ಮೋದಿಯವರೇ ರಾಜ್ಯದಲ್ಲಿ 200-300 ಪರ್ಸೆಂಟ್ ಸರ್ಕಾರ ಇದೆ: ಡಿಕೆ ಶಿವಕುಮಾರ್ ವಾಗ್ದಾಳಿ

ರಾಜ್ಯದ ಜನತೆ ಸೋಂಕು ಅಂಟಿಸಿದ್ದೇ ಸರ್ಕಾರ, ಸರ್ಕಾರಕ್ಕೆ ಭ್ರಷ್ಟಾಚಾರದ ಸೋಂಕು ಅಂಟಿದೆ‌!

Team Udayavani, Aug 4, 2020, 3:42 PM IST

ಮೊದಿಯವರೇ ರಾಜ್ಯದಲ್ಲಿ 200-300 ಪರ್ಸೆಂಟ್ ಸರ್ಕಾರ ಇದೆ: ಡಿಕೆ ಶಿವಕುಮಾರ್ ವಾಗ್ದಾಳಿ

ಕಲಬುರಗಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರು‌ ನಮ್ಮ ಸರ್ಕಾರವನ್ನು ಹತ್ತು ಪರ್ಸೆಂಟ್ ಸರ್ಕಾರ ಎಂದು ಕರೆದಿದ್ದರು. ಈಗ ಎಷ್ಟು ಪರ್ಸೆಂಟ್ ಸರ್ಕಾರ ಇದೆ ಗೊತ್ತಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಉಪಕರಣ ಖರೀದಿಯಲ್ಲಿ ಕೋಟ್ಯಾಂತರ ರೂ. ಹಗರಣ ನಡೆದಿದೆ. ಸರ್ಕಾರದಲ್ಲಿ ಇನ್ನೂರು, ಮುನ್ನೂರು ಪರ್ಸೆಂಟ್ ನಡೆಯುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ಖರೀದಿಸಿದ‌‌ ಉಪಕರಣಗಳ ಬೆಲೆ ಮತ್ತು ರಾಜ್ಯ ಸರ್ಕಾರ ಖರೀಸಿದ ಉಪಕರಣಗಳ ಬೆಲೆಯೇ ಸಾಕ್ಷಿ.‌ ಇದಕ್ಕಿಂತ ಬೇರೆ ಸಾಕ್ಷಿ ಬೇಕಾ ನಿಮಗೆ ಎಂದು ಟೀಕಾ ಪ್ರಹಾರ ಮಾಡಿದರು.

ರಾಜ್ಯದಲ್ಲಿ ಕೋವಿಡ್ ಹೆಸರಲ್ಲಿ 4,500 ಕೋಟಿ ಖರ್ಚು ಮಾಡಲಾಗಿದೆ. ಅದರಲ್ಲಿ ಅರ್ಧದಷ್ಟು ಹಣ ಲೂಟಿ ಹೊಡೆಯುವ ಕೆಲಸ ಮಾಡಿದ್ದಾರೆ. ತಮಿಳುನಾಡು ಸರ್ಕಾರ ತಲಾ ಒಂದು ವೆಂಟಿಲೇಟರ್ ಗೆ 4.78 ಲಕ್ಷ ನೀಡಿ ಖರೀದಿಸಿದೆ. ಕೇಂದ್ರ ಸರ್ಕಾರ ಒಂದು ವೆಂಟಿಲೇಟರ್ 4 ಲಕ್ಷ ರೂ.ಗೆ ಖರೀದಿ ಮಾಡಿದೆ. ಆದರೆ, ರಾಜ್ಯವಸರ್ಕಾರ ಒಂದೇ ವೆಂಟಿಲೇಟರ್ ಗೆ 18.20 ಲಕ್ಷ ಕೊಟ್ಟು ಖರೀದಿ ಮಾಡಿದೆ. ಅವ್ಯವಹಾರದಲ್ಲಿ ತೊಡಗಿರುವ ಸರ್ಕಾರಕ್ಕೆ ನಾವು ಸಹಕಾರ‌ ನೀಡಬೇಕಾ ಎಂದು ಕಿಡಿಕಾರಿದರು.

ಮಹಾಭಾರತ ಯುದ್ಧದ 18 ದಿನಗಳ ಕಾಲ ನಡೆದಿದೆ.‌ ಕೋವಿಡ್ ಯುದ್ಧವನ್ನು 21 ದಿನದಲ್ಲಿ ಗೆಲ್ಲೋಣ ಎಂದು ಮೋದಿಯವರು ಹೇಳಿದರು. ನಾವು, ದೇಶದ ಜನತೆ ಎಲ್ಲರೂ ಬೆಂಬಲ ಕೊಟ್ಟರು. ಲಾಕ್ ಡೌನ್, ಸೀಲ್ ಡೌನ್ ಎಲ್ಲಾ ಮುಗಿದು 120 ದಿನ ಕಳೆದರೂ ಏನೂ ಬದಲಾಗಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ; ವಿಪಕ್ಷ ನಾಯಕ ಸಿದ್ದರಾಯಯ್ಯ ಗೆ ಕೋವಿಡ್ ಸೋಂಕು ದೃಢ: ಆಸ್ಪತ್ರೆಗೆ ದಾಖಲು

ಸರ್ಕಾರ ಹೇಳಿದಂತೆ ನಾವೂ ಸಹಕಾರ ನೀಡಿದೇವು. ನಿರ್ಗತಿಕರಿಗೆ ಊಟದ ವ್ಯವಸ್ಥೆ ಮಾಡಿದೇವು. ಕಾಂಗ್ರೆಸ್ ಪಕ್ಷದ ನಾಯಕರೆಲ್ಲ ಸೇರಿ ಕೊವೀಡ್ ನಿರ್ವಹಣೆಗೆ ಸಲಹೆ ನೀಡಿದ್ದೇವೆ. ದೇಶದಲ್ಲೇ ರಾಜ್ಯದಲ್ಲಿ ಉತ್ತಮ ಮೆಡಿಕಲ್ ಕಾಲೇಜ್ ಗಳು, ಆಸ್ಪತ್ರೆಗಳಿವೆ. ಅವರನೆಲ್ಲ ಕರೆದು ಮಾತನಾಡಿ ಎಂದು ಸಲಹೆ ಕೊಟ್ಟೇವು. ಆದರೂ, ನೀವು ಮಾತನಾಡಲಿಲ್ಲ. ಅವರೆಲ್ಲ ಬಂದರೆ ಸಚಿವರು ತಮಗೆ ಸಿಗಬಹುದಾದದ್ದು ಸಿಗಲ್ಲ ಅಂತಾ ಭಾವಿಸಿದರು ಎಂದು ದೂರಿದರು.

ರಾಜ್ಯದ ಜನತೆ ಸೋಂಕು ಅಂಟಿಸಿದ್ದೇ ಸರ್ಕಾರ. ಆದರೆ, ಯಾವ ಸಚಿವರು ಸೋಂಕಿತರನ್ನೂ ಭೇಟಿ ಮಾಡಲಿಲ್ಲ. ಯಾಕೆ ನೀವು ಹೋಗಿ ಅವರನ್ನು ಭೇಟಿ ಮಾಡಿ ಧೈರ್ಯ ಹೇಳಿದರೆ ನಿಮಗೆ ಸೋಂಕು ತಗುಲುತ್ತಾ? ಸೋಂಕಿತರು ತೀರಿದಾಗ ಅವಮಾನಕರವಾಗಿ ಹೂಳಲಾಯಿತು. ನಿಮ್ಮ ತಂದೆ-ತಾಯಿ ಅಥವಾ ನಿಮ್ಮ‌ ಸಂಬಂಧಿಕರಾಗಿದರೆ ಹೀಗೆ ಮಾಡ್ತಾ ಇದ್ರಾ? ಮೂವತ್ತಕ್ಕು ಅಧಿಕ ಪೌರ ಕಾರ್ಮಿಕರು ಸೋಂಕಿನಿಂದ ಮೃತಪಟ್ಟಿದ್ದಾರೆ. ಆ ನಿರ್ಗತಿಕರಿಗೆ ಯಾರು‌ ದಿಕ್ಕು ಎಂದು ಡಿಕೆಶಿ ಹರಿಹಾಯ್ದರು.

ಇದನ್ನೂ ಓದಿ; ಲಾಕ್ ಡೌನ್ ವಾಪಸ್ ಪಡೆಯುವ ಅವಶ್ಯಕತೆ ಇರಲಿಲ್ಲ:  ರಾಮಲಿಂಗ ರೆಡ್ಡಿ

ಸರ್ಕಾರಕ್ಕೆ ಭ್ರಷ್ಟಾಚಾರದ ಸೋಂಕು ಅಂಟಿದೆ‌. ಇದನ್ನೆಲ್ಲ ಪ್ರಶ್ನೆ ಮಾಡಿದರೆ ನನಗೆ, ಸಿದ್ದರಾಮಯ್ಯನವರಿಗೆ ನೋಟಿಸ್ ಕೊಡುತ್ತೀರಾ? ಎಂಥಾ ನೋಟಿಸ್’ಗಳಿಗೆ ನಾವು ಹೆದರಿಲ್ಲ. ನಿಮ್ಮ ನೋಟಿಸ್ ಗೆ ಹೆದರುತ್ತೀವಾ? ನಿಮ್ಮ ನೂರು ನೋಟಿಸ್ ಎದುರಿಸುವ ತಾಕತ್ತು ಜನ ನಮಗೆ ನೀಡಿದ್ದಾರೆ. ನೋಟಿಸ್ ಕೊಟ್ಟು ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳು 24 ಗಂಟೆಗಳಲ್ಲಿ ದಾಖಲೆ ಕೊಡುವುದಾಗಿ ಹೇಳಿದ್ದರು. ಇಷ್ಟು ದಿನವಾದರೂ ಎಲ್ಲಿದೆ ದಾಖಲೆ?‌ ಹಗರಣದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಪಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕರಾದ ಪ್ರಿಯಾಂಕ್ ಖರ್ಗೆ, ಡಾ.ಅಜಯ್ ಸಿಂಗ್, ಖನೀಜ್ ಫಾತೀಮಾ, ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.