ಪ್ರತಿಭಾವಂತರು ಸಂಶೋಧನೆಗೆ ಆಕರ್ಷಿತರಾಗಲಿ


Team Udayavani, Jul 4, 2022, 11:27 AM IST

5talent

ಕಲಬುರಗಿ: ನಗರದ ಶರಣಬಸವ ವಿಶ್ವವಿದ್ಯಾಲಯದ ಪೂಜ್ಯ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಆಯೋಜಿಸಿದ್ದ ಮೂರು ದಿನಗಳ “ಬಹುಶಿಸ್ತೀಯ ಸಂಶೋಧನೆಯಲ್ಲಿ ಇತ್ತೀಚಿನ ಆವಿಷ್ಕಾರಗಳು’ ಸಮ್ಮೇಳನ ಯಶಸ್ವಿಯಾಗಿ ನಡೆದು ರವಿವಾರ ತೆರೆ ಕಂಡಿತು.

ವಿಶ್ವವಿದ್ಯಾಲಯದ ಕುಲಸಚಿವ ಡಾ|ಅನಿಲ್‌ ಕುಮಾರ್‌ ಬಿಡವೆ ಅವರು ಸಮಾರೋಪ ಭಾಷಣ ಮಾಡಿ, ರಾಷ್ಟ್ರೀಯ ಈ ಸಮ್ಮೇಳನದಲ್ಲಿ ವಿವಿಧ ವಿಷಯಗಳ ಕುರಿತು 10 ರಿಂದ 12 ವಿಭಾಗಗಳಲ್ಲಿ 110ಕ್ಕೂ ಹೆಚ್ಚು ಅ ಧಿವೇಶನವನ್ನು ಆಯೋಜಿಸಲಾಗಿತ್ತು. ವಿವಿಧ ಕ್ಷೇತ್ರಗಳ ವಿದ್ವಾಂಸರಿಂದ 500ಕ್ಕೂ ಹೆಚ್ಚು ಪ್ರಬಂಧಗಳನ್ನು ಮಂಡಿಸಲಾಯಿತು. 150 ಪ್ರಬಂಧಗಳು ಗುಣಮಟ್ಟದಿಂದ ಕೂಡಿವೆ ಎಂದು ವಿವರಿಸಿದರು.

ಪೂಜ್ಯ ಡಾ| ಶರಣಬಸಪ್ಪ ಅಪ್ಪಾಜಿ ಮತ್ತು ಮಾತೋಶ್ರೀ ಡಾ| ದಾûಾಯಿಣಿ ಅವ್ವಾಜಿ ಮತ್ತು ಚಿ. ದೊಡ್ಡಪ್ಪ ಅಪ್ಪಾಜಿ ಮತ್ತು ಬಸವರಾಜ ದೇಶಮುಖರ ಮಾರ್ಗದರ್ಶನ ಮತ್ತು ಉಪಕುಲಪತಿ ಡಾ| ನಿರಂಜನ್‌ ವಿ ನಿಷ್ಠಿ ಆವರ ಪ್ರೋತ್ಸಾಹದಿಂದಾಗಿ ಇದು ಫಲಪ್ರದ ಸಮ್ಮೇಳನವಾಗಿ, ಶಿಕ್ಷಕರು, ಸಂಶೋಧನಾ ವಿದ್ವಾಂಸರು, ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವಾಯಿತು. ಮುಂಬರುವ ನವೆಂಬರ್‌ ತಿಂಗಳಿನಲ್ಲಿ ಮತ್ತೊಂದು ಸಮ್ಮೇಳನಕ್ಕೆ ಇದು ಬಲವಾದ ಅಡಿಪಾಯ ನೀಡಿದೆ ಎಂದರು.

ದೇಶದ ಮತ್ತು ಕರ್ನಾಟಕದ ವಿವಿಧ ಭಾಗಗಳಿಂದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಿಂದ, ಐಐಟಿಯ ಖಾಸಗಿ ವಿಶ್ವವಿದ್ಯಾಲಯಗಳಿಂದ ಶ್ರೇಷ್ಠ ವಿದ್ವಾಂಸರು ಮತ್ತು ತಜ್ಞರು ತಮ್ಮ ಪ್ರಬಂಧಗಳನ್ನು ಮಂಡಿಸಿದರು. ಇಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ಸಂಶೋಧನಾ ವಿದ್ವಾಂಸರು ಸಂಶೋಧನಾ ಚಟುವಟಿಕೆಯಲ್ಲಿ ಭಾಗಿಯಾಗಬೇಕಿತ್ತು. ವಿದ್ಯಾರ್ಥಿಗಳಿಗೆ ಸಂಶೋಧನಾ ಅವಕಾಶಗಳನ್ನು ಒದಗಿಸದಿದ್ದರೆ, ಅವರನ್ನು ಪ್ರೋತ್ಸಾಹಿಸದಿದ್ದರೆ, ಅವರು ರಾಷ್ಟ್ರಕ್ಕೆ ಹೇಗೆ ಕೊಡುಗೆ ನೀಡುತ್ತಾರೆ ಎಂದು ಪ್ರಶ್ನಿಸಿದರು.

ಪ್ರತಿಭಾವಂತರು ಸಂಶೋಧನೆಯತ್ತ ಆಕರ್ಷಿತರಾಗುವಂತೆ ಮಾಡುವುದು ಅಗತ್ಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಭಾಷಾ ವಿಷಯಗಳ ಡೀನ್‌ ಡಾ| ಎಸ್‌.ಜಿ ಡೊಳ್ಳೇಗೌಡರು ಮಾತನಾಡಿದರು.

ಈ ಸಂದರ್ಭದಲ್ಲಿ ಡೀನ್‌ಗಳು, ಶಿಕ್ಷಕರು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಾಣಿಜ್ಯ ಮಹಾವಿದ್ಯಾಲಯದ ದಶರಥ್‌ ಮೇತ್ರಿ, ರಿಜಿಸ್ಟ್ರಾರ್‌ (ಮೌಲ್ಯಮಾಪನ) ಡಾ|ಬಸವರಾಜ ಮಠಪತಿ, ಡಾ|ಶಿವದತ್ತ ಹೊನ್ನಳ್ಳಿ, ಡಾ|ಶಿವಕುಮಾರ್‌ ಜವಳಗಿ, ಡಾ| ಶ್ರೀಕಾಂತ ಪಾಟೀಲ, ಶಿವಕುಮಾರ್‌ ರಾಚೋಟಿ, ವಾಣಿಶ್ರೀ ಸಿ.ಟಿ. ನಾಗಬಸವಣ್ಣ ಗುರಗೋಳ, ಶರಣಬಸಪ್ಪ ಮಡಿವಾಳ ಉಪಸ್ಥಿತರಿದ್ದರು. ಶ್ರುತಿ ಪಾಟೀಲ ಸ್ವಾಗತಿಸಿದರು. ಶರಣಗೌಡ ನಿರೂಪಿಸಿದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.