ಅಭಿವೃದ್ಧಿ ಸೂಚ್ಯಂಕದಲ್ಲಿ ದೇಶ ಟಾಪ್‌ ಬರಲಿ

ನಗರಗಳು ಬೃಹದಾಕಾರವಾಗಿ ಬೆಳೆಯುತ್ತಿದ್ದಂತೆ ನಗರಕ್ಕೆ ಹೊಂದಿಕೊಂಡ ಗ್ರಾಮಗಳನ್ನು ನುಂಗಿ ಹಾಕಿವೆ.

Team Udayavani, Sep 19, 2022, 4:45 PM IST

ಅಭಿವೃದ್ಧಿ ಸೂಚ್ಯಂಕದಲ್ಲಿ ದೇಶ ಟಾಪ್‌ ಬರಲಿ

ಕಲಬುರಗಿ: ಜಾಗತಿಕ ಮಟ್ಟದ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಸದ್ಯ ಭಾರತ 121ನೇ ಕ್ರಮಾಂಕದಲ್ಲಿದ್ದು, ಮುಂದಿನ 2047ರ ಸ್ವಾತಂತ್ರ್ಯದ ಶತಮಾನೋತ್ಸವಕ್ಕೆ ಟಾಪ್‌ 10ರೊಳಗೆ ಭಾರತ ಸೇರಬೇಕು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಶೋಭಾ ಕರಂದ್ಲಾಜೆ ಹೇಳಿದರು.

ರವಿವಾರ ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನಗಂಗೆ ಆವರಣದ ಡಾ|ಬಿ.ಆರ್‌. ಅಂಬೇಡ್ಕರ್‌ ಸಭಾಭವನದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ “ಗ್ರಾಮೀಣ ಯುವಕ ಯುವತಿಯರಿಗೆ ಸ್ವಾವಲಂಬಿ ಗ್ರಾಮದ ಪ್ರಶಿಕ್ಷಣ ತರಬೇತಿ ಕಾರ್ಯಾಗಾರ’ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ, ಆರೋಗ್ಯ, ಆದಾಯ ಸೇರಿ ಮಾನವನ ಅಭ್ಯುದಯವಾಗಬೇಕಾದರೆ ಪರಿಶ್ರಮ ಅತ್ಯಗತ್ಯ. ಪ್ರತಿಯೊಬ್ಬರು ಸ್ವಯಂ ಅಭಿವೃದ್ಧಿ ಹೊಂದಬೇಕು. ಈ ದಿಸೆಯಲ್ಲಿ ಭಾರತದ ತಾಯಿಬೇರು ಹಳ್ಳಿಗರ ಬದುಕಿನಲ್ಲಿದೆ. ಹಳ್ಳಿ ಜನರಿಂದಲೇ ದೇಶ ಉದ್ಧಾರವಾಗಿ ವಿಶ್ವಗುರು ರಾಷ್ಟ್ರವಾಗಿ ಹೊರಹೊಮ್ಮಲು ಸಾಧ್ಯ ಎಂದರು.

2023 ಸಿರಿಧಾನ್ಯ ವರ್ಷ: ಪ್ರಧಾನಿ ನರೇಂದ್ರ ಮೋದಿ ಕೋರಿಕೆ ಮೇರೆಗೆ ವಿಶ್ವಸಂಸ್ಥೆಯು 2023 ವರ್ಷವನ್ನು ಸಿರಿಧಾನ್ಯಗಳ ವರ್ಷ ಘೋಷಿಸಿದೆ. ಹೀಗಾಗಿ, ನಾವು ಸಿರಿಧಾನ್ಯ ತಿನ್ನುವುದರೊಂದಿಗೆ ಪ್ರಪಂಚಕ್ಕೆ ತಿನ್ನಿಸುವ ಮಟ್ಟಿಗೆ ವ್ಯಾಪಾರ, ವಹಿವಾಟು ಮಾಡೋಣ. ರಾಗಿ, ಜೋಳ ಸೇರಿ ಸಿರಿಧಾನ್ಯ ಬೆಳೆಗಳಿಗೆ ತುಂಬಾ ಬೇಡಿಕೆ ಬರುತ್ತದೆ ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಮಾತನಾಡಿ, ಹಳ್ಳಿಯಲ್ಲಿ ಶುದ್ಧ ಗಾಳಿ, ಬೆಳಕು, ಕುಡಿಯುವ ನೀರು, ಶುಚಿ ಆಹಾರ ಲಭಿಸುವುದರಿಂದ ಮಾನವ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಹಳ್ಳಿ ಬದುಕಿನಲ್ಲಿ ಸುಖ, ನೆಮ್ಮದಿ ಸಿಗುತ್ತದೆ. ಆಧುನಿಕ ತಂತ್ರಜ್ಞಾನದ ಭರಾಟೆಯಲ್ಲಿ ದೊಡ್ಡ ನಗರಗಳು ಬೃಹದಾಕಾರವಾಗಿ ಬೆಳೆಯುತ್ತಿದ್ದಂತೆ ನಗರಕ್ಕೆ ಹೊಂದಿಕೊಂಡ ಗ್ರಾಮಗಳನ್ನು ನುಂಗಿ ಹಾಕಿವೆ. ದೆಹಲಿ ಪರಿಸರ, ವಾಯು, ಜಲ ಮಾಲಿನ್ಯದಿಂದ ತುಂಬು ತುಳುಕುತ್ತಿದೆ. ಹಳ್ಳಿ ಸಂಸ್ಕೃತಿ, ಸಂಪತ್ತು ಎತ್ತಿಹಿಡಿಯುವ ಜವಾಬ್ದಾರಿ ಯುವಕ-ಯುವತಿಯರ ಕೈಯಲ್ಲಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಮಾತನಾಡಿ, ಹಳ್ಳಿಗಳು ಉದ್ಧಾರವಾಗಬೇಕು, ಯುವಕರು ಸ್ವಾಲಂಬಿ ಜೀವನ ಕಟ್ಟಿಕೊಳ್ಳಬೇಕೆಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯವಾಗಿದೆ. ಇದನ್ನು ಸಾಕಾರಗೊಳಿಸುವ ಜವಾಬ್ದಾರಿ ಭಾವಿ ಪ್ರಜೆಗಳಾದ ಯುವ ಸಮೂಹದ ಮೇಲಿದೆ ಎಂದು ಹೇಳಿದರು.

ಗದಗನ ರಾಮಕೃಷ್ಣ ಆಶ್ರಮದ ಪೂಜ್ಯ ನಿರ್ಭಯಾನಂದ ಶ್ರೀಗಳು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಗ್ರಾಮ ವಿಕಾಸ ತಜ್ಞ ಡಾ|ಎಂ.ಎ. ಬಾಲಸುಬ್ರಮಣ್ಯ, ಶಿಕ್ಷಣ ಉಪ ಸಮಿತಿ ಅಧ್ಯಕ್ಷೆ ಲೀಲಾ ಎಂ. ಕಾರಟಗಿ ಉಪನ್ಯಾಸ ನೀಡಿದರು. ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಶಶೀಲ್‌ ಜಿ. ನಮೋಶಿ, ಬಿ.ಜಿ.ಪಾಟೀಲ್‌, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಮಸ್ಕೃತಿಕ ಸಂಘದ ಆಡಳಿತ ಮಂಡಳಿ ಸದಸ್ಯರಾದ ವಿ. ಶಾಂತರಡ್ಡಿ, ಹಣಮಂತ ತೆಗನೂರ, ಮಂಜುಳಾ ಡೊಳ್ಳೆ, ದುರ್ದಾನಾ ಬೇಗಂ,
ತಿಪ್ಪಣ್ಣ ರಡ್ಡಿ, ಅಧಿಧೀನ ಕಾರ್ಯದರ್ಶಿ ಮಲ್ಲಿಕಾರ್ಜುನರೆಡ್ಡಿ ಪಾಟೀಲ ಇದ್ದರು. ಅಂಬಿಕಾ ನಿರೂಪಿಸಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.