ಕುಂಚಾವರಂಗೆ ಪ್ರವಾಸಿ ತಾಣ ಮೆರಗು


Team Udayavani, Apr 5, 2021, 7:31 PM IST

jkijuytre

ಚಿಂಚೋಳಿ : ಕುಂಚಾವರಂ ಅರಣ್ಯ ಪ್ರದೇಶ ಕಣ್ಮನ ಸೆಳೆಯುವಂತಿದ್ದು ಪ್ರವಾಸಿ ತಾಣವೆಂದು ಸರ್ಕಾರ ಘೋಷಿಸಬೇಕಿದೆ. ಗೋಪುನಾಯಕ-ಸಂಗಾಪುರ ತಾಂಡಾದ ಹತ್ತಿರ ಬೆಟ್ಟಗುಡ್ಡಗಳಿಂದ ಹರಿದು ಬರುವ ಎತ್ತಪೋತಾ ಜಲಧಾರೆ ನೋಡಲು ಆಂಧ್ರಪ್ರದೇಶ, ತೆಲಂಗಾಣ ರಾಜ್ಯದ ಅನೇಕ ನಗರ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಆದರೆ ಪ್ರವಾಸಿಗರು ಪ್ರಕೃತಿ ಸೌಂದರ್ಯ ನೋಡಿ ಆನಂದಿಸಲು ಸೂಕ್ತ ವ್ಯವಸ್ಥೆ-ಸುರಕ್ಷತೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ತಂಗುದಾಣವೂ ಇಲ್ಲಿಲ್ಲ.

ಕುಂಚಾವರಂ ವನ್ಯಜೀವಿಧಾಮ 13,488,31 ಹೆಕ್ಟೇರ್‌ ಅರಣ್ಯ ಪ್ರದೇಶ ಹೊಂದಿದ್ದು, ಇದರಲ್ಲಿ ವನ್ಯಜೀವಿಧಾಮ ಮೀಸಲು ಅರಣ್ಯಪ್ರದೇಶ ವ್ಯಾಪ್ತಿಗೆ 134.88 ಚದರ ಕಿ.ಮೀ ಒಳಪಡುತ್ತದೆ. ಶ್ರೀಗಂಧ, ಸಾಗವಾನಿ, ಹೊನ್ನೆಕರಮತಿ ವಿವಿಧ ಜಾತಿಯ ಮರ, ಔಷಧ  ಸಸ್ಯ, ಹಣ್ಣಿನ ಮರ, ದೊಡ್ಡದಾದ ಪೊದೆ ಹುಲುಸಾಗಿ ಬೆಳೆದಿವೆ. ಅರಣ್ಯದಲ್ಲಿ ತೋಳ, ಮಂಗ, ಕೋತಿ, ಜಿಂಕೆ, ಕಾಡು ಕುರಿ, ಕಾಡು ಹಂದಿ, ನವಿಲು, ಮುಳ್ಳು ಹಂದಿ, ಮುಂಗಸಿ, ಮೊಲ, ಹಾವು, ಸಾರಂಗ, ಹೆಬ್ಟಾವು, ವಿವಿಧ ಜಾತಿ ಪಕ್ಷಿಗಳು ಇಲ್ಲಿವೆ. ಗೊಟ್ಟಂಗೊಟ್ಟ, ಕುಸರಂಪಳ್ಳಿ ಅರಣ್ಯಪ್ರದೇಶದಲ್ಲಿ ಆಗಾಗ ಚಿರತೆಗಳು ಕಾಣಿಸುತ್ತವೆ. ಕುಂಚಾವರಂ ಮೀಸಲು ವನ್ಯಜೀವಿಧಾಮ ಅರಣ್ಯ ಪ್ರದೇಶದಲ್ಲಿ ಸುಮಾರು 100 ಕಿಲೋ ಮೀಟರ್‌ ಉದ್ದದ ಅರಣ್ಯದ ಸುಂದರ ಬೆಟ್ಟಗುಡ್ಡ, ಹಸಿರು ಬೆಟ್ಟಗಳ ಸೌಂದರ್ಯ, ವನಸಿರಿ ಸೊಬಗು ನೋಡಿ ಆನಂದಿಸಲು ವನ್ಯಜೀವಿಧಾಮ ಇಲಾಖೆಯಿಂದ ವಾಚ್‌ ಗೋಪುರಗಳನ್ನು ನಿರ್ಮಿಸಲಾಗಿದೆ.

ಕುಂಚಾವರಂ ವನ್ಯಜೀವಿಧಾಮದಲ್ಲಿ ಮಂಡಿ ಬಸವಣ್ಣ, ಬುರುಗದೊಡ್ಡಿ, ಕೋತ್ವಾಲ ನಾಲಾ, ಗೊಟ್ಟಂಗೊಟ್ಟ, ಹಾಥಿ ಲಾಲ್‌ ತಲಾಬ, ಸೇರಿಭಿಕನಳ್ಳಿ, ನಿಜಾಮ ದೊರೆ ಆಡಳಿತದಲ್ಲಿ ನಿರ್ಮಿಸಿದ ತಾಣಗಳು, ಮುಲ್ಲಾಮಾರಿ ನದಿ ದಂಡೆಯಲ್ಲಿನ ಪಂಚಲಿಂಗ ಹತ್ತಿರ ಹರಿಯುವ ಬುಗ್ಗಿ ನೋಡಲು ಜನರನ್ನು ಕೈ ಮಾಡಿ ಕರೆಯುವಂತಹ ಸುಂದರ ತಾಣಗಳಿವೆ. ಶಿವರಾಮಪುರ-ಶಹಾಪುರ ರಾಜ್ಯ ಹೆದ್ದಾರಿಯಲ್ಲಿ ಬರುವ ಕುಂಚಾವರಂ ಅರಣ್ಯ ಪ್ರದೇಶವನ್ನು 2011ರಲ್ಲಿ ರಾಜ್ಯ ಸರ್ಕಾರ ವನ್ಯಜೀವಿಧಾಮ ಪ್ರದೇಶವೆಂದು ಘೋಷಣೆ ಮಾಡಿದೆ.

ಇದಾದ ನಂತರ ಕಾಡಿನಲ್ಲಿ ವಿವಿಧ ಜಾತಿಯ ಮರಗಳು, ಔಷ ಧೀಯ ಸಸ್ಯಗಳು, ವಿವಿಧ ಜಾತಿಯ ಹಕ್ಕಿಗಳು, ಕಾಡು ಪ್ರಾಣಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿವೆ. ಸೇರಿಭಿಕನಳ್ಳಿ, ಶಾದೀಪುರ, ಮಂಡಿ ಬಸವಣ್ಣ, ಸಂಗಾಪುರ, ಗೊಟ್ಟಂಗೊಟ್ಟ,ಬೊಮ್ಮಾಪುರ, ಕುಂಚಾ ವರಂ- ಜಹೀರಾಬಾದ ರಸ್ತೆ, ಬಡಾತಾಂಡಾ, ವಂಟಿ ಚಿಂತಾ ತಾಂಡಾ ಪ್ರದೇಶ ಮತ್ತು ಬಡೆಸಾಬ್‌ ದರ್ಗಾ ಅರಣ್ಯಪ್ರದೇಶ ಪ್ರವಾಸಿಗರನ್ನು ಆಕರ್ಷಿಸುವ ಪ್ರಮುಖ ಪ್ರವಾಸಿ ತಾಣಗಳಾಗಿವೆ. ಮಳೆಗಾಲ-ಚಳಿಗಾಲದಲ್ಲಿ ಕುಂಚಾವರಂ ಅರಣ್ಯ ಪ್ರದೇಶ ಹಸಿರಿನಿಂದ ಕಂಗೊಳಿಸುತ್ತದೆ.

ಸಣ್ಣ ಪುಟ್ಟ ಜಲಪಾತಗಳು, ಬಾನೆತ್ತರಕ್ಕೆ ಬೆಳೆದಿರುವ ವಿವಿಧ ಜಾತಿಯ ಗಿಡಮರಗಳು, ಚಿಟ್ಟೆಗಳು, ವಿವಿಧ ಹೂವು ಬಳ್ಳಿಗಳು, ಹಕ್ಕಿಗಳ ಕಲರವ, ಕಾಡು ಪ್ರಾಣಿಗಳ ಕೂಗಾಟ ನೋಡುವ ಪ್ರದೇಶವೆಂದರೆ ಕುಂಚಾವರಂ ಅರಣ್ಯ ಪ್ರದೇಶ. ಆದ್ದರಿಂದ ಸರ್ಕಾರ ಈ ಪ್ರದೇಶವನ್ನು ಪ್ರವಾಸಿ ತಾಣವೆಂದು ಘೋಷಿಸಬೇಕು. ಬಂಡಿಪುರ, ಅಭಯಾರಣ್ಯ ದೊಡ್ಡವಾದ ಕಾಡು ಪ್ರದೇಶ ಇಲ್ಲಿದ್ದು,ಇದರ ರಕ್ಷಣೆ ನಮ್ಮೆಲ್ಲರದ್ದಾಗಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.