KKRDB- KK ಸಂಘದ ಆಡಳಿತ ಮಂಡಳಿ ರದ್ದುಗೊಳಿಸಿ ಆದೇಶ


Team Udayavani, May 22, 2023, 8:13 PM IST

1-adasad

ಕಲಬುರಗಿ: ಸರ್ಕಾರದ ಯೋಜನೆಗಳೇ ಪರಿಣಾಮಕಾರಿ ತಲುಪಿಸುವ ನಿಟ್ಟಿನಲ್ಲಿ ಈ ಹಿಂದಿನ ಬಿಜೆಪಿ‌ ಸರ್ಕಾರ ರಾಜ್ಯಸಭಾ ಮಾಜಿ ಸದಸ್ಯ ಡಾ.‌ಬಸವರಾಜ ಪಾಟೀಲ್ ಸೇಡಂ ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ತರಲಾಗಿದ್ದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಆಡಳಿತ ಮಂಡಳಿಯನ್ನು ರಾಜ್ಯದ ನೂತನ ಸರ್ಕಾರ ರದ್ದುಗೊಳಿಸಿ ಅಧಿಸೂಚನೆ ಹೊರಡಿಸಿದೆ.

ಅದೇ ರೀತಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ ಡಿಬಿ) ಗೆ ನಾಮನಿರ್ದೇಶನಗೊಳಿಸಲಾಗಿದ್ದ ಅಧ್ಯಕ್ಷರು ಹಾಗೂ ಸದಸ್ಯರು ಗಳ ನಾಮನಿರ್ದೇಶನ ಸಹ ರದ್ದುಗೊಳಿಸಲಾಗಿದೆ. ಯೋಜನೆ ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ನಿರ್ದೇಶಕರು ಹಾಗೂ ಪದ ನಿಮಿತ್ತ ಸರ್ಕಾರದ ಉಪಕಾರ್ಯದರ್ಶಿ ಡಿ.‌ಚಂದ್ರಶೇಖರಯ್ಯ ಈ ಎರಡು ಆಡಳಿತ ಮಂಡಳಿಯನ್ನು ರದ್ದುಗೊಳಿಸಿ ಅಧಿಸೂಚನೆ ಹೊರಡಿಸಿದ್ದಾರೆ.

ಕೆಕೆ ಸಂಘ ಉಳಿಸುತ್ತಾರೆಯೋ ಇಲ್ಲ ರದ್ದುಗೊಳಿಸುತ್ತಾರೆಯೋ?
ಹೊಅ ದಿಕ್ಕು ಹಾಗೂ ಹೊಸ ವಿಚಾರ ಮತ್ತು ಸ್ವಾವಲಂಬನೆ ಬದುಕು ರೂಪಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಅಸ್ತಿತ್ವಕ್ಕೆ ತರಲಾಗಿದೆ. ಆದರೆ ಈ ಸಂಘಕ್ಕೆ ಸರ್ಕಾರದಿಂದ ನೇರವಾಗಿ ಅನುದಾನ ಬಾರದೇ ಕೆಕೆಆರ್ ಡಿಬಿ ಗೆ ಬಂದ ಅನುದಾನದಲ್ಲೇ ಸಂಘಕ್ಕೆ ನೀಡಿರುವುದು ವ್ಯಾಪಕ ಅಸಮಾಧಾನ ಹಾಗೂ ವಿರೋಧ ಕ್ಕೆ ಕಾರಣವಾಗಿತ್ತು. ಯೋಜನೆ ಹಾಗೂ ಕಾರ್ಯಕ್ರಮಗಳ ತಕ್ಕ ಅನುದಾನ ದೊರಕದ ಹಿನ್ನೆಲೆಯಲ್ಲಿ ಮಾಜಿ ಸಂಸದ ಹಾಗೂ ಸಂಘದ ಅಧ್ಯಕ್ಷರಾಗಿದ್ದ ಡಾ.‌ಬಸವರಾಜ ಪಾಟೀಲ್ ಸೇಡಂ ಮೂರು ತಿಂಗಳ ಹಿಂದೆಯೇ ಆಗಿನ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಸಂಘ ಮುಂದುವರೆಸಿಕೊಂಡು ಹೋಗಲು ಹೊಸದಾಗಿ ಮಂಡಳಿ ನಿಯೋಜಿಸುವಂತೆ ಪತ್ರ ಬರೆದು ಅಸಮಾಧಾನ ಹೊರ ಹಾಕಿದ್ದರಲ್ಲದೇ ಸಿಬ್ಬಂದಿಗಳಿಗೆ ನಿಮ್ಮ ಉದ್ಯೋಗ ನೋಡಿಕೊಳ್ಳಿ ಎಂದು ಹೇಳಿದ್ದರಂತೆ. ಆದರೆ ಮುಖ್ಯ ಮಂತ್ರಿಗಳು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.

ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರ ಸಧ್ಯಕ್ಕಂತು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಆಡಳಿತ ಮಂಡಳಿ ರದ್ದುಪಡಿಸದೆ. ಮುಂದಿನ‌ ದಿನಗಳಲ್ಲಿ ಸಂಘ ರದ್ದುಪಡಿಸುತ್ತದೆಯೋ ಇಲ್ಲಬೇ ಮುಂದುವರೆಸುತ್ತದೆ‌ಯೋ ಎಂಬುದನ್ನು ಕಾದು ನೋಡಬೇಕಿದೆ.

ಕೆಕೆಆರ್ ಡಿಬಿ ಆಡಳಿತ ಮಂಡಳಿಯನ್ನು ರದ್ದು ಮಾಡಿರುವ ಸರ್ಕಾರ, ಆದಷ್ಟು ಬೇಗ ನೂತನ ಅಧ್ಯಕ್ಷ ರ ಹಾಗೂ ಸದಸ್ಯರ ನಾಮನಿರ್ದೇಶನ ಗೊಳಿಸುವುದು ಅಗತ್ಯವಾಗಿದೆ‌ ಏಕೆಂದರೆ ಮಂಡಳಿಗೆ ಐದು ಸಾವಿರ ಕೋ.ರೂ ಅನುದಾನ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ರಚಿಸಿದಲ್ಲಿ ಕ್ರಿಯಾ ಯೋಜನೆ ರೂಪಿಸಲು ಹಾಗೂ ಸರ್ಕಾರದ ಅನುಮತಿ ಪಡೆಯಲು ಸಹಕಾರಿಯಾಗುತ್ತದೆ. ಈ ಮಂಡಳಿಗೆ ಮೊದಲು ಸಚಿವರೇ ಅಧ್ಯಕ್ಷರಾಗುವಂತಿತ್ತು.‌ ಆದರೆ ಹಿಂದಿನ ಬಿಜೆಪಿ ಸರ್ಕಾರ ಶಾಸಕರೂ ಅಧ್ಯಕ್ಷರಾಗುವಂತೆ ಮಂಡಳಿ ನಿಯಮಾವಳಿಗೆ ತಿದ್ದುಪಡಿ ತರಲಾಗಿತ್ತು. ಆದರೆ ನೂತನ ಕಾಂಗ್ರೆಸ್ ಸರ್ಕಾರ ಇದೇ ನಿಯಮಾವಳಿ ಮುಂದುವರೆಸುತ್ತದೆಯೋ ಇಲ್ಲವೇ ತಿದ್ದುಪಡಿ ತರಲಾಗುತ್ತದೆಯೋ ಎಂಬುದನ್ನು ಸಹ ಕಾದು ನೋಡಬೇಕಿದೆ. ಒಟ್ಟಾರೆ ಈ ಮೇಲಿನ ಎರಡೂ ಆಡಳಿತ ಮಂಡಳಿ ಇಷ್ಟು ಬೇಗನೆ ರದ್ದು ಮಾಡಿರುವಂತೆ ಹೊಸ ಮಂಡಳಿ ಸಹ ನೇಮಕಗೊಂಡಲ್ಲಿ ಅಭಿವೃದ್ಧಿಗೆ ಪೂರಕವಾಗುತ್ತದೆ.‌

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.