ಮನೆಗಳಿಂದಲೂ ಬಸವ ತತ್ವ ಪ್ರಚಾರ ನಡೆಯಲಿ


Team Udayavani, Aug 30, 2022, 6:11 PM IST

17-basavas

ಆಳಂದ: ಕೇವಲ ಮಠಗಳು ಮತ್ತು ಮಠಾ ಧೀಶರು ಮಾತ್ರ ಬಸವ ತತ್ವ ಆಚರಣೆ ಮಾಡಿದರೆ ಸಾಲದು, ಪ್ರತಿಯೊಬ್ಬರ ಮನೆ, ಮನಗಳ ಮೂಲಕವೂ ಆಚರಣೆಗೆ ತರುವ ಕಾರ್ಯವಾಗಬೇಕು ಎಂದು ಭಾಲ್ಕಿ ಸಂಸ್ಥಾನ ಹಿರೇಮಠದ ಗುರುಬಸವ ದೇವರು ನುಡಿದರು.

ಪಟ್ಟಣದ ಶರಣ ಏಕಾಂತರಾಮಯ್ಯನ ಮಂದಿರದಲ್ಲಿ ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌ ತಾಲೂಕು ಘಟಕ ಆಯೋಜಿಸಿದ್ದ ತಿಂಗಳ ಕಾಲದ ದಶಮಾನೋತ್ಸವ ಶ್ರಾವಣ ಸಂಜೆ ಉಪನ್ಯಾಸ ಕಾರ್ಯಕ್ರಮದ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಶ್ರಾವಣ ಉಪನ್ಯಾಸ, ವಚನ ಗಾಯನ ಮೂಲಕ ಸಮಾಜದಲ್ಲಿ ಶಾಂತಿ ಸೌಹಾರ್ದತೆ ಮೂಡಿಸುವುದರ ಜೊತೆಗೆ ಎಲ್ಲ ಮನೆ ಮನಗಳಲ್ಲಿ ಬಸವ ತತ್ವ ಪ್ರಚಾರಕ್ಕೆ ಇಲ್ಲಿನ ಶ್ರಾವಣ ಸಂಜೆ ಕಾರ್ಯಕ್ರಮ ಉತ್ತಮ ನಡೆಯಾಗಿದೆ. ಬಸವ ತತ್ವ ಸರ್ವ ಜನಾಂಗಕ್ಕೆ ದಾರಿದೀಪವಾಗಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಮಾಜಿ ಶಾಸಕ ಬಿ.ಆರ್‌. ಪಾಟೀಲ ಮಾತನಾಡಿ, ಬಸವ ತತ್ವ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯಕ್ಕೆ ನಾಡಿನ ಬಸವ ಪರಂಪರೆ ಮಠಗಳ ಮಠಾಧಿಧೀಶರ ಸಭೆ ಕರೆದು ಮುಂದಿನ ಹೆಜ್ಜೆ ಇಡುವಂತಾಗಬೇಕು ಎಂದು ಹೇಳಿದರು.

ಕಲಬುರಗಿಯ ಸಹಾಯಕ ಪ್ರಧ್ಯಾಪಕ ಡಾ|ಟಿ. ಗುರುಬಸಪ್ಪ ಮಾತನಾಡಿ, ವೈಚಾರಿಕತೆಯಿಂದ ಕೂಡಿದ ಉಪನ್ಯಾಸಗಳು ಯುವಕರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದರು.

ಬಸವ ಬೆಳದಿ ಹುಕ್ಕೇರಿಯ ಬಸವಧರ್ಮ ಪ್ರಚಾರ ಸಂಸ್ಥೆಯ ಶ್ರೀ ಶರಣಬಸವ ದೇವರು ಮಾತನಾಡಿ, ಪ್ರಸ್ತುತ ಪದವಿಗಳ ಗುಣಮಟ್ಟದ ಬಗ್ಗೆ ಕಿಡಿಕಾರಿ, ಶರಣರು ಯಾವುದೇ ಪದವಿ ಪಡೆದುಕೊಂಡಿಲ್ಲ, ಶರಣ ಸಂಸ್ಕೃತಿ ಇಂದಿಗೂ ಜೀವಂತವಾಗಿದೆ ಎಂದು ಹೇಳಿದರು.

ಶರಣ ಸಾಹಿತ್ಯ ಪರಿಷತ್‌ ರಾಜ್ಯ ಘಟಕದ ಉಪಾಧ್ಯಕ್ಷ ಅಪ್ಪಾರಾವ್‌ ಅಕ್ಕೊಣಿ ಶರಣ ಸಾಹಿತ್ಯ ಪರಿಷತ್‌ ನಡೆದು ಬಂದ ದಾರಿ ತಿಳಿಸಿದರು. ತಾಲೂಕು ಅಧ್ಯಕ್ಷ ಸಂಜಯ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು.

ಶರಣ ಧರ್ಮಣ್ಣಾ ಪೂಜಾರಿ, ನಿವೃತ್ತ ವೈದ್ಯಾಧಿ ಕಾರಿ ಡಾ|ಎ.ಎಂ. ಬುಜರ್ಕೆ, ಗುತ್ತಿಗೆದಾರ ರೇವಣಸಿದ್ಧಪ್ಪ ನಾಗೂರೆ, ಮಾಳಿ ಸಮಾಜದ ಅಧ್ಯಕ್ಷ ಪಂಡಿತ ಶೇರಿಕಾರ, ಮರಾಠಾ ಸಮಾಜದ ಅಧ್ಯಕ್ಷ ನಾಗನಾಥ ಏಟೆ, ಖಜೂರಿ ರಾಜಶೇಖರ ಹರಿಹರ್‌ ಮತ್ತಿತರರು ಆಗಮಿಸಿದ್ದರು. ಉಪನ್ಯಾಸಕ ರಮೇಶ ಮಾಡ್ಯಾಳೆ ಸ್ವಾಗತಿಸಿದರು. ಶಿಕ್ಷಕ ಧರ್ಮರಾಜ ಕೊರಳ್ಳಿ ನಿರೂಪಿಸಿದರು. ಲಕ್ಷ್ಮೀಕಾಂತ ಬೀದಿ ವಂದಿಸಿದರು. ಕಲಾವಿದ ಶಿವಶರಣಪ್ಪ ಪೂಜಾರಿ ವಚನ ಗೀತೆ ಹಾಡಿದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.