ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಾಯಕರು
Team Udayavani, Jul 26, 2022, 12:22 PM IST
ವಾಡಿ: ಚಿತ್ತಾಪುರ ಮೀಸಲು ಮತಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಬಂಜಾರಾ ಸಮಾಜದ ಯುವ ನಾಯಕರು ಶಾಸಕ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲಿಂ ಐಮದ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಮಹೆಮೂದ್ ಸಾಹೇಬ ಅವರ ನೇತೃತ್ವದಲ್ಲಿ ಸೋಮವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ಬಿಜೆಪಿ ಇಂಗಳಗಿ ಮಂಡಲದ ಅಧ್ಯಕ್ಷ ಬಸವಂತರಾವ ಪಾಟೀಲ (ಗುಂಡುಗೌಡ), ಅಖೀಲ ಭಾರತ ಬಂಜಾರಾ ಸೇವಾ ಸಂಘದ ವಾಡಿ ವಲಯ ಅಧ್ಯಕ್ಷ ಶಂಕರ ಜಾಧವ, ಬಿಜೆಪಿ ಒಬಿಸಿ ಮೋರ್ಚಾದ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ನಾಟೀಕಾರ ಇಂಗಳಗಿ, ಆರ್ಯ ಈಡಿಗ ಸಮಾಜದ ತಾಲೂಕು ಉಪಾಧ್ಯಕ್ಷ ಸಂಗಯ್ಯ ಗುತ್ತೇದಾರ, ಪುರಸಭೆ ಮಾಜಿ ಸದಸ್ಯ ವಿಜಯ್ ನಾಯಕ, ಬಂಜಾರಾ ಮುಖಂಡರಾದ ಹಣಮಂತ ಚವ್ಹಾಣ ಕಡಬೂರ, ರಾಜೇಂದ್ರ ಪವಾರ, ಬಾಬು ನಾಯಕ, ಕಿಶನ್ ನಾಯಕ, ಅಶೋಕ ಚವ್ಹಾಣ, ವೆಂಕಟೇಶ ಜಾಧವ, ಹೇಮಂತ ನಾಯಕ, ದಶರಥ ರಾಠೊಡ ಅವರು ಅಧಿ ಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೆಮೂದ್ ಸಾಹೇಬ ಮಾತನಾಡಿ, ಬಿಜೆಪಿ ತೊರೆದು ಬಂದ ಮುಖಂಡರನ್ನು ಪ್ರಿಯಾಂಕ್ ಖರ್ಗೆ ಅವರು ಸಾಂಕೇತಿಕವಾಗಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಮುಂದಿನ ದಿನಗಳಲ್ಲಿ ವಾಡಿ ನಗರದಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗುತ್ತಿದ್ದು, ಆ ವೇಳೆ ಅದ್ಧೂರಿಯಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಗುತ್ತದೆ. ಅಲ್ಲದೆ ಇವರೊಂದಿಗೆ ಇನ್ನೂ ಅನೇಕ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಶಾಸಕ ಪ್ರಿಯಾಂಕ್ ಅವರ ಜಾತ್ಯತೀತ ನಿಲುವು ಮತ್ತು ಅಭಿವೃದ್ಧಿಯ ದೂರ ದೃಷ್ಟಿಯನ್ನು ಮನಗಂಡು ಪಕ್ಷಕ್ಕೆ ಆಕರ್ಷಿತರಾಗಿರುವುದು ಪಕ್ಷಕ್ಕೆ ಮತ್ತಷ್ಟು ಶಕ್ತಿ ನೀಡಲಿದೆ ಎಂದರು.
ಬಿಜೆಪಿ ತೊರೆದು ಬಂದ ಮುಖಂಡರೆಲ್ಲರನ್ನೂ ಕಾಂಗ್ರೆಸ್ ಪಕ್ಷದ ಶಾಲು ಹೊದಿಸುವ ಮೂಲಕ ಶಾಸಕ ಪ್ರಿಯಾಂಕ್ ಖರ್ಗೆ ಅವರು ಪಕ್ಷಕ್ಕೆ ಸ್ವಾಗತಿಸಿದರು. ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷ ಮನ್ಸೂರ್ ಖಾನ್ ಈ ಸಂದರ್ಭದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್