ಕರ್ನಾಟಕ ಕೇಂದ್ರೀಯ ವಿವಿ ಅಂತಾರಾಷ್ಟ್ರೀಯ ವಿವಿಯಾಗಲಿ
Team Udayavani, Sep 14, 2017, 10:38 AM IST
ಕಲಬುರಗಿ: ಕರ್ನಾಟಕ ಕೇಂದ್ರೀಯವಿಶ್ವವಿದ್ಯಾಲಯವು ಸ್ವಲ್ಪ ಕಾಲಾವಧಿಯಲ್ಲಿಯೆ ಅಪ್ರತಿಮ ಸಾಧನೆಮಾಡಿರುವುದು ಸಂತೋಷದಾಯಕವಾಗಿದೆ. ಆದರೆ ಸಾಧಿಸಬೇಕಾದದ್ದು ಇನ್ನು ಸಾಕಷ್ಟಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ|ಎಸ್.ಎನ್ ಹೆಗಡೆ ಹೇಳಿದರು.
ಕಡಗಂಚಿ ಬಳಿಯ ಕರ್ನಾಟಕ ಕೇಂದ್ರೀಯವಿಶ್ವವಿದ್ಯಾಲಯದ ಶಿಕ್ಷಕ ಮತ್ತು ಸಂಶೋಧನಾವಿದ್ಯಾರ್ಥಿಗಳೊಂದಿಗೆ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು. ಅಂತಾರಾಷ್ಟ್ರೀಯಮಟ್ಟದ ಶಿಕ್ಷಕರನ್ನು ಮತ್ತು ವಿದ್ಯಾರ್ಥಿಗಳನ್ನು ಆಕರ್ಷಿಸುವುದು ಅತ್ಯವಶ್ಯಕವಾಗಿದೆ. ಯಾವುದೇ ವಿಶ್ವವಿದ್ಯಾಲಯ ಅದು ಹೊಂದಿರುವ ಗುಣಾತ್ಮಕ ಶಿಕ್ಷಕರಿಂದ ಮತ್ತು ವಿದ್ಯಾರ್ಥಿಗಳಿಂದ ಹೆಸರುವಾಸಿಯಾಗಿರುತ್ತದೆಯೇ ವಿನಃ ಆಡಳಿತಗಾರರಿಂದಲ್ಲ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವನ್ನು ನಿರ್ಮಿಸುವಲ್ಲಿ ಪ್ರೊ| ಡಿ.ಸಿ. ಪಾವಟೆ ಹೇಗೆ ತಮ್ಮ ಪಾತ್ರ ನಿರ್ವಹಿಸಿದರೋ ಅದೆ ರೀತಿ ಪ್ರೊ| ಎಚ್.ಎಂ ಮಹೇಶ್ವರಯ್ಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಏಳಿಗೆಗೆ ಪಾತ್ರ ಅತಿಮುಖ್ಯವಾಗಿದೆ ಎಂದರು.
ಶಿಕ್ಷಕರು ಯು.ಜಿ.ಸಿಯ ಎ.ಪಿ.ಐ ಅಂಕಗಳಿಗೆ ತಲೆಕೆಡಿಸಿಕೊಳ್ಳದೆ, ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವುದು ಮತ್ತು ತಮ್ಮನ್ನುತಾವು ಸಾಮಾಜಿಕವಾಗಿ ಉಪಯುಕ್ತವಾದಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಪ್ರೊ| ಎಸ್.ಎನ್. ಹೆಗಡೆ ಹೇಳಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಸ್.ಆರ್. ನಿರಂಜನ ಮಾತನಾಡಿ, ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಶೈಕ್ಷಣಿಕವಾಗಿಹಾಗೂ ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಈಭಾಗದ ಎಲ್ಲಾ ವಿಶ್ವವಿದ್ಯಾಲಯಗಳು ಒಟ್ಟಾಗಿಕಾರ್ಯನಿರ್ವಹಿಸಬೇಕಾದ ಅವಶ್ಯತಕೆಯಿದೆ ಎಂದರು.
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಚ್.ಎಂ. ಮಹೇಶ್ವರಯ್ಯ ಪ್ರಾಸ್ತಾವಿಕ ಮಾತನಾಡಿದರು. ಡಾ| ರಾಜೀವ್ ಜೋಶಿ ಸ್ವಾಗತಿಸಿದರು, ಕುಲಸಚಿವ ಪ್ರೊ|ಚಂದ್ರಕಾಂತ ಯಾತನೂರ ವಂದಿಸಿದರು. ಪ್ರೊ| ಎನ್. ನಾಗರಾಜು, ವಿವಿಧ ನಿಕಾಯಗಳ ಡೀನ್ಗಳು, ವಿದ್ಯಾರ್ಥಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ