ಕೆಪಿಎಸ್‌ಸಿ ಪರೀಕ್ಷೆ: ಜಿಲ್ಲಾಡಳಿತ ಮುಂಜಾಗ್ರತೆ


Team Udayavani, Sep 20, 2018, 10:27 AM IST

gul-1.jpg

ಕಲಬುರಗಿ: ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಯ ಗ್ರೂಪ್‌ ಸಿ ತಾಂತ್ರಿಕ-ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಸೆ.22 ಮತ್ತು 24 ರಂದು ನಗರದ ಎರಡು ಕೇಂದ್ರ ಹಾಗೂ 23 ರಂದು 52 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮುಂಜಾಗೃತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರೀಕ್ಷೆಗೆ ಸಂಬಂಧಿಸಿದ ರೂಟ್‌ ಅಧಿಕಾರಿಗಳು, ವೀಕ್ಷಕರು, ಪರೀಕ್ಷಾ ಕೇಂದ್ರದ ಉಪ ಮುಖ್ಯ ಅಧೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 
ಪರೀಕ್ಷೆ ವೇಳೆ ಕರ್ತವ್ಯದಲ್ಲಿ ಯಾವುದೇ ಅವ್ಯವಹಾರ ಕಂಡುಬಂದಲ್ಲಿ ಸಂಬಂಧಿಸಿದ ಕೇಂದ್ರದ ಮುಖ್ಯಸ್ಥರು ಹಾಗೂ ಸಂಸ್ಥೆ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ತಾಂತ್ರಿಕೇತರ ಹುದ್ದೆಗಳಿಗೆ ಸೆ. 22 ರಂದು ನಡೆಯುವ ಪದವಿಗಿಂತ ಕೆಳಮಟ್ಟದ ವಿದ್ಯಾರ್ಹತೆಯ ಪರೀಕ್ಷೆಗೆ 710
ಅಭ್ಯರ್ಥಿಗಳು, ಸೆ.23 ರಂದು ನಡೆಯುವ ಪದವಿ ಮಟ್ಟದ ವಿದ್ಯಾರ್ಹತೆಗೆ 18065 ಅಭ್ಯರ್ಥಿಗಳು ಸಾಮಾನ್ಯ ಜ್ಞಾನ,
ಸಂವಹನ ಪತ್ರಿಕೆ ಪರೀಕ್ಷೆ ಬರೆಯಲಿದ್ದಾರೆ. ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳಿಗೆ ಸೆ. 24 ರಂದು ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ 656 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.

ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಯಲು ಜಿಲ್ಲಾಡಳಿತದಿಂದ 15 ಮಾರ್ಗಾಧಿಕಾರಿಗಳು
ಮತ್ತು 13 ವೀಕ್ಷಕರನ್ನು ನೇಮಿಸಲಾಗಿದೆ. ಪರೀಕ್ಷಾ ದಿನದಂದು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸುವುದನ್ನು, ಪತ್ರಿಕೆ ಬಂಡಲ್‌ ತೆರೆಯುವಾಗ ಮತ್ತು ಪರೀಕ್ಷೆ ನಂತರ ಪತ್ರಿಕೆಗಳ ಬಂಡಲ್‌ ಪ್ಯಾಕ್‌ ಮಾಡುವಾಗ ಕಡ್ಡಾಯವಾಗಿ ವಿಡೀಯೋಗ್ರಾಫಿ ಮಾಡಬೇಕು. ಇದರ ಸಿ.ಡಿ.ಗಳನ್ನು ಆಯೋಗಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದರು.

ಪರೀಕ್ಷೆ ಆರಂಭವಾದ 15 ನಿಮಿಷಗಳ ನಂತರವೂ ಗೈರು ಹಾಜರಾದಂತಹ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಪ್ರಶ್ನೆ ಪತ್ರಿಕೆಗಳನ್ನು ಪುನಃ ಪ್ಯಾಕ್‌ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮೇಜು, ಕುಡಿಯುವ ನೀರು, ಬೆಳಕು ವಿದ್ಯುತ್‌ದಂತಹ ಕನಿಷ್ಠ ಮೂಲಸೌಲಭ್ಯಗಳಿರುವ ಬಗ್ಗೆ ಪರೀಕ್ಷೆಗೆ ಮುನ್ನವೇ ವೀಕ್ಷಕರು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಖಚಿತಪಡಿಸಿಕೊಳ್ಳಬೇಕು. ಅಲ್ಲದೆ ಪರೀಕ್ಷಾ ದಿನದಂದು ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದರು.

ಅಭ್ಯರ್ಥಿಗಳ ತಪಾಸಣೆ ನಡೆಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಬೇಕು. ಪರೀಕ್ಷಾ ದಿನದಂದು ಪೊಲೀಸ್‌ ಸಿಬ್ಬಂದಿ
ಬಾರದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಲಿಖೀತವಾಗಿ ದೂರು ಸಲ್ಲಿಸಿದರೆ ಸಂಬಂಧಿ ಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿಗಳ ಕಚೇರಿಯ ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ, ಕಲಬುರಗಿ ತಹಶೀಲ್ದಾರ ಅಶೋಕ ಹಿರೊಳ್ಳೆ, ಕೆ.ಪಿ.ಎಸ್‌.ಸಿ. ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಉಪ ಮುಖ್ಯ ಮೇಲ್ವಿಚಾರಕರು ಮತ್ತಿತರರು ಹಾಜರಿದ್ದರು.

ಅಂಚೆ ಸೇವೆ ಲಭ್ಯ
ಸೆ.23 ರವಿವಾರ ದಿನದಂದು ಪರೀಕ್ಷೆ ನಡೆಯಲಿರುವುದರಿಂದ ಅಂದಿನ ಪರೀಕ್ಷಾ ಪತ್ರಿಕೆ ಸಾಮಗ್ರಿಗಳನ್ನು ಆಯೋಗಕ್ಕೆ ರವಾನಿಸಲು ಅನುಕೂಲವಾಗುವಂತೆ ವಿಶೇಷವಾಗಿ ನಗರದ ಮುಖ್ಯ ಅಂಚೆ ಕಚೇರಿ, ರೈಲ್ವೆ ನಿಲ್ದಾಣದ ಅಂಚೆ ಕಚೇರಿ, ಬ್ರಹ್ಮಪುರ, ನೆಹರು ಗಂಜ್‌, ಜಿ.ಜಿ.ಎಚ್‌. ಅಂಚೆ ಕಚೇರಿಗಳು ಅಂದು ಕಾರ್ಯನಿರ್ವಹಿಸಲಿವೆ. ಇಲ್ಲಿಂದ ಪರೀಕ್ಷಾ ಸಾಮಗ್ರಿಗಳನ್ನು ರವಾನಿಸಬಹುದು.

ಮೊಬೈಲ್‌ ನಿಷೇಧ
ಪರೀಕ್ಷಾ ಕೇಂದ್ರದಲ್ಲಿ ಕೊಠಡಿ ಮೇಲ್ವಿಚಾರಕರು ಸೇರಿದಂತೆ ಅಭ್ಯರ್ಥಿಗಳು ಮೊಬೈಲ್‌, ಪೇಜರ್‌, ಬ್ಲೂಟೂತ್‌, ವೈರಲೆಸ್‌ ಸೆಟ್‌, ಸ್ಲೆ„ಡರೂಲ್‌ ಕ್ಯಾಲ್ಕುಲೇಟರ್‌, ವಾಚ್‌ ಕ್ಯಾಲ್ಕುಲೇಟರ್‌, ಪಠ್ಯ ಪುಸ್ತಕ ಹಾಗೂ ಇನ್ನಿತರ ಎಲೆಕ್ಟ್ರಾನಿಕ್ಸ್‌ ಉಪಕರಣಗಳನ್ನು ತರುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಗುರುತಿನ ಚೀಟಿ ಕಡ್ಡಾಯ
ಸ್ಪರ್ಧಾತ್ಮಕ ಪರೀಕ್ಷೆಗೆ ಬರುವ ಅಭ್ಯರ್ಥಿಗಳು ಪ್ರವೇಶ ಪತ್ರದೊಂದಿಗೆ ಕಡ್ಡಾಯವಾಗಿ ಭಾವಚಿತ್ರವಿರುವ ಚುನಾವಣಾ
ಐ.ಡಿ., ಆಧಾರ್‌ ಕಾರ್ಡ್‌, ಚಾಲನಾ ಪರವಾನಗಿ, ಪಾನ್‌ ಕಾರ್ಡ್‌, ಪಾಸಪೋರ್ಟ್‌, ಸರ್ಕಾರಿ ನೌಕರರ ಐ.ಡಿ. ಮೂಲ
ಗುರುತಿನ ಚೀಟಿ ಅಥವಾ ಅದರ ಛಾಯಾಪ್ರತಿ ತರುವುದು ಕಡ್ಡಾಯವಾಗಿದೆ. ಗುರುತಿನ ಚೀಟಿ ತರದಿದ್ದಲ್ಲಿ ಪರೀಕ್ಷೆ
ಬರೆಯಲು ಅವಕಾಶ ನೀಡಲಾಗುವುದಿಲ್ಲ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.