ಕುವೆಂಪು ನಾಡಿನ ರಾಯಭಾರಿ
Team Udayavani, Dec 30, 2017, 11:53 AM IST
ಶಹಾಬಾದ: ನಾಡಿನ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಕುವೆಂಪು ಈ ನಾಡಿನ ಸಾಂಸ್ಕೃತಿಕ ರಾಯಭಾರಿ. ಮನುಜ ಮತ ವಿಶ್ವಪಥ ಸಂದೇಶ ಸಾರಿದ ರಾಷ್ಟ್ರಕವಿ ಜನ್ಮದಿನವನ್ನು ವಿಶ್ವಮಾನವ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದು ಸಿಎ ಇಂಗಿನಶೆಟ್ಟಿ ಕಾಲೇಜಿನ ಉಪನ್ಯಾಸಕ ಪ್ರವೀಣ ರಾಜನ್ ಹೇಳಿದರು.
ಶುಕ್ರವಾರ ನಗರದ ಎಸ್.ಎಸ್.ನಂದಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಈ ನಾಡಿನ ಸಾಹಿತ್ಯ ಕ್ಷೇತ್ರದ ಶಾಶ್ವತ ನಾಯಕ ಕುವೆಂಪು ಎನ್ನುವ ಸಂಗತಿಯನ್ನು ಕನ್ನಡ ಮನಸ್ಸುಗಳು ಅಂಗೀಕರಿಸಿದ್ದು, ಬೇರೆ ಯಾವ ಸಾಹಿತಿಗೂ ಸಿಗದ ಗೌರವ ಕುವೆಂಪು ಅವರಿಗೆ ಶ್ರೀ ಸಾಮಾನ್ಯರಿಂದ ಸಿಕ್ಕಿದೆ ಎಂದರು.
ಶಿಕ್ಷಕ ಮಲ್ಲಿನಾಥ ಪಾಟೀಲ ಮಾತನಾಡಿ, ಕುವೆಂಪು ನೇರವಾಗಿ, ದಿಟ್ಟವಾಗಿ ಪುರೋಹಿತಶಾಹಿಯನ್ನು ವಿರೋಧಿಸಿ ಬರೆದ ಕವಿ. ದಾರ್ಶನಿಕರು ಕನ್ನಡ ನಾಡಿನಲ್ಲಿ ಬೆರಳಣಿಯಷ್ಟೇ. ಈ ನಾಡಿನ ನೊಂದ ವರ್ಗದ ದನಿಯಾ,ಗಿ
ರೈತರ ಪರವಾಗಿ ದಿಟ್ಟದನಿ ಎತ್ತಿದ ಕುವೆಂಪು ಸಾಹಿತ್ಯವನ್ನು ಪ್ರತಿಯೊಬ್ಬರು ಓದಿ ಅವರ ವಿಚಾರಗಳನ್ನು ಜೀವನದಲ್ಲಿ
ಅಳವಡಿಸಿಕೊಳ್ಳಬೇಕೆಂದರು.
ಎಸ್.ಎಸ್.ನಂದಿ ಪ್ರೌಢಶಾಲೆ ಮುಖ್ಯಶಿಕ್ಷಕ ಸುಧಿರ ಕುಲಕರ್ಣಿ ಮಾತನಾಡಿ, ಈ ನಾಡಿನ ಸಾಹಿತ್ಯದ ಲೋಕವನ್ನು ಶ್ರೀಮಂತಗೊಳಿಸಿದ ಹಿರಿಮೆ ಅವರಿಗೆ ಸಲ್ಲುತ್ತದೆ. ಕನ್ನಡ ಭಾಷೆ ಹಾಗೂ ಈ ನೆಲದ ಬಗ್ಗೆ ಕುವೆಂಪು ಅಪಾರ ಅಭಿಮಾನ ಹೊಂದಿದ್ದರು ಎಂದರು.ಶಿಕ್ಷಕರಾದ ರಮೇಶ ಜೋಗದನಕರ್, ಗೀತಾ ಪುಂಡಲಿಕ, ರೋಸ್ಲಿನ್, ವೀರಯ್ಯ ಹಿರೇಮಠ, ಸೂಗಯ್ಯ ಘಂಟಿಮಠ, ರಮೇಶ ಮಹೇಂದ್ರಕರ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು
Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ
Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ