ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾಗದ ಕೊಲ್ಲೂರು ಶಾಲೆ


Team Udayavani, May 16, 2022, 10:16 AM IST

2school

ವಾಡಿ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಇದೇ ಮೇ 16ರಿಂದ ಶಾಲೆ ಆರಂಭಗೊಳ್ಳುತ್ತಿದ್ದು, ಮಕ್ಕಳು ಶಾಲೆಗೆ ಹೋಗಲು ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ, ಅಂದಚಂದದಿ ಬಳುಕತ್ತ ಮಕ್ಕಳ ಸ್ವಾಗತಕ್ಕೆ ನಿಲ್ಲಬೇಕಾದ ಸರ್ಕಾರಿ ಶಾಲೆಗಳು, ಹಳೆ ಸುಣ್ಣ-ಹಳೆ ಗೋಡೆ ಎನ್ನುತ್ತ ಭಣಗುಡುತ್ತಿವೆ.

ಚಿತ್ತಾಪುರ ತಾಲೂಕಿನಲ್ಲಿ ಶಾಲಾ ಪ್ರಾರಂಭೋತ್ಸವದ ಸಂಭ್ರಮ ಕಂಡುಬರುತ್ತಿಲ್ಲ. ಬೇಸಿಗೆ ರಜೆಗೆಂದು ಊರಿಗೆ ಹೋದ ವಿವಿಧ ಗ್ರಾಮಗಳ ಶಾಲೆಯ ಮುಖ್ಯಶಿಕ್ಷಕರು ಶಾಲೆಯತ್ತ ಇಣುಕಿ ನೋಡಿಲ್ಲ. ಶಾಲೆ ವಾತಾವರಣ ಹದಗೆಡುತ್ತಿದ್ದರೂ ಶಿಕ್ಷಣ ಇಲಾಖೆ ಮೌನವಹಿಸಿದೆ. ಬಳವಡಗಿ, ಕುಂಬಾರಹಳ್ಳಿ, ಕಮರವಾಡಿ, ಸೂಲಹಳ್ಳಿ, ರಾವೂರ, ಕನಗನಹಳ್ಳಿ, ಕಡಬೂರ ಸೇರಿದಂತೆ ಇತರ ಗ್ರಾಮಗಳ ಶಾಲೆಗಳಿಗೆ ಶುಚಿತ್ವದ ಸಮಸ್ಯೆ ಕಾಡುತ್ತಿದೆ.

ಚಿತ್ತಾಪುರ ತಾಲೂಕಿನಲ್ಲಿ ಶಿಕ್ಷಣಾ ಧಿಕಾರಿಗಳ ಆಡಳಿತ ವೈಖರಿ ಜಿಡ್ಡುಗಟ್ಟಿದೆ ಎನ್ನುವುದಕ್ಕೆ ಶಾಲೆಗಳು ಎದುರಿಸುತ್ತಿರುವ ಸೌಲಭ್ಯದ ಕೊರತೆಗಳೇ ಸಾಕ್ಷಿಯಾಗಿವೆ. ಸೋಮವಾರ (ಮೇ 16) ಶಾಲೆ ತೆರೆದು ಮಕ್ಕಳನ್ನು ಸ್ವಾಗತಿಸಿಕೊಳ್ಳಿ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಶಾಲೆ ಶುರುವಾಗುವ ಮುಂಚೆ ತರಗತಿ ಕೋಣೆ, ಆಟದ ಮೈದಾನ, ಶೌಚಾಲಯ ವ್ಯವಸ್ಥೆ ಶುಚಿಗೊಳಿಸಲು ಮುಂದಾಗಬೇಕಿದ್ದ ಶಿಕ್ಷಕರು ನಮಗೇನು ಸಂಭಂದವಿಲ್ಲ ಎನ್ನುವ ಮನಸ್ಥಿತಿಯಲ್ಲಿದ್ದಾರೆ. ನಾಲವಾರ ವಲಯದ ಕೊಲ್ಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೆಚ್ಚುವರಿ ಕೋಣೆಗಳು ಮಂಜೂರಾಗಿದ್ದು, ಕಟ್ಟಡ ಕಾಮಗಾರಿ ನಡೆಯುತ್ತಿದೆ.

ಗುತ್ತಿಗೆದಾರ ಮಕ್ಕಳ ಆಟದ ಮೈದಾನವನ್ನು ಕಬಳಿಸಿಕೊಂಡು ಮರಳು, ಕಲ್ಲು, ಸಿಮೆಂಟ್‌ ಮತ್ತು ಕಟ್ಟಡದ ತ್ಯಾಜ್ಯಗಳನ್ನು ಹರಡಿದ್ದಾನೆ. ಕಟ್ಟಿಗೆ ರಾಶಿ, ಕಬ್ಬಿಣದ ರಾಡುಗಳ ದಾಸ್ತಾನನ್ನು ಬೇಕಾಬಿಟ್ಟಿ ಸಂಗ್ರಹಿಸಲಾಗಿದೆ. ಇರುವ ಕಡಿಮೆ ಕೋಣೆಗಳಲ್ಲಿ ವಿದ್ಯುತ್‌ ವೈಯರ್‌, ಸುಣ್ಣದ ಚೀಲ, ಬಣ್ಣದ ಡಬ್ಬಿಗಳು ಹಾಗೂ ಸಿಮೆಂಟ್‌ ಚೀಲಗಳನ್ನು ಹಾಕಿ ಅವಾಂತರ ಸೃಷ್ಟಿಸಿದ್ದಾರೆ.

ಹೆಣ್ಣು ಮತ್ತು ಗಂಡು ಮಕ್ಕಳ ಶೌಚಾಲಯ ಮುರಿದು ಬಿದ್ದಿವೆ. ಬಾಗಿಲುಗಳು ತುಕ್ಕು ಹಿಡಿದಿವೆ. ಕುಡಿಯುವ ನೀರಿನ ಸೌಲಭ್ಯವಿಲ್ಲ. ಹಳೆಯ ನೀರಿನ ಟ್ಯಾಂಕ್‌ ಹಸಿರು ಪಾಚಿಗಟ್ಟಿದ್ದು, ಕಳೆದ ಹದಿನೈದು ವರ್ಷಗಳಿಂದ ಬಳಕೆ ಕೈಬಿಡಲಾಗಿದೆ. ಶಾಲೆಯ ಕಾಂಪೌಂಡ್‌ ಗೋಡೆ ಶಿಥಿಲವಾಗಿ ಉರುಳಿ ಬಿದ್ದಿದೆ.

ಶಾಲೆಯಲ್ಲಿ 1 ರಿಂದ 8ರ ವರೆಗೆ ತರಗತಿಗಳು ನಡೆಯುತ್ತಿದ್ದು, ಒಟ್ಟು 521 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸದ್ಯ 12 ಶಿಕ್ಷಕರಿದ್ದು, ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಐವರು ಶಿಕ್ಷಕರ ಕೊರತೆಯಿದೆ. ಶಾಲೆಗೆ ನಳ ಸಂಪರ್ಕಕ್ಕಾಗಿ ಕೋರಿ ಎಸ್‌ ಡಿಎಂಸಿ ಅಧ್ಯಕ್ಷರು ಮನವಿ ಸಲ್ಲಿಸಿದರೂ ಗ್ರಾಪಂ ಆಡಳಿತ ಸ್ಪಂದಿಸಿಲ್ಲ ಎನ್ನುವ ಆರೋಪವಿದೆ. ಸಮಸ್ಯೆಗಳ ನಡುವೆಯೂ ಶಿಕ್ಷಕರು ಮಕ್ಕಳಿಗೆ ಅಕ್ಷರ ಜ್ಞಾನ ನೀಡುತ್ತಿರುವುದು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ.

ಮಕ್ಕಳ ಸಂಖ್ಯೆ (521) ಹೆಚ್ಚಿರುವ ಕೊಲ್ಲೂರಿನ ಶಾಲೆಗೆ ಐವರು ಶಿಕ್ಷಕರ ಕೊರತೆಯಿದೆ. ಕಳೆದ ಸಾಲಿನಿಂದ ಇಂಗ್ಲಿಷ್‌ ಬೋಧನೆ ಶುರುವಾಗಿದೆ. ತರಗತಿ ಕೋಣೆಗಳ ಕೊರತೆ ಗಮನಿಸಿ ತಾಲೂಕು ಆಡಳಿತ ಏಳು ಕೋಣೆಗಳ ನಿರ್ಮಾಣಕ್ಕೆ ಮುಂದಾಗಿದೆ. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದೇವೆ. ಆದರೂ ಸಮಸ್ಯೆ ಬಗೆಹರಿಯುತ್ತಿಲ್ಲ. ಕಟ್ಟಡ ಕಾಮಗಾರಿ ನಡೆಯುತ್ತಿರುವ ಕಾರಣ ಶುಚಿ ಮಾಡಿದಷ್ಟು ಶಾಲೆಯ ಪರಿಸರ ಹದಗೆಡುತ್ತಿದೆ. ಪರಿಣಾಮ ಸೋಮವಾರ ಬೆಳಗ್ಗೆ 6 ಗಂಟೆಯಿಂದ 10 ಗಂಟೆ ವರೆಗೆ ಶಾಲಾ ಶುಚಿತ್ವಕ್ಕೆ ಆದ್ಯತೆ ನೀಡಲು ತೀರ್ಮಾನಿಸಿದ್ದೇವೆ. ಮಕ್ಕಳು ಬರುವ ಮುಂಚೆಯೇ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತೇವೆ. ಕಾಶಪ್ಪ ಬೊಮ್ಮಣ್ಣಿ. –ಮುಖ್ಯಶಿಕ್ಷಕ, .ಹಿ. ಪ್ರಾಥಮಿಕ ಶಾಲೆ, ಕೊಲ್ಲೂರ

ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.