ತ್ಯಾಗ ಮಾಡುವಂತೆ ಕರೆದಿದ್ರಾ: ಮೋದಿಗೆ ಖರ್ಗೆ ಟಾಂಗ್‌


Team Udayavani, Feb 17, 2017, 3:17 PM IST

gul4.jpg

ಕಲಬುರಗಿ: ಅಲ್ರಿ ಸ್ವಾಮಿ. ನಾನು ನನ್ನ ಇಡೀ ಜೀವನ ತ್ಯಾಗ ಮಾಡಿದ್ದಿನಿ, ಮಾಡಿದ್ದಿನಿ ಎಂದು ಹೇಳಿಕೊಂಡು ತಿರುಗುತ್ತಿರಲ್ಲ, ನಿಮ್ಮನ್ನ ಯಾರಾದ್ರು ಬಾ ಎಂದು ಕರೆ‌ದಿದ್ದರೆ ಎಂದು ಪ್ರಧಾನಿ ಮೋದಿ ಅವರಿಗೆ ಲೋಕಸಭೆ ಕಾಂಗ್ರೆಸ್‌ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಟಾಂಗ್‌ ನೀಡಿದರು. 

ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಕಾಂಗ್ರೆಸ್‌ ಸಮಿತಿ ವಿಸ್ತೃತ ಕಾರ್ಯಕಾರಣಿ ಸಭೆಯಲ್ಲಿ ಅವರು ಮಾತನಾಡಿದರು. ಒಬ್ಬ ಚಾಯಿವಾಲಾ ಪ್ರಧಾನಿಯಾಗಿದ್ದು ಈ ದೇಶದಲ್ಲಿ ನಡೆದಿದೆ ಎನ್ನುವ ಮೋದಿ ಅವರೇ 60 ವರ್ಷಗಳ ಕಾಲ ಕಾಂಗ್ರೆಸ್‌ ದೇಶದಲ್ಲಿ ಪ್ರಜಾಪ್ರಭುತ್ವ, ಏಕತೆ, ಐಕ್ಯತೆ ಮತ್ತು ಸಾಮರಸ್ಯ ಹಾಗೂ ಸಂವಿಧಾನದ ಪಾವಿತ್ರೆತೆ ಉಳಿಸಿಕೊಂಡು ಬಂದಿರುವ ಪರಿಣಾಮ ನೀವು ಪ್ರಧಾನಿಯಾದ್ರಿ.

ಮೋದಿ ಅವರೇ ನೀವು ಪ್ರಧಾನಿಯಾಗಿದ್ದು ನಮ್ಮ ನಡತೆ ಮತ್ತು ಪ್ರಾಮಾಣಿಕತೆಯಿಂದ. ದೇಶದಲ್ಲಿ ಕಾಂಗ್ರೆಸ್‌ ಏನು ಮಾಡಿದೆ ಎಂಬುದು ಈಗಲಾದ್ರೂ ಅರ್ಥವಾಯಿತಾ ಎಂದು ಪ್ರಶ್ನಿಸಿದರು. 18 ಸಾವಿರ ಹಳ್ಳಿಗೆ ಕರೆಂಟ್‌ ನೀಡಲು ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ ಎನ್ನುವ ಪ್ರಧಾನಿ ಅವರೇ ಇನ್ನುಳಿದ 6.30 ಲಕ್ಷ ಹಳ್ಳಿಗೆ ಕರೆಂಟ್‌ ನೀಡಿದ್ದಿವಲ್ಲ. ಅದು ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೇ? ನೀವು ಅಧಿಕಾರಕ್ಕೆ ಬಂದಾಗಿನಿಂದ ದೇಶ ಹೈರಾಣಾಗಿದೆ.

ಮಾಡಿರುವ ತಪ್ಪಿಗೆ ಮೊದಲು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆಲೋಚಿಸಿ. ನಿಮ್ಮಲ್ಲಿ ದೇಶಕ್ಕಾಗಿ  ತ್ಯಾಗ ಮಾಡಿದವರು ಯಾರು ಇದ್ದಾರೆ. ಒಂದು ಪ್ರಾಣಿಯೂ ತ್ಯಾಗ ಮಾಡಿಲ್ಲ ಎಂದರೆ ಸಿಟ್ಟಿಗೆ ಬರುತ್ತೀರಿ. ಆದ್ರೆ ನೀವು ಪದೇ ಪದೇ ತ್ಯಾಗ ಮಾಡಿದ್ದಿನಿ ಎನ್ನುತ್ತಿರಲ್ಲ ನೀವೇನಿದ್ರಿ. ಬ್ಯಾರಿಸ್ಟರಾ, ರಾಜ ಇದ್ದರಾ ಎಂದು ಕೇಳುವ ಮೊದಲು ನಿಮ್ಮ ತ್ಯಾಗದ ಮೌಲ್ಯ ನೋಡಿಕೊಳ್ಳಿ ಎಂದು ಹೇಳಿದರು. 

ಮಾಜಿ ಸಚಿವ ಹಾಗೂ ಹಾಲಿ ಶಾಸಕ ಖಮರುಲ್‌ ಇಸ್ಲಾಂ ಮಾತನಾಡಿ, ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಕೊಡುವಲ್ಲಿ ಹೆಚ್ಚು ಸಕ್ರಿಯವಾಗಿದೆ. ಹಲವಾರು ಜನಕಲ್ಯಾಣ ಯೋಜನೆಗಳ ಮೂಲಕ ಜನರಿಗೆ ನೆಮ್ಮದಿ ನೀಡಿದೆ. ಸಿದ್ದರಾಮಯ್ಯ ಅವರ ಸರಕಾರ ನುಡಿದಂತೆ ನಡೆದುಕೊಳ್ಳುತ್ತಿದೆ. ಈ ಕುರಿತು ನಮ್ಮ ಕಾರ್ಯಕರ್ತರು ಜನರಿಗೆ ತಿಳಿ ಹೇಳಿ ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು. 

ಪಕ್ಷದ ಕೆಪಿಸಿಸಿ ಸದಸ್ಯ ಡಿ.ಆರ್‌. ಪಾಟೀಲ ಮಾತನಾಡಿದರು. ಇದಕ್ಕೂ ಮುನ್ನ ಗೃಹ ಖಾತೆ ಸಚಿವ ಜಿ. ಪರಮೇಶ್ವರ ಸಭೆ ಉದ್ಘಾಟಿಸಿದರು. ತೊಗರಿ ಮಂಡಳಿ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಾಗಣ್ಣಗೌಡ ಸಂಕನೂರು ಪ್ರಾಸ್ತಾವಿಕವಾಗಿ ಮಾತನಾಡಿದರು. 

ಸಚಿವ ಡಾ| ಶರಣಪ್ರಕಾಶ ಪಾಟೀಲ, ಶಾಸಕ ಡಾ| ಉಮೇಶ ಜಾಧವ, ಎಂಎಲ್‌ಸಿ ಶರಣಪ್ಪ ಮಟ್ಟೂರ, ಅಲ್ಲಂಪ್ರಭು ಪಾಟೀಲ, ದಶರಥ ಒಂಟಿ, ತಿಪ್ಪಣ್ಣಪ್ಪ ಕಮಕನೂರ, ಮಜರ್‌ ಹುಸೇನ್‌, ಕಾಡಾ ಅಧ್ಯಕ್ಷ ಮಹಾಂತಪ್ಪ  ಸಂಗಾವಿ, ಭೀಮಣ್ಣ ಸಾಲಿ, ಶಿವಕುಮಾರ ತೋರಣ, ಮಾರುತಿರಾವ ಮಾಲೆ, ಚಂದ್ರಿಕಾ ಪರಮೇಶ್ವರ, ಬಸವರಾಜ ಭೀಮಳ್ಳಿ, ನೀಲಕಂಠ ಮೂಲಗೆ, ಆಲಂ ಖಾನ್‌ ಇನ್ನೂ ಹಲವಾರು ನಾಯಕರು ಹಾಗೂ ಮುಖಂಡರು ಇದ್ದರು.  

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-sedam

Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ

1-sci

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.