ಕುಂಚಾವರಂಗೆ ಪ್ರವಾಸಿ ತಾಣ ಮೆರಗು ­

ವಾಚ್‌ ಗೋಪುರದಲ್ಲಿ ವೀಕ್ಷಿಸಿ ಹಸಿರು ಬೆಟ್ಟಗಳ ಸೌಂದರ್ಯ ! ­ಪ್ರವಾಸಿಗರ ಸುರಕ್ಷತೆಗೆ ಬೇಕಿದೆ ಸೌಲಭ್ಯ-ತಂಗುದಾಣ

Team Udayavani, Apr 5, 2021, 6:10 PM IST

hbdstbset

ಶಾಮರಾವ ಚಿಂಚೋಳಿ

ಚಿಂಚೋಳಿ: ಕುಂಚಾವರಂ ಅರಣ್ಯ ಪ್ರದೇಶ ಕಣ್ಮನ ಸೆಳೆಯುವಂತಿದ್ದು ಪ್ರವಾಸಿ ತಾಣವೆಂದು ಸರ್ಕಾರ ಘೋಷಿಸಬೇಕಿದೆ. ಗೋಪುನಾಯಕ-ಸಂಗಾಪುರ ತಾಂಡಾದ ಹತ್ತಿರ ಬೆಟ್ಟಗುಡ್ಡಗಳಿಂದ ಹರಿದು ಬರುವ ಎತ್ತಪೋತಾ ಜಲಧಾರೆ ನೋಡಲು ಆಂಧ್ರಪ್ರದೇಶ, ತೆಲಂಗಾಣ ರಾಜ್ಯದ ಅನೇಕ ನಗರ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ.

ಆದರೆ ಪ್ರವಾಸಿಗರು ಪ್ರಕೃತಿ ಸೌಂದರ್ಯ ನೋಡಿ ಆನಂದಿಸಲು ಸೂಕ್ತ ವ್ಯವಸ್ಥೆ-ಸುರಕ್ಷತೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ತಂಗುದಾಣವೂ ಇಲ್ಲಿಲ್ಲ. ಕುಂಚಾವರಂ ವನ್ಯಜೀವಿಧಾಮ 13,488,31 ಹೆಕ್ಟೇರ್‌ ಅರಣ್ಯ ಪ್ರದೇಶ ಹೊಂದಿದ್ದು, ಇದರಲ್ಲಿ ವನ್ಯಜೀವಿಧಾಮ ಮೀಸಲು ಅರಣ್ಯಪ್ರದೇಶ ವ್ಯಾಪ್ತಿಗೆ 134.88 ಚದರ ಕಿ.ಮೀ ಒಳಪಡುತ್ತದೆ.

ಶ್ರೀಗಂಧ, ಸಾಗವಾನಿ, ಹೊನ್ನೆಕರಮತಿ ವಿವಿಧ ಜಾತಿಯ ಮರ, ಔಷಧ  ಸಸ್ಯ, ಹಣ್ಣಿನ ಮರ, ದೊಡ್ಡದಾದ ಪೊದೆ ಹುಲುಸಾಗಿ ಬೆಳೆದಿವೆ. ಅರಣ್ಯದಲ್ಲಿ ತೋಳ, ಮಂಗ, ಕೋತಿ, ಜಿಂಕೆ, ಕಾಡು ಕುರಿ, ಕಾಡು ಹಂದಿ, ನವಿಲು, ಮುಳ್ಳು ಹಂದಿ, ಮುಂಗಸಿ, ಮೊಲ, ಹಾವು, ಸಾರಂಗ, ಹೆಬ್ಟಾವು, ವಿವಿಧ ಜಾತಿ ಪಕ್ಷಿಗಳು ಇಲ್ಲಿವೆ. ಗೊಟ್ಟಂಗೊಟ್ಟ, ಕುಸರಂಪಳ್ಳಿ ಅರಣ್ಯಪ್ರದೇಶದಲ್ಲಿ ಆಗಾಗ ಚಿರತೆಗಳು ಕಾಣಿಸುತ್ತವೆ. ಕುಂಚಾವರಂ ಮೀಸಲು ವನ್ಯಜೀವಿಧಾಮ ಅರಣ್ಯ ಪ್ರದೇಶದಲ್ಲಿ ಸುಮಾರು 100 ಕಿಲೋ ಮೀಟರ್‌ ಉದ್ದದ ಅರಣ್ಯದ ಸುಂದರ ಬೆಟ್ಟಗುಡ್ಡ, ಹಸಿರು ಬೆಟ್ಟಗಳ ಸೌಂದರ್ಯ, ವನಸಿರಿ ಸೊಬಗು ನೋಡಿ ಆನಂದಿಸಲು ವನ್ಯಜೀವಿಧಾಮ ಇಲಾಖೆಯಿಂದ ವಾಚ್‌ ಗೋಪುರಗಳನ್ನು ನಿರ್ಮಿಸಲಾಗಿದೆ.

ಕುಂಚಾವರಂ ವನ್ಯಜೀವಿಧಾಮದಲ್ಲಿ ಮಂಡಿ ಬಸವಣ್ಣ, ಬುರುಗದೊಡ್ಡಿ, ಕೋತ್ವಾಲ ನಾಲಾ, ಗೊಟ್ಟಂಗೊಟ್ಟ, ಹಾಥಿ ಲಾಲ್‌ ತಲಾಬ, ಸೇರಿಭಿಕನಳ್ಳಿ, ನಿಜಾಮ ದೊರೆ ಆಡಳಿತದಲ್ಲಿ ನಿರ್ಮಿಸಿದ ತಾಣಗಳು, ಮುಲ್ಲಾಮಾರಿ ನದಿ ದಂಡೆಯಲ್ಲಿನ ಪಂಚಲಿಂಗ ಹತ್ತಿರ ಹರಿಯುವ ಬುಗ್ಗಿ ನೋಡಲು ಜನರನ್ನು ಕೈ ಮಾಡಿ ಕರೆಯುವಂತಹ ಸುಂದರ ತಾಣಗಳಿವೆ.

ಶಿವರಾಮಪುರ-ಶಹಾಪುರ ರಾಜ್ಯ ಹೆದ್ದಾರಿಯಲ್ಲಿ ಬರುವ ಕುಂಚಾವರಂ ಅರಣ್ಯ ಪ್ರದೇಶವನ್ನು 2011ರಲ್ಲಿ ರಾಜ್ಯ ಸರ್ಕಾರ ವನ್ಯಜೀವಿಧಾಮ ಪ್ರದೇಶವೆಂದು ಘೋಷಣೆ ಮಾಡಿದೆ. ಇದಾದ ನಂತರ ಕಾಡಿನಲ್ಲಿ ವಿವಿಧ ಜಾತಿಯ ಮರಗಳು, ಔಷ ಧೀಯ ಸಸ್ಯಗಳು, ವಿವಿಧ ಜಾತಿಯ ಹಕ್ಕಿಗಳು, ಕಾಡು ಪ್ರಾಣಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿವೆ.

ಸೇರಿಭಿಕನಳ್ಳಿ, ಶಾದೀಪುರ, ಮಂಡಿ ಬಸವಣ್ಣ, ಸಂಗಾಪುರ, ಗೊಟ್ಟಂಗೊಟ್ಟ,ಬೊಮ್ಮಾಪುರ, ಕುಂಚಾ ವರಂ- ಜಹೀರಾಬಾದ ರಸ್ತೆ, ಬಡಾತಾಂಡಾ, ವಂಟಿ ಚಿಂತಾ ತಾಂಡಾ ಪ್ರದೇಶ ಮತ್ತು ಬಡೆಸಾಬ್‌ ದರ್ಗಾ ಅರಣ್ಯಪ್ರದೇಶ ಪ್ರವಾಸಿಗರನ್ನು ಆಕರ್ಷಿಸುವ ಪ್ರಮುಖ ಪ್ರವಾಸಿ ತಾಣಗಳಾಗಿವೆ. ಮಳೆಗಾಲ-ಚಳಿಗಾಲದಲ್ಲಿ ಕುಂಚಾವರಂ ಅರಣ್ಯ ಪ್ರದೇಶ ಹಸಿರಿನಿಂದ ಕಂಗೊಳಿಸುತ್ತದೆ.

ಸಣ್ಣ ಪುಟ್ಟ ಜಲಪಾತಗಳು, ಬಾನೆತ್ತರಕ್ಕೆ ಬೆಳೆದಿರುವ ವಿವಿಧ ಜಾತಿಯ ಗಿಡಮರಗಳು, ಚಿಟ್ಟೆಗಳು, ವಿವಿಧ ಹೂವು ಬಳ್ಳಿಗಳು, ಹಕ್ಕಿಗಳ ಕಲರವ, ಕಾಡು ಪ್ರಾಣಿಗಳ ಕೂಗಾಟ ನೋಡುವ ಪ್ರದೇಶವೆಂದರೆ ಕುಂಚಾವರಂ ಅರಣ್ಯ ಪ್ರದೇಶ. ಆದ್ದರಿಂದ ಸರ್ಕಾರ ಈ ಪ್ರದೇಶವನ್ನು ಪ್ರವಾಸಿ ತಾಣವೆಂದು ಘೋಷಿಸಬೇಕು. ಬಂಡಿಪುರ, ಅಭಯಾರಣ್ಯ ದೊಡ್ಡವಾದ ಕಾಡು ಪ್ರದೇಶ ಇಲ್ಲಿದ್ದು,ಇದರ ರಕ್ಷಣೆ ನಮ್ಮೆಲ್ಲರದ್ದಾಗಿದೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.