ಚಂದಾಪುರ ನಿವಾಸಿಗಳಿಗೆ ಶುದ್ಧ ನೀರು ಮರೀಚಿಕೆ

ಪುರಸಭೆಯಿಂದ ನಿರ್ವಹಣೆ ಕೊರತೆ ,ಎಂಟು ವರ್ಷಗಳಿಂದ ಶುದ್ಧೀಕರಿಸದೇ ನೀರು ಪೂರೈಕೆ

Team Udayavani, Oct 28, 2020, 3:41 PM IST

ಚಂದಾಪುರ ನಿವಾಸಿಗಳಿಗೆ ಶುದ್ಧ ನೀರು ಮರೀಚಿಕೆ

ಚಿಂಚೋಳಿ: ಪಟ್ಟಣದ ಚಂದಾಪುರ ನಗರದ ನಿವಾಸಿಗಳಿಗೆ ಶುದ್ಧ ನೀರು ಪೂರೈಕೆ ಮರೀಚಿಕೆಯಾಗಿದೆ.

ಮುಲ್ಲಾಮಾರಿ ನದ ದಂಡೆಯಲ್ಲಿ ಇರುವ ಶುದ್ಧೀಕರಣ ಘಟಕದಿಂದ ನೀರು ಶುದ್ಧೀಕರಣಗೊಳಿಸದೇ ನೇರವಾಗಿ ಹಳ್ಳದ ನೀರನ್ನೇ ಕಳೆದ 8 ವರ್ಷಗಳಿಂದ ಚಂದಾಪುರ ನಗರಕ್ಕೆ ನೀರು ಪೂರೈಸಲಾಗುತ್ತಿದೆ. ಆದರೆ, ಕೆಲವರುಅನಿವಾರ್ಯವಾಗಿ ನೀರು ಸೇವನೆಯಿಂದ ನೆಗಡಿ, ಕೆಮ್ಮು, ಜ್ವರ ಇಂತಹ ಸಣ್ಣ-ಪುಟ್ಟ ಕಾಯಿಲೆಗಳಿಂದ ಜನರು ನರಳುವಂತಾಗಿದೆ. ಪುರಸಭೆ ಅಧೀನಕ್ಕೆ

ಒಳಪಟ್ಟಂತಹ ಶುದ್ಧೀಕರಣ ಘಟಕಕ್ಕೆ ಸೂಕ್ತ ನಿರ್ವಹಣೆ ಕೊರತೆ ಕಾಡುತ್ತಿದೆ. ಕೆಲವೊಮ್ಮೆ ಮೋಟರ್‌ ಸುಟ್ಟರೆ ಚಂದಾಪುರ ನಗರದ ಜನರು ಜಲಕ್ಷಾಮ ಎದುರಿಸಬೇಕಾಗುತ್ತದೆ. ಜನರುಯಾರು ನೀರು ಕುಡಿಯುವುದಿಲ್ಲ. ಕೇವಲ ಬಟ್ಟೆ ತೊಳೆಯಲು, ಮನೆ ಶುಚಿಗೊಳಿಸಲು ಮತ್ತು ಶೌಚಾಲಯಕ್ಕೆ ಮಾತ್ರ ಬಳಸುತ್ತಾರೆ. ಹೀಗಾಗಿ ಕೆಲ ಜನರು ಖಾಸಗಿ ನೀರಿನ ಟ್ಯಾಂಕರ್‌ ಮೂಲಕ ನೀರು ಪಡೆದುಕೊಳ್ಳಬೇಕಾಗಿದೆ.

ಕೆಲವರ ಮನೆಗಳಲ್ಲಿ ಬೋರ್‌ವೆಲ್‌ಗ‌ಳಿವೆ. ಇನ್ನು ಕೆಲವರು ಸಾರ್ವಜನಿಕ ನಳಗಳಿಗೆ ಬೋರ್‌ವೆಲ್‌ ದಿಂದ ನೀರು ಸರಬರಾಜು ಮಾಡಿದ ನೀರನ್ನೇಕುಡಿಯುತ್ತಾರೆ. ಶುದ್ಧೀಕರಣಗೊಳಿಸಿ ನೀರುಸರಬರಾಜು ಮಾಡುವಂತೆ ಮುಖ್ಯಾಧಿ ಕಾರಿಗಳಿಗೆತಿಳಿಸಿದರೂ ಸಹ ಇತ್ತ ಗಮನ ಹರಿಸುತ್ತಿಲ್ಲವೆಂದು ಸಾರ್ವಜನಿಕರು ದೂರಿದ್ದಾರೆ. ಮುಲ್ಲಾಮಾರಿ ನದಿ ನೀರಿನ ಪ್ರವಾಹದಿಂದಾಗಿ ಶುದ್ಧೀಕರಣಕ್ಕೆ ನೀರು ನುಗ್ಗಿ ಸಾಕಷ್ಟು ಕೆಸರು, ಮೋಟರ್‌ಗಳು ಹಾಳಾಗಿವೆ. ಟಿಸಿ ಸುಟ್ಟಿದ್ದರಿಂದ ಚಂದಾಪುರ ನೀರು ಪೂರೈಕೆ ಇಲ್ಲದೇ ಇಲ್ಲಿನ ಜನರು ಶುದ್ಧ ನೀರಿನ ಸಮಸ್ಯೆ ಎದುರಿಸಬೇಕಾಗಿದೆ. ಶಾಸಕರು, ಸಂಸದರು, ಮೇಲಧಿಕಾರಿಗಳು ಇದರ ಬಗ್ಗೆ ಗಮನ ಹರಿಸಬೇಕು ಎಂದು ತಾಲೂಕು ಜೆಡಿಎಸ್‌ ಮುಖಂಡ ಹಣಮಂತರಾವ ಪೂಜಾರಿ ಆಗ್ರಹಿಸಿದ್ದಾರೆ.

ಚಂದಾಪುರ ನಗರದಲ್ಲಿ ಸಾರ್ವಜನಿಕರಿಗೆ ಶುದ್ಧ ನೀರು ಪೂರೈಕೆಗೋಸ್ಕರ ಮಾಜಿ ಸಚಿವ ಸುನೀಲ್‌ ವಲ್ಯಾಪುರೆ ಬಿಜೆಪಿ ಸರಕಾರದಿಂದ 110 ಲಕ್ಷ ರೂ. ಅನುದಾನ ಮಂಜೂರುಗೊಳಿಸಿದ್ದರು. ಅಂದಿನ ಸಿಎಂ ಡಿ.ವಿ. ಸದಾನಂದಗೌಡರು 2012ರಲ್ಲಿ ಅಡಿಗಲ್ಲು ನೆರವೇರಿಸಿದ್ದರು. ಅನುದಾನ ಕೊರತೆಯಿಂದ ಸ್ಥಗಿತವಾಗಿದ್ದರಿಂದ ಮತ್ತೆ ಚಂದಾಪುರ ಮತ್ತು ಪಟ್ಟಣದಲ್ಲಿ ಸಿಎಂಎಸ್‌ ಎಂಟಿಡಿಪಿ ಯೋಜನೆಯಡಿ 20 ದಶಲಕ್ಷಲೀಟರ್‌ ಸಾಮರ್ಥ್ಯವುಳ್ಳ ಜಲ ಶುದ್ಧೀಕರಣ 125 ಲಕ್ಷ ರೂ.ಗಳಲ್ಲಿ ಕೈಗೊಂಡ ಕಾಮಗಾರಿಯನ್ನು ಅಂದಿನ ಬೀದರ ಸಂಸದ ಎನ್‌.ಧರ್ಮಸಿಂಗ್‌ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿ| ಖಮರುಲ್‌ ಇಸ್ಲಾಂ 2014ರಲ್ಲಿ ಉದ್ಘಾಟಿಸಿದ್ದರು.

ಹಳ್ಳದ ನೀರು ಕುಡಿಯಲು ಯೋಗ್ಯವಾಗಿದ್ದರು ಚಂದಾಪುರ ನಿವಾಸಿಗಳು ನೀರು ಸೇವಿಸುವುದಿಲ್ಲ. ಏಕೆಂದರೆ ಜನರು ಹೆಚ್ಚಾಗಿ ಬೋರ್‌ವೆಲ್‌ ನೀರು ಕುಡಿಯುವುದರಿಂದಹಳ್ಳದ ನೀರು ಬೇಡವಾಗಿದೆ. ಮುಲ್ಲಾಮಾರಿನದಿಯ ನೀರು ಶುದ್ಧೀಕರಣ ಘಟಕದೊಳಗೆನುಗ್ಗಿದ್ದರಿಂದ ಕೆಮಿಕಲ್‌ ಯಂತ್ರಗಳು ಕೆಟ್ಟಿವೆ. ಶುದ್ಧ ನೀರು ಸರಬರಾಜು ಮಾಡಲು ನಿರಂತರವಾಗಿ ಪ್ರಯತ್ನ ನಡೆದಿದೆ. ಜನರ ವಿಶ್ವಾಸ ಗಳಿಸುವ ಪ್ರಯತ್ನ ನಡೆದಿದೆ. ಮುಲ್ಲಾಮಾರಿ ನದಿ ನೀರು ಸೇವೆಗೆ ಯೋಗ್ಯವಾಗಿದೆ. ಜಾಥಾ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಅಭಯಕುಮಾರ ಹಬೀಬ, ಮುಖ್ಯಾಧಿಕಾರಿ, ಪುರಸಭೆ

 

ಶಾಮರಾವ ಚಿಂಚೋಳಿ

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.