಶಾಲೆ ಪ್ರಾರಂಭಿಸಿದ್ದರು. ಆನಂತರ ವರ್ಷಗಳಲ್ಲಿ ಈ ಶಾಲೆ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು, ಮಳೆಗಾಲದಲ್ಲಿ ಸಂಪೂರ್ಣ ಸೋರುತ್ತಿದೆ. ಸದ್ಯ ಈ ಶಾಲೆಯಲ್ಲಿ 1ರಿಂದ 8ನೇ ತರಗತಿ ನಡೆಯುತ್ತಿದೆ. 250 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಮಕ್ಕಳಿಗೆ ನೆಲದ ಮೇಲೆ ಕುಳಿತುಕೊಳ್ಳಲು ಆಗುತ್ತಿಲ್ಲ. ಆದ್ದರಿಂದ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರಾದ ಸಂಗಾರೆಡ್ಡಿ ಪಾಟೀಲ, ಸಲೀಮಪಾಶಾ, ಚಾಂದಪಾಶಾ, ಮಾಡಿಕರೆಡ್ಡಿ ಪಾಟೀಲ ಆಗ್ರಹಿಸಿದ್ದಾರೆ.
ಇದಕ್ಕೂ ಮುನ್ನ ನೂತನ ಕಟ್ಟಡ ನಿರ್ಮಿಸಲು ಕೈಗೊಂಡಿದ್ದ ಪ್ರತಿಭಟನೆ ವೇಳೆ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರಿಗೆ ಘೇರಾವ್ ಹಾಕಲಾಗಿತ್ತು. ಈ ವೇಳೆ ತಹಶೀಲ್ದಾರ್ ಅಂಜುಮ ತಬಸುಮ, ಬಿಇಒ ರಾಚಪ್ಪ ಭದ್ರಶೆಟ್ಟಿ, ಸಿಪಿಐ ಜಗದೀಶ ಕೆ.ಜಿ ನೂತನ ಶಾಲಾ ಕಟ್ಟಡ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಆ ಭರವಸೆ ಇನ್ನೂ ಈಡೇರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ