ಕುಲಕುಂದಾ ಸರ್ಕಾರಿ ಶಾಲೆ ಕಟ್ಟಡ ಕಾಮಗಾರಿ ನನೆಗುದಿಗೆ


Team Udayavani, Feb 12, 2019, 8:41 AM IST

gul-7.jpg

ವಾಡಿ: ಸೂಕ್ತ ತರಗತಿ ಕೋಣೆಗಳಿಲ್ಲದ ಕಾರಣ ಮಕ್ಕಳು ಮರದ ಕೆಳಗೆ ಪಾಠ ಕೇಳುತ್ತಿದ್ದಾರೆ. ಮಳೆ, ಗಾಳಿ, ಚಳಿ, ಬಿಸಿಲಿಗೆ ವಿದ್ಯಾರ್ಥಿಗಳು ನಲುಗಿ ಹೋಗುತ್ತಿದ್ದಾರೆ. ಮಕ್ಕಳ ಕಷ್ಟ ನೋಡಲಾಗದೆ ಗ್ರಾಮದ ಶಿಕ್ಷಣ ಪ್ರೇಮಿಗಳು ಕಟ್ಟಡಕ್ಕೆ ಭೂಮಿ ದೇಣಿಗೆ ಕೊಟ್ಟು, ಸರಕಾರ ಅನುದಾನ ಬಿಡುಗಡೆಯಾದರೂ ಕಾಮಗಾರಿ ಇನ್ನು ಆರಂಭವಾಗಿಲ್ಲ. ಈ ಗ್ರಾಮದ ಸರಕಾರಿ ಶಾಲೆ ಮಕ್ಕಳ ಐದು ವರ್ಷದ ಅರಣ್ಯರೋಧನ ಮುಂದುವರಿದಿದೆ.

ಚಿತ್ತಾಪುರ ತಾಲೂಕು ಕಡಬೂರ ಗ್ರಾಪಂ ವ್ಯಾಪ್ತಿಯ ಕುಲಕುಂದಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೂತನ ಕಟ್ಟಡ ಮಂಜೂರಾಗಿ ವರ್ಷ ಕಳೆದಿದೆ. ಕ್ಷೇತ್ರಶಿಕ್ಷಣಾಧಿಕಾರಿ ಶಂಕ್ರೆಮ್ಮ ಢವಳಗಿ ಅವರು ಭೂಮಿ ಪೂಜೆ ನೆರವೇರಿಸಿ ನಾಲ್ಕು ತಿಂಗಳು ಗತಿಸಿದೆ. ಕಟ್ಟಡ ನಿರ್ಮಾಣದ ಹೊಣೆ ಹೊತ್ತ ಭೂಸೇನಾ ನಿಗಮದ ಅಧಿಕಾರಿಗಳು ಶಾಲಾ ಅಂಗಳದಲ್ಲಿ ಐದಾರು ಗುಂಡಿಗಳನ್ನು ಬಗೆದು ತಳಪಾಯ ನಿರ್ಮಿಸಿ ನಾಪತ್ತೆಯಾಗಿದ್ದಾರೆ. ಅತ್ತ ತಳಪಾಯವೂ ಗುಣಮಟ್ಟದ್ದಾಗಿಲ್ಲ. ಇತ್ತ ಕಾಮಗಾರಿಯೂ ವೇಗ ಪಡೆದುಕೊಳ್ಳುತ್ತಿಲ್ಲ. ಇದರಿಂದ ಮಕ್ಕಳಿಗೆ ತೊಂದರೆಯಾಗಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಶಿವಶರಣಪ್ಪ ಮಡಿವಾಳ ಹಾಗೂ ಗ್ರಾಮದ ಮುಖಂಡ ಪರಶುರಾಮ ಪೂಜಾರಿ ದೂರಿದ್ದಾರೆ.

ಶಿಥಿಲಗೊಂಡ ಸದ್ಯದ ಶಾಲಾ ಕಟ್ಟಡ 40 ವರ್ಷಗಳಷ್ಟು ಹಳೆಯದ್ದಾಗಿದೆ. ಗೋಡೆಗಳು ಬಿರುಕುಬಿಟ್ಟಿವೆ. ಮೇಲ್ಛಾವಣಿ ಕುಸಿದು ಬೀಳುವ ಆತಂಕ ಎದುರಾಗಿದೆ. ಪರಿಣಾಮ ಶಾಲಾ ಕಟ್ಟಡದಲ್ಲಿ ಪಾಠ ಮಾಡಲು ಸಾಧ್ಯವಾಗದೆ ಇಲ್ಲಿನ ಶಿಕ್ಷಕರು ಐದಾರು ವರ್ಷಗಳಿಂದ ಮರದ ಕೆಳಗೆ ಮಕ್ಕಳಿಗೆ ಶಿಕ್ಷಣ ಬೋಧಿಸುತ್ತಿದ್ದಾರೆ. ಮಳೆ ಬಂದರೆ ಶಾಲೆಗೆ ರಜೆ ಘೋಷಿಸುತ್ತಾರೆ. ಹೀಗಾಗಿ ಗ್ರಾಮಸ್ಥರೆಲ್ಲರೂ ಸೇರಿ ಭೂಮಾಲೀಕರ ಮನವೊಲಿಸುವ ಮೂಲಕ ಶಾಲಾ ಕಟ್ಟಡಕ್ಕೆ ಭೂಮಿ ದಾನ ಪಡೆಯಲಾಗಿದೆ. ಪ್ರಿಯಾಂಕ್‌ ಖರ್ಗೆ ನೂತನ ಕಟ್ಟಡಕ್ಕೆ ಅನುದಾನವನ್ನೂ ಬಿಡುಗಡೆ ಮಾಡಿದ್ದಾರೆ. ಆದರೆ ಭೂಸೇನಾ ನಿಗಮದ ಅಧಿಕಾರಿಗಳು ಮಾತ್ರ ಕಾಮಗಾರಿ ನನೆಗುದಿಗೆ ತಳ್ಳಿದ್ದಾರೆ. ಹೀಗಾಗಿ ಮಕ್ಕಳ ಹೊಸ ಕಟ್ಟಡದ ಕನಸು ಈಡೇರುತ್ತಿಲ್ಲ ಎಂದು ಮಾರ್ಗದರ್ಶಿ ಸಂಸ್ಥೆಯ ರಾಹುಲ ಮಾಳಗಿ ಬೇಸರ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.