ಬರಹಗಾರರು ಸಮಾಜದ ಆಗು ಹೋಗುಗಳಿಗೆ ಸ್ಪಂದಿಸಲಿ
Team Udayavani, Mar 22, 2021, 8:50 PM IST
ಕಲಬುರಗಿ: ಕವಿ, ಸಾಹಿತಿ, ಕಲಾವಿದ, ಲೇಖಕರು ಸಮಾಜದ ಆಗುಹೋಗುಗಳಿಗೆ ಸದಾ ಸ್ಪಂದಿಸಬೇಕು ಎಂದು ಮಾಜಿ ಮಾಜಿ ಶಾಸಕ ಬಿ.ಆರ್. ಪಾಟೀಲ ಹೇಳಿದರು.
ಆಳಂದ ಸಾಸಿರನಾಡು ಸಾಹಿತ್ಯ-ಸಾಂಸ್ಕೃತಿಕ ವೇದಿಕೆ, ಬಸವೇಶ್ವರ ಸಮಾಜ ಸೇವಾ ಬಳಗದ ಆಶ್ರಯದಲ್ಲಿ ನಗರದ ಚೇಂಬರ್ ಆಪ್ ಕಾಮರ್ಸ್ ಸಭಾಂಗಣದಲ್ಲಿ ರವಿವಾರ ವಿಶ್ವನಾಥ ಭಕರೆ ರಚಿಸಿದ “ಶಿವರುದ್ರಯ್ಯನ ಶಿವತಾಂಡವ’ ಕಥಾ ಸಂಕಲನ ಜನಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬದುಕಿನ ಅನುಭವಗಳೇ ಕಥಾವಸ್ತುವಾಗಬೇಕು. ಅಂದಾಗ ಆ ಕಥೆಗಳಿಗೆ ಗಟ್ಟಿತನ ಬರುತ್ತದೆ. ಪ್ರತಿಯೊಂದು ಗ್ರಾಮಕ್ಕೂ ಅದರದ್ದೇ ಆದ ಇತಿಹಾಸವಿರುತ್ತದೆ. ಅಂತಹ ಗ್ರಾಮೀಣ ಪ್ರದೇಶದ ಇತಿಹಾಸ ಹೊರತರಬೇಕು ಎಂದು ಹೇಳಿದರು. ಕೃತಿ ಜನಾರ್ಪಣೆ ಮಾಡಿ ಮಾತನಾಡಿದ ಡಾ| ಕಾಶಿನಾಥ ಅಂಬಲಗಿ, ಪುಸ್ತಕಗಳು ಜ್ಞಾನದ ಭಂಡಾರ. ಬರಹಗಾರರಾದವರು ಹೆಚ್ಚು ಓದಬೇಕು. ಸುಸಂಸ್ಕೃತ ಮತ್ತು ಶ್ರೇಷ್ಠ ಸಂಸ್ಕೃತಿ ಕಟ್ಟುವ ಜವಾಬ್ದಾರಿ ಲೇಖಕರ ಮೇಲಿದೆ ಎಂದು ಹೇಳಿದರು. ಕೃತಿ ಕುರಿತು ಮಾತನಾಡಿದ ಪತ್ರಕರ್ತ ಲೇಖಕ ಡಾ| ಶಿವರಂಜನ್ ಸತ್ಯಂಪೇಟೆ, ಶಿವರುದ್ರಯ್ಯನ ಶಿವತಾಂಡವ ಸಂಕಲನದ ಕಥೆಗಳು ನೈಜ ಘಟನೆ ಆಧರಿಸಿವೆ ಎಂದರು. ಪ್ರೊ| ಆರ್.ಕೆ. ಹುಡಗಿ ಅಧ್ಯಕ್ಷತೆ ವಹಿಸಿದ್ದರು.
ಬಂಡಾಯ ಸಾಹಿತಿ ಡಾ| ಪ್ರಭು ಖಾನಾಪುರೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ಪ್ರಕಾಶಕ ಬಸವರಾಜ ಕೊನೇಕ್ ಮಾತನಾಡಿದರು. ವೇದಿಕೆ ಹಾಗೂ ಬಳಗದ ಪದಾಧಿ ಕಾರಿಗಳಾದ ನರಸಪ್ಪ ಬಿರಾದಾರ, ರಾಜಶೇಖರ ಮರಡಿ, ಗಣೇಶ ಪಾಟೀಲ., ಡಾ| ಸೂರ್ಯಕಾಂತ ಪಾಟೀಲ, ಎಚ್ .ಬಿ. ಪಾಟೀಲ ವೇದಿಕೆಯಲ್ಲಿದ್ದರು. ಸಂಜಯ ಪಾಟೀಲ ನಿರೂಪಿಸಿದರು. ಲಕ್ಷ್ಮಿಕಾಂತ ಬೀದಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ