ಆಸ್ತಿ ನಗದೀಕರಣಕ್ಕೆ ಮುಂದಾದ ಕೆಕೆಆರ್‌ಟಿಸಿ


Team Udayavani, Aug 7, 2022, 3:07 PM IST

5kalaburugi

ಕಲಬುರಗಿ: ಕೋವಿಡ್‌ದಿಂದ ತೀವ್ರ ನಷ್ಟದಿಂದ ಹೊರ ಬರಲು ಇಲ್ಲಿನ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಹತ್ತಾರು ನಿಟ್ಟಿನಲ್ಲಿ ಹೊಸ ಕಾರ್ಯಕ್ಕೆ ಮುಂದಾಗಿದ್ದು, ಅದರಲ್ಲಿ ಪ್ರಮುಖವಾಗಿ ಸಂಸ್ಥೆಯ ಆಸ್ತಿ ನಗದೀಕರಣಕ್ಕೆ ಯೋಜನೆ ರೂಪಿಸಲಾಗಿದೆ.

ಸಂಸ್ಥೆಯ ವ್ಯಾಪ್ತಿಯಡಿ 10 ಕಡೆ ತೈಲ ಬಂಕ್‌ ಗಳನ್ನು ಸ್ಥಾಪಿಸಲು ತೈಲ ಕಂಪನಿಗಳಿಗೆ ಸಂಸ್ಥೆಯ ಒಡಂಬಡಿಕೆ ಮುಂದಾಗಿ, ಈಗಾಗಲೇ ಬಂಕ್‌ ಗಳ ಕಾರ್ಯಾರಂಭ ಮೂಲಕ ಆದಾಯ ಕಂಡುಕೊಳ್ಳಲು ನಿರ್ಧರಿಸಲಾಗಿದೆ. ಅಂದರೆ ಕಲಬುರಗಿ ಸೇರಿದಂತೆ ಸಂಸ್ಥೆಯ ವ್ಯಾಪ್ತಿಯಲ್ಲಿ 10 ಬಂಕ್‌ಗಳು ಸ್ಥಾಪನೆಯಾಗಲಿವೆ. ಈ ಮೂಲಕ ಕೆಕೆಆರ್‌ಟಿಸಿಗೆ ಬಾಡಿಗೆ ರೂಪದಲ್ಲಿ ತಿಂಗಳ ಆದಾಯ ನಿಶ್ಚಿತವಾಗಲಿದೆ.

ಬಂಕ್‌ಗಳ ಸ್ಥಾಪನೆ ಜತೆಗೆ ಸಂಸ್ಥೆಯ ಜಾಗದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ದಲ್ಲಿ ವಿವಿಧ ಕಾರ್ಯ ಕೈಗೊಳ್ಳಲು ಡಿಪಿಆರ್‌ ರೂಪಿಸಲಾಗಿದೆ. ಕಲಬುರಗಿ ಮಹಾನಗರದ ಡಿಪೋ 1ರಲ್ಲಿನ 2.50 ಎಕರೆ ಜಾಗದಲ್ಲಿ ವಾಣಿಜ್ಯ ಚಟುವಟಿಕೆ ಸೇರಿದಂತೆ ಇತರೆ ಕಾರ್ಯಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ.

ಕೇಂದ್ರ ಕಚೇರಿ ಕಟ್ಟಡಕ್ಕೂ ಖಾಸಗಿ ಸಹಭಾಗಿತ್ವ

ಇಷ್ಟು ದಿನ ಸಂಸ್ಥೆಯ ಜಾಗ ಖಾಸಗಿಯವರಿಗೆ ಬಾಡಿಗೆ ನೀಡಲಾಗಿದ್ದರೆ ಜತೆಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಮುಂದಾಗಿರುವ ನಡುವೆ ಸಂಸ್ಥೆಯ ಕೇಂದ್ರ ಕಚೇರಿ ಕಟ್ಟಡ ಕಾರ್ಯ ಸಹ ಪಿಪಿಪಿ ಅಡಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಅಂದರೆ ಈಗಿರುವ ಕಳೇ ಕಟ್ಟಡ ನೆಲಸಮಗೊಂಡು ಹೊಸ ಕಟ್ಟಡ ತಲೆ ಎತ್ತಲಿದೆ. ಹಗರಿಬೊಮ್ಮನಹಳ್ಳಿಯ ಬಸ್‌ ಡಿಪೋ ಘಟಕದ ಜಾಗದಲ್ಲಿ ಗಂಧದ ಗಿಡ ಬೆಳೆಯಲಾಗುತ್ತಿದೆ. ಇದರ ಮೂಲಕವೂ ಆದಾಯ ಕಂಡುಕೊಳ್ಳಲು ಮುಂದಾಗಿರುವುದನ್ನು ನೋಡಿದರೆ ಕೆಕೆಆರ್‌ ಟಿಸಿ ಒಟ್ಟಾರೆ ಯಾವುದೇ ಮೂಲಗಳಿಂದ ಹಣ ಗಳಿಸಬಹುದು ಎಂಬುದನ್ನು ನಿರೂಪಿಸಲು ಮುಂದಾಗಿರುವುದು ಕಂಡು ಬರುತ್ತಿದೆ.

1619 ಹುದ್ದೆಗಳ ಭರ್ತಿಗೆ ಚಾಲನೆ

ಕೆಕೆಆರ್‌ ಟಿಸಿಯಲ್ಲಿ ಚಾಲಕ ಕಂ ನಿರ್ವಾಹಕ ಹುದ್ದೆಗಳ ಖಾಲಿ ಇರುವುದರಿಂದ ಸಮಸ್ಯೆಯಾಗುತ್ತಿರುವುದನ್ನು ತಕ್ಕಮಟ್ಟಿಗೆ ನಿಭಾಯಿಸಲು ಸಂಸ್ಥೆ ಮುಂದಾಗಿದ್ದು, ಕಳೆದ ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಚಾಲಕ ಕಂ ನಿರ್ವಾಹಕ ಹುದ್ದೆಗಳ ಭರ್ತಿಗೆ ಈ ಕ್ರಮಕ್ಕೆ ದೃಢ ಹೆಜ್ಜೆ ಇಡಲಾಗಿದೆ. ಪ್ರಸಕ್ತ ಆಗಸ್ಟ್‌ ತಿಂಗಳ ಮಾಸಾಂತ್ಯಕ್ಕೆ ಅರ್ಜಿಗಳ ಪರಿಶೀಲನಾ ಕಾರ್ಯ ಕೈಗೆತ್ತಿಕೊಂಡು ಚಾಲನೆ ನೀಡಲಾಗುತ್ತಿದೆ. 2020ರಲ್ಲಿಯೇ 38 ಸಾವಿರ ಅರ್ಜಿಗಳು ಬಂದಿದ್ದು, ಮೀಸಲಾತಿ ಅನ್ವಯ ನೇಮಕಾತಿ ನಡೆಯಲಿದೆ. ಅರ್ಜಿಗಳ ಪರಿಶೀಲನೆ ನಡೆದ ನಂತರ ತರಬೇತಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಹುಮನಾಬಾದ್‌ದಲ್ಲಿರುವ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ತರಬೇತಿ ನೀಡಲಾಗುವುದು. ಒಟ್ಟಾರೆ ಆರೇಳು ತಿಂಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಮುಂದಾಗಲಾಗಿದೆ ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ತಿಳಿಸಿದ್ದಾರೆ.

ಅದೇ ರೀತಿ 35 ಬ್ಯಾಕ್‌ಲಾಗ್‌ ಹುದ್ದೆಗಳಿಗೂ ಅಧಿಸೂಚನೆ ಹೊರಡಿಸಲು ಮುಂದಾಗಲಾಗಿದೆ. 150 ಕಂಡಕ್ಟರ್‌ ಲೆಸ್‌ ಬಸ್‌ಗಳನ್ನು ನಿರ್ವಹಿಸಲು ತಕ್ಷಣಕ್ಕೆ ಮುಂದಾಗಲಾಗಿದೆ. ಶ್ರೀನಿವಾಸ ಆಯೋಗದ ಶಿಫಾರಸ್ಸಿನಂತೆ ಹತ್ತಾರು ಕ್ರಮಕ್ಕೆ ಮುಂದಾಗುವುದರ ಮೂಲಕ ಸಂಸ್ಥೆ ಹತ್ತಾರು ವಿನೂತನ ಯೋಜನೆಗಳನ್ನು ರೂಪಿಸಲಾಗಿದೆ.

ಗುಜರಿ ಬಸ್‌ಗಳ ವಿಲೇವಾರಿಗೆ ಮುಂದಾಗಲಾಗಿದೆ. ತುರ್ತಾಗಿ 300 ಬಸ್‌ಗಳ ವಿಲೇವಾರಿಗೆ ಟೆಂಡರ್‌ ಕರೆಯಲಾಗಿದೆ. ಅದೇ ರೀತಿ 10 ವೋಲ್ವೋ, 30 ನಾನ್‌ ಎಸಿ ಬಸ್‌ಗಳ ಖರೀದಿಗೆ ನಿರ್ಧರಿಸಲಾಗಿದೆ. ಈ ಸಂಬಂಧ ಪ್ರಸ್ತಾವನೆ ಸಚಿವ ಸಂಪುಟಕ್ಕೆ ಕಳುಹಿಸಿ ಕೊಡಲಾಗಿದೆ. ಎಂ. ರಾಚಪ್ಪ, ಎಂಡಿ, ಕೆಕೆಆರ್ಟಿಸಿ

-ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.