ಅಫಜಲಪುರದಲ್ಲಿ ಕುಮಾರಪರ್ವ


Team Udayavani, Feb 10, 2018, 11:43 AM IST

HD_kumaraswamy-750×500-fb-hands-clapsed.jpg

ಕಲಬುರಗಿ: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಅಫಜಲಪುರ ಪಟ್ಟಣದಲ್ಲಿ ಫೆ. 27ರಂದು ಕುಮಾರಪರ್ವ ಕಾರ್ಯಕ್ರಮದ ಅಡಿ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಜೆಡಿಎಸ್‌ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆಗಮಿಸುವರು. ಅಂದು ನೂರಾರು ಜನ ಬಿಜೆಪಿ, ಕಾಂಗ್ರೆಸ್‌ ತೊರೆದು ಜೆಡಿಎಸ್‌ ಸೇರಲಿದ್ದಾರೆ ಎಂದು ಜೆಡಿಎಸ್‌ ಕೋರ್‌ ಕಮಿಟಿ ಸದಸ್ಯ ಹಾಗೂ ಹಿರಿಯ ಮುಖಂಡ ಕೇದಾರಲಿಂಗಯ್ಯ ಹಿರೇಮಠ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ. 27ರ ಕಾರ್ಯಕ್ರಮಕ್ಕೆ 25ಸಾವಿರಕ್ಕೂ ಅಧಿಕ ಜನ ಆಗಮಿಸಲಿದ್ದು, ಪಕ್ಷದ ಯುವ ಮುಖಂಡ ಶಿವಕುಮಾರ ನಾಟೀಕಾರ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ. ಅದೇ ಕಾರ್ಯಕ್ರಮದಲ್ಲಿ ಅಫಜಲಪುರ ವಿಧಾನಸಭಾ ಕ್ಷೇತ್ರದ ಅಧಿಕೃತ ಅಭ್ಯರ್ಥಿ ಘೋಷಣೆಯೂ ಆಗಲಿದೆ ಎಂದು ತಿಳಿಸಿದರು.

ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳ ಪೈಕಿ, ಜೇವರ್ಗಿಗೆ ತಮ್ಮ(ಕೇದಾರಲಿಂಗಯ್ಯ), ಆಳಂದ ಸೂರ್ಯಕಾಂತ ಕೋರಳ್ಳಿ, ಕಲಬುರಗಿ ಉತ್ತರ ನಾಸೀರ್‌ ಹುಸೇನ್‌, ಚಿಂಚೋಳಿ ಸುಶೀಲಾಬಾಯಿ ಕೊರವಿ ಅವರ ಹೆಸರು ಬಹುತೇಕ ಈಗಾಗಲೇ ಘೋಷಣೆ ಆದಂತಾಗಿದೆ. ಇನ್ನುಳಿದಂತೆ ಅಫಜಲಪುರ, ಕಲಬುರಗಿ ದಕ್ಷಿಣ, ಸೇಡಂಗಳಲ್ಲಿ ಘೋಷಣೆ ಆಗಿಲ್ಲ. ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರದಿಂದ ಮಲ್ಲಿಕಾರ್ಜುನ ಕುಸ್ತಿ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಚಿತ್ತಾಪುರ ಮತ್ತು ಕಲಬುರಗಿ ಗ್ರಾಮೀಣ ಎರಡನ್ನು ಬಿಎಸ್‌ಪಿಯವರು ಕೇಳಿದ್ದಾರೆ.
 
ನಾವು ಕಲಬುರಗಿ ಗ್ರಾಮೀಣ ಬಿಟ್ಟು ಕೊಡುವುದಿಲ್ಲ ಎಂದು ತಿಳಿಸಿದರು. ಅಫಜಲಪುರ ಕ್ಷೇತ್ರದಲ್ಲಿ ಗೋವಿಂದ ಭಟ್‌ ಅವರಿಗೆ ಟಿಕೆಟ್‌ ಸಿಗುವುದರ ಕುರಿತು ಗಾಳಿ ಸುದ್ದಿ ಹರಡಿತ್ತಷ್ಟೆ.. ಈ ಹಿನ್ನೆಲೆಯಲ್ಲಿ ಫೆ. 27ರಂದು ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರೇ ಘೋಷಣೆ ಮಾಡಲಿದ್ದಾರೆ. ಭಟ್‌ ಅವರಿಗೆ ಸಿಗುವುದು ಕಷ್ಟ. ಕಳೆದ ಬಾರಿ ಕೋಲಿ ಸಮಾಜದ ಧೀಮಂತ ನಾಯಕ ದಿ| ವಿಠ್ಠಲ ಹೇರೂರು ಅವರಿಗೆ ನೀಡಲಾಗಿತ್ತು. ಅವರು ನಮ್ಮ ಪಕ್ಷದ ತಂತ್ರ ಹಾಗೂ ಕುಮಾರಸ್ವಾಮಿ ಅವರ ಪ್ರಚಾರದ ದಿನಾಂಕ ಮತ್ತು ಸಮಯ ಹೊಂದಾಣಿಕೆಯಲ್ಲಿ ಉಂಟಾದ ವ್ಯತ್ಯಯದಿಂದಾಗಿ ಸೋಲು ಕಾಣಬೇಕಾಯಿತು. ಇಲ್ಲದೆ ಹೋಗಿದ್ದರೆ ಹೇರೂರು ಖಂಡಿತ ಗೆಲುವು ಸಾಧಿಸುತ್ತಿದ್ದರು. ಆದರೆ, ಈ ಬಾರಿ ಹಾಗೆ ಆಗುವುದಿಲ್ಲ ಎನ್ನುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದಾರೆ ಎಂದು ತಿಳಿಸಿದರು.

 ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜೇವರ್ಗಿ ಪಟ್ಟಣದಲ್ಲಿ ಪ್ರಮುಖ ರಸ್ತೆ ಮಧ್ಯೆ ಅಲಂಕಾರಿಕ ಗಿಡ ನೆಡಲಾಗುತ್ತಿದೆ.ಈ ಹಿಂದೆ ಮುಖ್ಯಮಂತ್ರಿ ಕಾರ್ಯಕ್ರಮಕ್ಕಾಗಿ ಯಡ್ರಾಮಿಯಲ್ಲಿ ಸಾವಿರಾರು ರೂ. ವೆಚ್ಚ ಮಾಡಿ ಹಚ್ಚಿದ ಇಂತಹದೇ ಅಲಂಕಾರಿಕ ಗಿಡಗಳು ಒಣಗಿವೆ. ಆದರೂ ಈಗ ಅಂತಹದೇ ಸಾಹಸವನ್ನು ಶಾಸಕ ಅಜಯಸಿಂಗ್‌ ಮಾಡುತ್ತಿದ್ದಾರೆ. ಇದು ನಿಜಕ್ಕೂ ತುಗಲಕ್‌ ದರ್ಬಾರ್‌ ಎಂದು ಟೀಕಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಕುಸ್ತಿ, ಶಿವಕುಮಾರ ನಾಟೀಕಾರ, ಮಾಶ್ಯಾಳದ ಶರಣಗೌಡ ಪಾಟೀಲ, ಜಮೀಲಗೌಡ ಅಫಜಲಪುರ, ರೇವಣಸಿದ್ದಯ್ಯ ಹಿರೇಮಠ, ಮಹಿಬೂಬ್‌ ಇನಾಂದಾರ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.