ಇಡೀ ಕುಪನೂರ ಗ್ರಾಮ ಸೀಲ್ಡೌನ್
Team Udayavani, Jul 14, 2020, 1:59 PM IST
ಚಿಂಚೋಳಿ: ತಾಲೂಕಿನ ಕುಪನೂರ ಗ್ರಾಮದಲ್ಲಿ 18 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದರಿಂದ ಇಡೀ ಗ್ರಾಮವನ್ನು ಸೀಲ್ಡೌನ್ ಮಾಡಲಾಗಿದೆ. ಎಲ್ಲ ಸೋಂಕಿತರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ ಎಂದು ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ತಿಳಿಸಿದ್ದಾರೆ.
ಕುಪನೂರ ಗ್ರಾಮದಲ್ಲಿ 18 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟ ಕಾರಣ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿ ಡಂಗೂರ ಸಾರಿ ಜನರಿಗೆ ಜಾಗೃತಿಗೊಳಿಸಿ ಎಚ್ಚರಿಕೆಯಿಂದ ಇರಲು ಹಾಗೂ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಅಲ್ಲದೇ ಸ್ಯಾನಿಟೈಸರ್ ಉಪಯೋಗಿಸಬೇಕು. ಪ್ರತಿಯೊಬ್ಬರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕೆಂದು ಸೂಚನೆ ನೀಡಲಾಗಿದೆ ಎಂದು ಹೇಳಿದರು. ಗ್ರಾಮಸ್ಥರು ಮನೆಯಿಂದ ಯಾರು ಹೊರಗಡೆ ಬರಬಾರದು ಮತ್ತು ಹೊರಗಿನಿಂದ ಗ್ರಾಮಕ್ಕೆ ಬರದಂತೆ ಜಾಗೃತಿ ಮೂಡಿಸಲಾಗಿದೆ. ಬಿಸಿ ನೀರು, ಶುದ್ಧ ನೀರು, ಬಿಸಿಯಾದ ಊಟ ಸೇವಿಸಬೇಕು. ಅಲ್ಲದೇ ಗ್ರಾಮದಲ್ಲಿ ಬ್ಲಿಚಿಂಗ್ ಫೌಡರ್ ಮತ್ತು ಫಾಗಿಂಗ್ ಮಾಡಲಾಗಿದೆ ಎಂದು ಕುಪನೂರ ಗ್ರಾಪಂ ಆಡಳಿತಾಧಿಕಾರಿ ಅಜೀಮೋದ್ದೀನ್ ತಿಳಿಸಿದ್ದಾರೆ.
ಕುಪನೂರ ಗ್ರಾಮಕ್ಕೆ ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ, ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಕ ಪಾಟೀಲ, ಆಡಳಿತಾಧಿಕಾರಿ ಅಜೀಮೋದ್ದಿನ್, ಸಿಪಿಐ ವಿಜಯ ಮಹಾಂತೇಶ ಮಠಪತಿ, ಪಿಎಸ್ಐ ತಿಮ್ಮಯ್ಯ, ಕಂದಾಯ ನಿರೀಕ್ಷಕ ಸುಭಾಶ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ