ಅಫಜಲಪುರ ನಿವಾಸಿಗಳಿಗೆ ಕುಡಿವ ನೀರಿಲ್ಲ

ಪ್ರವಾಹ ನೆಪದಲ್ಲಿ 4 ದಿನದಿಂದ ನೀರು ಪೂರೈಕೆ ಸ್ಥಗಿತ

Team Udayavani, Oct 18, 2020, 6:35 PM IST

gb-tdy-1

ಅಫಜಲಪುರ: ಮಹಾರಾಷ್ಟ್ರದಲ್ಲಿ ಮಳೆ ಬಂದರೆ ಅಫಜಲಪುರ ಪಟ್ಟಣದಲ್ಲಿ ಕುಡಿಯಲು ನೀರುಬರುವುದಿಲ್ಲ. ಇದು ತಮಾಷೆಯಾದರೂ ನಿಜ. ಕಳೆದನಾಲ್ಕು ದಿನಗಳಿಂದ ಪಟ್ಟಣದ ಜನರಿಗೆ ಕುಡಿಯುವ ನೀರು ಮರೀಚಿಕೆಯಾಗಿದೆ.

ದಿನದಿಂದ ದಿನಕ್ಕೆ ಪಟ್ಟಣದ ಜನಸಂಖ್ಯೆ ಹೆಚ್ಚಳವಾಗುತ್ತಿದೆ. ಸದ್ಯ ಪಟ್ಟಣದಲ್ಲಿ ಅಂದಾಜು 29 ಸಾವಿರದಷ್ಟು ಜನಸಂಖ್ಯೆ ಇದೆ. ಇಷ್ಟೊಂದು ಪ್ರಮಾಣದ ಜನರಿಗೆ ನದಿಯ ನೀರನ್ನು ಶುದ್ಧೀಕರಿಸದೆ ಪುರಸಭೆಯವರು ನೀರು ಸರಬರಾಜು ಮಾಡುತ್ತಿದ್ದಾರೆ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ್ದ ಶುದ್ಧೀಕರಣ ಘಟಕ ಒಂದು ದಿನವೂ ನೀರು ಶುದ್ಧೀಕರಿಸಿಲ್ಲ. ಹೀಗಾಗಿ ಪಟ್ಟಣದ ಜನರಿಗೆ ಶುದ್ಧ ನೀರು ಅನ್ನುವುದೇ ಗೊತ್ತಿಲ್ಲ. ಬರೀ ಕಲುಷಿತ ನೀರನ್ನು ನೆಚ್ಚಿಕೊಂಡಂತಾಗಿದೆ.

ಪ್ರವಾಹದ ನೆಪ: ಪ್ರವಾಹ ಬಂದು ಅಫಜಲಪುರ ಪಟ್ಟಣದ ಎರಡು ಬಡಾವಣೆಗಳಲ್ಲಿ ನೀರು ನುಗ್ಗಿದೆ. ಆದರೆ, ಪಟ್ಟಣದ ಬಡಾವಣೆಗಳಿಗೆ ನೀರು ನುಗ್ಗುವ ಮೊದಲೇ ಪುರಸಭೆಯವರು ನೀರುಸರಬರಾಜು ನಿಲ್ಲಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ನಿಲ್ಲಿಸಲಾಗಿದೆ. ಪುರಸಭೆಯವರು ತಮ್ಮ ಜವಾಬ್ದಾರಿಮರೆತು ಪ್ರವಾಹದ ನೆಪದಲ್ಲಿ ನೀರು ಪೂರೈಕೆ ಮಾಡುತ್ತಿಲ್ಲ.

ಖಾಸಗಿಯವರಿಗೆ ಭರ್ಜರಿ ಲಾಭ: ಪುರಸಭೆಯವರುನದಿ ನೀರನ್ನು ಸರಬರಾಜು ಮಾಡುತ್ತಿದ್ದರು. ಆದರೆ ನಾಲ್ಕು ದಿನಗಳಿಂದ ಸರಬರಾಜು ನಿಲ್ಲಿಸಿದ್ದಾರೆ.ಆದರೆ ಪ್ರವಾಹಕ್ಕೂ ಮುನ್ನವೇ ನೀರು ಶುದ್ಧೀಕರಣ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ. ನದಿ ನೀರು ಕಲುಷಿತವಾದರೂ ಶುದ್ಧ ಕುಡಿಯುವ ನೀರಿನ ಘಟಕಗಳಿಂದಲಾದರೂ ನೀರು ತಂದು ಕುಡಿಯುತ್ತಿದ್ದ ಜನರಿಗೆ ಆ ನೀರು ಸಿಗದಂತಾಗಿದೆ. ಪುರಸಭೆಯ ನಾಲ್ಕು ಶುದ್ಧ ನೀರಿನ ಘಟಕಗಳು ಸ್ಥಗಿತವಾಗಿದ್ದರಿಂದ ಖಾಸಗಿ ಶುದ್ಧ ನೀರಿನ ಘಟಕಗಳಿಗೆ ಭರ್ಜರಿ ವ್ಯಾಪಾರ ನಡೆದಿದೆ. ಖಾಸಗಿ ಶುದ್ಧೀಕರಣ ಘಟಕ ಇಟ್ಟುಕೊಂಡವರು ಮನಸೋ ಇಚ್ಚೆ ದರ ಪಟ್ಟಿ ಸಿದ್ಧಪಡಿಸಿ ಜನಸಾಮಾನ್ಯರಿಗೆ ಮಾರಿಕೊಳ್ಳುತ್ತಿದ್ದಾರೆ. ಮೊದಲೇ ಪ್ರವಾಹದ ಹೊಡೆತಕ್ಕೆ ಜನ ತತ್ತರಿಸಿದ್ದಾರೆ. ನಾಲ್ಕು ದಿನಗಳಿಂದ ಪುರಸಭೆಯವರು ನೀರು ಸರಬರಾಜುನಿಲ್ಲಿಸಿದ್ದಾರೆ. ಇದರ ಜೊತೆಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡ ಸ್ಥಗಿತಗೊಳಿಸಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ.

2019ರ ಅಕ್ಟೋಬರ್‌ನಲ್ಲಿ ಪಟ್ಟಣಕ್ಕೆ ಶುದ್ಧ ನೀರು ಪೂರೈಕೆಗಾಗಿ 66.54 ಕೋಟಿ ಅನುದಾನ ಮಂಜೂರಾಗಿದೆ. ಆದರೆ ಟೆಂಡರ್‌ ಆಗಿಲ್ಲ. ಹೀಗಾಗಿಶುದ್ಧ ನೀರು ಪೂರೈಕೆ ಮಾಡಲಾಗುತ್ತಿಲ್ಲ. ಆದಷ್ಟು ಬೇಗ ಟೆಂಡರ್‌ ಪ್ರಕ್ರಿಯೆ ಮುಗಿದು ಕಾಮಗಾರಿ ಮುಗಿದ ಬಳಿಕ ಶುದ್ಧ ನೀರು ಪೂರೈಕೆ ಮಾಡಲಾಗುತ್ತದೆ. – ವಿಜಯಕುಮಾರ ಬಿಲಗುಂದಿ, ಎಇಇ ಕೆಯುಡೂಬ್ಲ್ಯಎಸ್‌ಡಿ ಬೋರ್ಡ್‌ ಕಲಬುರಗಿ

ಭೀಮಾ ನದಿಯಲ್ಲಿ ಪ್ರವಾಹದ ನೀರುಬಂದಿದ್ದರಿಂದ ಪಟ್ಟಣಕ್ಕೆ ಸರಬರಾಜು ಆಗುವ ಜಾಕ್‌ವಾಲ್‌ ಮುಳುಗಡೆಯಾಗಿದೆ. ಹೀಗಾಗಿ ನೀರು ಸರಬರಾಜು ಮಾಡಲಾಗುತ್ತಿಲ್ಲ. ಇನ್ನೂ ಮೂರು ದಿನ ಸಮಸ್ಯೆಯಾಗಲಿದೆ. ಸಾರ್ವಜನಿಕರು ಸಹಕರಿಸಬೇಕು.-ಬಾಬುರಾವ ಮುಖ್ಯಾಧಿಕಾರಿ ಪುರಸಭೆ

 

-ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.