ಲಾಡ್ಲಾಪುರ: ಸಹಕಾರ ಸಂಘಕ್ಕೆ 12 ಸದಸ್ಯರ ಆಯ್ಕೆ


Team Udayavani, Dec 2, 2018, 10:32 AM IST

gul-2.jpg

ವಾಡಿ: ಲಾಡ್ಲಾಪುರ ಗ್ರಾಮದಲ್ಲಿ ನೂತನವಾಗಿ ರಚನೆಯಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಶನಿವಾರ ಪೊಲೀಸ್‌ ಬಿಗಿ ಭದ್ರತೆ ಮಧ್ಯೆ ಚುನಾವಣೆ ನಡೆದಿದ್ದು, 12 ಜನ ಸದಸ್ಯರು ಚುನಾಯಿತರಾಗಿದ್ದಾರೆ.

ಲಾಡ್ಲಾಪುರ ಹಾಗೂ ಕೊಂಚೂರು ಗ್ರಾಮಗಳ ಒಟ್ಟು 200 ಕೃಷಿಕ ಮತದಾರರ ಪೈಕಿ 190 ಮತಗಳು ಚಲಾವಣೆಯಾದವು. 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 21 ಜನ ಅಭ್ಯರ್ಥಿಗಳು ಕಣದಲ್ಲಿದ್ದರು. ಬೆಳಗ್ಗೆಯಿಂದ ಮತದಾನ ಶುರುವಾಗಿ ಸಂಜೆ ಮತ ಎಣಿಕೆ ನಡೆದು ವಿಜೇತ ಅಭ್ಯರ್ಥಿಗಳ ಹೆಸರು ಘೋಷಿಸಲಾಯಿತು. ಜುಮ್ಮಣ್ಣ ಪೂಜಾರಿ ಕೊಂಚೂರ, ವಿಶ್ವನಾಥ ಗಂದಿ, ಶರಣಪ್ಪ ಪೂಜಾರಿ, ತುಳಸಿರಾಮ ಗೋಪು, ಸುರೇಶ ಶಾಂತವೀರಗೌಡ, ದೇವಿಂದ್ರಪ್ಪ ದಂಡಬಾ, ಮಹೇಬೂಬ ಪಟೇಲ, ಜಗದೇವಿ ಮಾಳಪ್ಪ, ಬನ್ನಮ್ಮ ಮಲ್ಲಣ್ಣ, ಮಲ್ಲಿಕಾರ್ಜುನ ಭಾಗಪ್ಪ , ಸಾಬಯ್ಯ ಕಲಾಲ ಚುನಾಯಿತರಾದರೆ, ಹಣಮಂತ ಗಲಿಗಿನ್‌ ಅವಿರೋಧವಾಗಿ ಆಯ್ಕೆಯಾದರು. 

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಒಟ್ಟು 12 ಸ್ಥಾನಗಳ ಪೈಕಿ 6 ಸ್ಥಾನಗಳು ಸಾಮಾನ್ಯ, ಪರಿಶಿಷ್ಟ ಪಂಗಡಕ್ಕೆ ಒಂದು ಸ್ಥಾನ, ಪರಿಶಿಷ್ಟ ಜಾತಿಗೆ ಒಂದು ಸ್ಥಾನ, ಸಾಮಾನ್ಯ ಮಹಿಳೆ ಎರಡು ಸ್ಥಾನ ಮತ್ತು ಹಿಂದುಳಿದ ವರ್ಗಕ್ಕೆ ಎರಡು ಸ್ಥಾನಗಳನ್ನು ಮೀಸಲಿಡಲಾಗಿತ್ತು. ಪ್ರಜಾಪ್ರಭುತ್ವದ ನಿಯಮದಂತೆ ಮೀಸಲಾತಿ ಪ್ರಕಟಿಸಿ ಚುನಾವಣೆ ನಡೆಸಲಾಗಿದೆ. 

ಚುನಾಯಿತರಾದ ಸದಸ್ಯರಲ್ಲಿಯೇ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ. 16 ದಿನಗಳ ಒಳಗಾಗಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ದಿನಾಂಕ ಪ್ರಕಟಗೊಳ್ಳಲಿದೆ ಎಂದು ಚುನಾವಣಾಧಿಕಾರಿ ಎಲ್‌.ಆರ್‌. ಪರಮೇಶ ತಿಳಿಸಿದ್ದಾರೆ.

ಪ್ರಜಾಪ್ರಭುತ್ವ ನಿಯಮ ಪಾಲಿಸಿಲ್ಲ
 ವಾಡಿ: ಲಾಡ್ಲಾಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಪ್ರಕ್ರಿಯೆಯಲ್ಲಿ ಪ್ರಜಾಪ್ರಭುತ್ವದ ನಿಯಮಗಳನ್ನು ಗಾಳಿಗೆ ತೂರುವ ಮೂಲಕ ಅಧಿಕಾರಿಗಳು ಚುನಾವಣೆ ನಡೆಸಿದ್ದಾರೆ ಎಂದು ಲಾಡ್ಲಾಪುರ ಗ್ರಾಪಂ ಅಧ್ಯಕ್ಷ, ಬಿಜೆಪಿ ಮುಖಂಡ ಸಾಬಣ್ಣ ಆನೇಮಿ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಆನೇಮಿ, ನೂತನವಾಗಿ ಜಾರಿಗೆ ಬಂದಿರುವ ಲಾಡ್ಲಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗ್ರಾಪಂ ವ್ಯಾಪ್ತಿಯ ಕೊಂಚೂರು ಹಾಗೂ ಲಾಡ್ಲಾಪುರದ ರಾಜಕೀಯ ಮುಖಂಡರಾದ ಜುಮ್ಮಣ್ಣ ಪೂಜಾರಿ, ಸಾಬಯ್ಯ ಕಲಾಲ, ವಿಶ್ವನಾಥ ಗಂದಿ, ಶರಣಪ್ಪ ಪೂಜಾರಿ, ಹಣಮಂತ ಗದಗಿನ, ತುಳಸಿರಾಮ, ದೇವಿಂದ್ರಪ್ಪ ಸೋಮಣ್ಣ, ಬನ್ನಮ್ಮ ಮಲ್ಲಣ್ಣ ಸೇರಿದಂತೆ ಒಟ್ಟು 12 ಜನ ಪ್ರವರ್ತಕರನ್ನು ನೇಮಕ ಮಾಡಲಾಗಿತ್ತು. ಸಾಮಾಜಿಕ ನ್ಯಾಯದಡಿ ರೈತರು ಮತ್ತು ಕೃಷಿಕರಿಗೆ ಸದಸ್ಯತ್ವ ನೀಡಬೇಕಾದ ಪ್ರವರ್ತಕರು, ತಮ್ಮ ಕುಟುಂಬ ಸದಸ್ಯರನ್ನೇ ಸಂಘದ ಸದಸ್ಯರನ್ನಾಗಿ ಮಾಡಿ ಇತರರನ್ನು ಚುನಾವಣೆಯಿಂದ ಹೊರಗಿಟ್ಟಿದ್ದಾರೆ. 18 ವಯೋಮಿತಿ ಇಲ್ಲದವರಿಗೂ ಸಂಘದ ಸದಸ್ಯತ್ವ ನೀಡಿ ಕಾನೂನು ಉಲ್ಲಂಘಿಸಿದ್ದಾರೆ ಎಂದು ದೂರಿದ್ದಾರೆ.

ಕ್ಷೇತ್ರದ ಶಾಸಕ, ಸಚಿವ ಪ್ರಿಯಾಂಕ್‌ ಖರ್ಗೆ ಅವರ ರಾಜಕೀಯ ಒತ್ತಡಕ್ಕೆ ಮಣಿದು ಸುಮಾರು 5000 ರೈತರ ಪೈಕಿ ತಮಗೆ ಬೇಕಾದ 200 ಕೃಷಿಕರಿಗೆ ಸದಸ್ಯತ್ವ ನೀಡಲಾಗಿದ್ದು, ಇನ್ನುಳಿದ 4000ಕ್ಕೂ ಹೆಚ್ಚು ರೈತರನ್ನು ಕಡೆಗಣಿಸಿದ್ದಾರೆ. ಇದರ ವಿರುದ್ಧ ದ್ವನಿ ಎತ್ತಿದರೂ ಕ್ಯಾರೆ ಎನ್ನದ ಅಧಿಕಾರಿಗಳು, ಚುನಾವಣೆ ನಡೆಸಿದ್ದಾರೆ. ಇದರ ವಿರುದ್ಧ ನಾವು ಕಲಬುರಗಿ ಹೈಕೋರ್ಟ್‌ನಲ್ಲಿ ಈಗಾಗಲೇ ದಾವೆ ಹೂಡಿದ್ದೇವೆ. ಅರ್ಹ ಕೃಷಿಕರಿಗೆ ಸಂಘದ ಸದಸ್ಯತ್ವ ನೀಡದೆ ಪ್ರವರ್ತಕರು ಮತ್ತು ಅಧಿಕಾರಿಗಳು ಏಕಾಏಕಿ ಚುನಾವಣೆ ನಡೆಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದಂತಾಗಿದೆ. ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.