ಹೊಟ್ಟೆಗೆ ಅನ್ನ-ಅರಿವಿಗೆ ಜ್ಞಾನ ಅವಶ್ಯ: ರಂಭಾಪುರಿ ಜಗದ್ಗುರು
Team Udayavani, Feb 10, 2019, 8:45 AM IST
ಕಲಬುರಗಿ: ಹೊಟ್ಟೆಗೆ ಅನ್ನ-ಅರಿವಿಗೆ ಜ್ಞಾನ ಅವಶ್ಯಕವಾಗಿದ್ದು, ಒಳ್ಳೆಯ ಮಾತು, ಆಚರಣೆಗೆ ಬದುಕನ್ನೇ ಪರಿವರ್ತಿಸುವ ಶಕ್ತಿಯಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಡಾ| ವೀರಸೋಮೇಶ್ವರ ಜಗದ್ಗುರುಗಳು ನುಡಿದರು.
ಚಿತ್ತಾಪುರ ತಾಲೂಕಿನ ಬೆಳಗುಂಪಾ ಬೃಹನ್ಮಠದ ಪಟ್ಟಾಧಿಕಾರ ಮಹೋತ್ಸವ ಅಂಗವಾಗಿ ಪೂರ್ವಭಾವಿಯಾಗಿ ನಡೆದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಧರ್ಮದ ದಿಕ್ಸೂಚಿ ಇಲ್ಲದಿದ್ದರೆ ಬದುಕಿಗೆ ಬೆಲೆಯಿಲ್ಲ. ಅಂತರಂಗ ಬಹಿರಂಗ ಶುದ್ಧಿಯೇ ವೀರಶೈವ ಧರ್ಮದ ಪರಮ ಗುರಿಯಾಗಿದೆ ಎಂದು ಹೇಳಿದರು.
ಖಾದರಸಿರಸಗಿಯ ಶ್ರೀ ವಿಜಯಕುಮಾರ ಸ್ವಾಮೀಜಿ, ಹೊನ್ನಕಿರಣಗಿ ಶ್ರೀ ಚಂದ್ರಗುಂಡ ಶಿವಾಚಾರ್ಯ ಸ್ವಾಮೀಜಿ, ಬಡದಾಳ ತೇರಿನಮಠದ ಚನ್ನಮಲ್ಲ ಶಿವಾಚಾರ್ಯ ಸ್ವಾಮೀಜಿ ಹಾಗೂ ನರೇಗಲ್, ನೆಗಳೂರು, ಅಮ್ಮಿನಭಾವಿ, ತೋಟ್ನಳ್ಳಿ, ಸೇಡಂ ಶ್ರೀಗಳು ಉಪದೇಶ ನೀಡಿದರು. ಗಣ್ಯರಿಗೆ ಹಾಗೂ ದಾನಿಗಳಿಗೆ ರಂಭಾಪುರಿ ಜಗದ್ಗುರುಗಳು ಗುರುರಕ್ಷೆಯಿತ್ತರು.
ಅಡ್ಡಪಲ್ಲಕ್ಕಿ ಮಹೋತ್ಸವ: ಸಮಾರಂಭಕ್ಕೂ ಮುನ್ನ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ನಡೆಯಿತು. ಉತ್ಸವದಲ್ಲಿ ಕುಂಭ ಹೊತ್ತ ಮಹಿಳೆಯರು ಜಾನಪದ ಕಲಾತಂಡ, ಭಜನಾ ಮಂಡಳಿ, ಡೊಳ್ಳು ವಾದ್ಯಗಳೊಂದಿಗೆ ಹೆಜ್ಜೆಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ