ಕಾಂಗ್ರೆಸ್‌ ಬಿಟ್ಟ ಗುತ್ತೇದಾರ್‌ ಮಣಿಸಲು ಖರ್ಗೆ ಕ್ಯಾಂಪ್‌ ತಂತ್ರ


Team Udayavani, Apr 28, 2018, 6:00 AM IST

mallikarjun-kharge–27.jpg

ಕಲಬುರಗಿ: ಅಫಜಲಪುರ ಕ್ಷೇತ್ರದಿಂದ 6 ಸಲ ಶಾಸಕರಾಗಿರುವ ಮಾಲೀಕಯ್ಯ ಗುತ್ತೇದಾರ್‌ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರಿಗೆ ಎದುರಾಳಿಯಾಗಿ ಕಾಂಗ್ರೆಸ್‌ನಿಂದ ಎಂ.ವೈ.ಪಾಟೀಲ್‌ ಸ್ಪರ್ಧಿಸಿದ್ದಾರೆ. ಆದರೆ, ತಮಗೆ ಸಚಿವ ಪಟ್ಟ ತಪ್ಪಿಸಲು ಕಾರಣ ರಾಗಿದ್ದಾರೆಂದು ಗುತ್ತೇದಾರ್‌, ಖರ್ಗೆ ಹಾಗೂ ಅವರ ಪುತ್ರ ಪ್ರಿಯಾಂಕ ವಿರುದ್ಧ ಸಮರ ಸಾರಿದ್ದಾರೆ. ಇದನ್ನು ಖರ್ಗೆ ಹಾಗೂ ಕಾಂಗ್ರೆಸ್‌ ಸವಾಲಾಗಿ ಸ್ವೀಕರಿಸಿರುವುದರಿಂದ ಅಫಜಲಪುರ ಕ್ಷೇತ್ರ ರಣಾಂಗಣವಾಗಿ ಮಾರ್ಪಟ್ಟಿದೆ. 

ಅಫಜಲಪುರ ಕ್ಷೇತ್ರದಲ್ಲಿ ಪಕ್ಷ ನಿಷ್ಠೆಗಿಂತ ವ್ಯಕ್ತಿ ನಿಷ್ಠೆ ಮುಖ್ಯ ಎಂಬುದನ್ನು ಇತಿಹಾಸವೇ ತಿಳಿಸುತ್ತದೆ. ಕಾಂಗ್ರೆಸ್‌ ಅಭ್ಯರ್ಥಿ ಎಂ.ವೈ.ಪಾಟೀಲ್‌ ಹಾಗೂ ಬಿಜೆಪಿ ಅಭ್ಯರ್ಥಿ ಗುತ್ತೇದಾರ್‌ ಎದುರಾಳಿಗಳು. ಜೆಡಿಎಸ್‌ ಅಭ್ಯರ್ಥಿ, ರಾಜೇಂದ್ರ ಪಾಟೀಲ್‌ ರೇವೂರ ಪೈಪೋಟಿ ನೀಡಿರುವುದರಿಂದ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಗುತ್ತೇದಾರ್‌ರನ್ನು ಮಣಿಸಲು ಪಾಟೀಲ್‌ದ್ವಯರು ತಂತ್ರಗಾರಿಕೆ ರೂಪಿಸುತ್ತಿದ್ದಾರೆ.

ಈವರೆಗೆ ನಡೆದ 13 ಚುನಾವಣೆಗಳಲ್ಲಿ 8 ಬಾರಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದರೆ, ಬಿಜೆಪಿ ಒಮ್ಮೆಯೂ ಜಯ ಸಾಧಿಸಿಲ್ಲ. ಮಾಲೀಕಯ್ಯ ಗುತ್ತೇದಾರ ನಾಲ್ಕು ಸಲ ಕಾಂಗ್ರೆಸ್‌ನಿಂದ, ಜೆಡಿಎಸ್‌ ಹಾಗೂ ಕೆಸಿಪಿಯಿಂದ ತಲಾ ಒಂದು ಸಲ ಗೆದ್ದಿದ್ದಾರೆ. ಎಂ.ವೈ.ಪಾಟೀಲ್‌ ಅವರು ಜನತಾ ಪಕ್ಷ ಹಾಗೂ ಜನತಾದಳದಿಂದ ತಲಾ ಒಂದು ಸಲ ಗೆದ್ದಿದ್ದಾರೆ.

ನಿರ್ಣಾಯಕ ಅಂಶವೇನು?
ಮಾಲೀಕಯ್ಯ ಗುತ್ತೇದಾರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ವೀರಶೈವ-ಲಿಂಗಾಯತರ ಒಳಪಂಗಡ ಆದಿಲಿಂಗಾಯತ ಸಮುದಾಯ ಹಾಗೂ ಅಲ್ಪಸಂಖ್ಯಾತ, ಕುರುಬ ಹಾಗೂ ದಲಿತ ವರ್ಗದ ಮತಗಳು ಈ ಮೊದಲಿನಷ್ಟು ಬಾರದಿರುವ ಅಂಶ ಸ್ಪಷ್ಟವಾಗಿ ಕಂಡು ಬರುತ್ತಿದೆ. ಈ ವರ್ಗದ ಮತಗಳು ಕಾಂಗ್ರೆಸ್‌ ಇಲ್ಲವೇ ಜೆಡಿಎಸ್‌ ಇಬ್ಬರಲ್ಲಿ ಯಾರಿಗೆ ಹೆಚ್ಚು ಒಲಿಯುತ್ತವೆಯೋ ಅವರ ದಾರಿ ಸುಲಭವಾಗುತ್ತದೆ. ಖರ್ಗೆ ಹಾಗೂ ಜಿಲ್ಲೆಯ ಸಚಿವರಿಬ್ಬರು ಅಫಜಲಪುರ ಕ್ಷೇತ್ರದ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರಿಂದ ಇವರ ತಂತ್ರಗಾರಿಕೆಗಳೇ ನಿರ್ಣಾಯಕ ಅಂಶವಾಗಿದೆ. ಜೆಡಿಎಸ್‌ನ ರಾಜೇಂದ್ರ ಪಾಟೀಲ್‌ ಹಾಗೂ ಕಾಂಗ್ರೆಸ್‌ ನ ಎಂ.ವೈ. ಪಾಟೀಲ್‌ ಇಬ್ಬರೂ ಲಿಂಗಾಯತರು. ಇಬ್ಬರಿಗೂ ಲಿಂಗಾಯತ ಮತಗಳು ಹಂಚಿಕೆಯಾಗಲಿವೆ ಎನ್ನಬಹುದಾದರೂ ಮಾಲೀಕಯ್ಯ ಗುತ್ತೇದಾರ ಪಡೆಯುವ ಲಿಂಗಾಯತ ಸಮುದಾಯದ ಮೇಲೆ ಫಲಿತಾಂಶ ಅಲವಂಬನೆಯಾಗಿದೆ.

ಪಕ್ಷಗಿಂತ ವ್ಯಕ್ತಿ ನಿಷ್ಠೆ ತೋರುತ್ತಾ ಕ್ಷೇತ್ರದ ಜನರು ಪ್ರತಿ ಸಲ ನನ್ನನ್ನು ಗೆಲ್ಲಿಸುತ್ತಾ ಬರುತ್ತಿದ್ದಾರೆ.ಕ್ಷೇತ್ರದ ಜನರಿಗೆ ಗುತ್ತೇದಾರ
ಕುಟುಂಬದ ಮೇಲೆ ಹೆಚ್ಚು ನಂಬಿಕೆ ಹಾಗೂ ಪ್ರೀತಿ ಇದೆ.

–  ಮಾಲೀಕಯ್ಯ ಗುತ್ತೇದಾರ, ಬಿಜೆಪಿ

ಮಾಲೀಕಯ್ಯ ರಾಜಕೀಯದಲ್ಲಿ ತಮ್ಮ ದಂಧೆ ವೃದಿಟಛಿಸಿಕೊಳ್ಳುತ್ತಾ ಬಂದಿದ್ದಾರೆ. ಭೀಮಾ ನದಿಯಲ್ಲಿನ ಮರಳು ಲೂಟಿ, ಅಕ್ರಮ ಸಾರಾಯಿ ದಂಧೆಗಳೇ ಇದಕ್ಕೆ ಸಾಕ್ಷಿ. ಇದಕ್ಕೆ ಕೊನೆಗಾಣಿ ಸಲು ಜನ ನನಗೇ ಆಶೀರ್ವಾದ ಮಾಡಲಿದ್ದಾರೆ.
– ಎಂ.ವೈ.ಪಾಟೀಲ್‌, ಕಾಂಗ್ರೆಸ್‌

ಮಾಲೀಕಯ್ಯ ಗುತ್ತೇದಾರ ಹಾಗೂ ಎಂ.ವೈ.ಪಾಟೀಲ್‌ ಇಬ್ಬರೂ ಎಲ್ಲ ಕಾರ್ಯದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಇವರಿಬ್ಬರನ್ನು ಬದಲಾಯಿಸಿ ಹೊಸ ಮುಖಕ್ಕೆ ಅವಕಾಶ ನೀಡಲು ಮತದಾರರು ದೃಢ ನಿಶ್ಚಯ ಮಾಡಿದ್ದಾರೆ.
– ರಾಜೇಂದ್ರ ಪಾಟೀಲ್‌, ಜೆಡಿಎಸ್‌

– ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.