ಸೌಲಭ್ಯಗಳಿಗಾಗಿ ಕುಡಕಿ ಗ್ರಾಮಸ್ಥರ ಪ್ರತಿಭಟನೆ
Team Udayavani, Nov 3, 2021, 12:00 PM IST
ಆಳಂದ: ತಾಲೂಕಿನ ಹೋಬಳಿ ಕೇಂದ್ರ ನಿಂಬರಗಾ ಗ್ರಾಮದಲ್ಲಿ ಕುಡಕಿ ಗ್ರಾಮಕ್ಕೆ ಮೂಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಕುಡಕಿ ಗ್ರಾಮಸುಧಾರಣ ಸಮಿತಿಯ ನೇತೃತ್ವದಲ್ಲಿ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಸಮಿತಿಯ ಮುಖಂಡರು ಮತ್ತು ಗ್ರಾಮಸ್ಥರು ಸೇರಿ ಮಂಗಳವಾರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಕುಡಕಿ ಗ್ರಾಮವೂ ತಾಲೂಕಿನ ಗಡಿ ಗ್ರಾಮವಾಗಿದ್ದರಿಂದ ಹಲವು ದಶಕಗಳಿಂದಲೂ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಮತ್ತು ಸಾರಿಗೆ ಬಸ್ ಸೌಲಭ್ಯದ ಸಮಸ್ಯೆ ನಿವಾರಣೆ ಆಗುತ್ತಿಲ್ಲ.ಈ ಕುರಿತು ಹಲವು ಬಾರಿ ಸಂಬಂಧಿ ತ ಅಧಿಕಾರಿಗಳಿಗೆಮತ್ತು ಜನ ಪ್ರತಿನಿ ಧಿಗಳ ಗಮನಕ್ಕೆ ತರಲಾಗಿದೆ. ಆದರೂ ಗ್ರಾಮಸ್ಥರ ಬೇಡಿಕೆಗೆ ಸ್ಪಂದನೆ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಸುಧಾರಣ ಸಮಿತಿ ಗೌರವ ಅಧ್ಯಕ್ಷನರಸಿಂಗರಾವ್ ಮಾಲಿಪಾಟೀಲ, ಅಧ್ಯಕ್ಷ ಹಣಮಂತರಾವ್ ಎಲ್. ಹಳಕುಂದೆ, ಉಪಾಧ್ಯಕ್ಷ ದತ್ತಾತ್ರೆಯ ಆರ್. ಕುಡಕಿ, ಶಿವಣ್ಣ ಬುರಾಣಪೂರ, ಹಳ್ಳೆಪ್ಪ ತಳವಾರ, ಶಿವಯ್ಯ ಸ್ವಾಮಿ, ಶರಣಬಸಪ್ಪ
ಮಾಲಿಪಾಟೀಲ, ಬೆಂಬಲವಾಗಿ ನಿಂಬರಗಾದ ವಿಠ್ಠಲ ಕೋಣೆಕರ್, ಸೂರ್ಯಕಾಂತ ಚಿಂಚನಸೂರ, ವೀರಣ್ಣಾ ನಾಗಶೆಟ್ಟಿ, ಶ್ರೀಮಂತ ವಾಗªರಿ, ಗುರಣ್ಣಾ ಕಾಮನಗೊಳ,ರಾಜಶೇಖರ ಕರಣಾಕರ್, ಶರಣಬಸಪ್ಪ ನಿರ್ಮೂಲಕರ್, ಪ್ರಕಾಶ ಸರ್ವೋದಯ, ಚಂದ್ರಶಾ ತಳವಾರ, ದೇವಿಂದ್ರ ಬೆಳ್ಳೆ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.ಸ್ಥಳಕ್ಕೆ ತಾಪಂ ಇಒ ನಾಗಮೂರ್ತಿ ಕೆ. ಶೀಲವಂತ ಅವರು ಆಗಮಿಸಿ ಮನವಿ ಸ್ವೀಕರಿಸಿ ಬೇಡಿಕೆ ಈಡೇರಿಸಲು ಸಂಬಂಧಿತ ಇಲಾಖೆಗೆ ಸೂಚಿಸಲಾಗುವುದು. ಕುಡಕಿ ರೈಲು ನಿಲ್ದಾಣವರೆಗೆ ರಸ್ತೆ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.
ಎನ್ಇಕೆಆರ್ಟಿಸಿ ಅಧಿಕಾರಿಗಳು ಮನವಿ ಸ್ವೀಕರಿಸಿ ತಿಂಗಳ ಕಾಲಾವಕಾಶದೊಳಗೆ ಕಾಯಂ ಮುಖಾಂ ಬಸ್ ಸೌಲಭ್ಯ ಒದಗಿಸಲಾಗುವುದು. ಆಳಂದನಿಂದ ಕುಡಕಿಬಸ್ ಸಂಚಾರಕ್ಕೆ 15 ದಿನಗಳಲ್ಲಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.
ಪಿಡಬ್ಲೂಡಿ ಎಇಇ ಅರುಣಕುಮಾರ ಬಿರಾದಾರ, ಗ್ರಾಮೀಣ ನೀರು ಸರಬರಾಜು ಇಲಾಖೆ ಎಂಜಿನಿಯರ್ ಹಾಜರಿದ್ದು ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಪಿಎಸ್ಐ ಸುವರ್ಣ ಮಲಶೆಟ್ಟಿ ಬಂದೋಬಸ್ತ್ ಒದಗಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!