ಸಮಾನತೆ ಸಮಾಜ ನಿರ್ಮಿಸೋಣ
Team Udayavani, Aug 16, 2017, 10:43 AM IST
ಆಳಂದ: ಅಸಮಾನತೆಯಿಂದ ಕೂಡಿದ ಸ್ವಾತಂತ್ರ್ಯ ಭಾರತದಲ್ಲಿ ಎಲ್ಲ ರಂಗದಲ್ಲೂ ಸಮಾನತೆಗಾಗಿ ಪ್ರಾಮಾಣಿಕ ಪ್ರಯತ್ನ ನಡೆಯಬೇಕಾಗಿದೆ ಎಂದು ಶಾಸಕ ಬಿ.ಆರ್.ಪಾಟೀಲ ಹೇಳಿದರು. ಪಟ್ಟಣದ ಶ್ರೀರಾಮ ಮಾರುಕಟ್ಟೆಯಲ್ಲಿ ಮಂಗಳವಾರ ತಾಲೂಕು ಆಡಳಿತ ಏರ್ಪಡಿಸಿದ್ದ 71ನೇ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ದೇಶ ಸ್ವಾತಂತ್ರ್ಯವಾದ ಮೇಲೆ ವಿಜ್ಞಾನ, ತಂತ್ರಜ್ಞಾನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಹೀಗೆ ಸಾಧನೆ ಸಾಕಷ್ಟಾಗಿದ್ದರೂ ಸಾಧಿ ಸಬೇಕಾಗಿರುವುದು ಇನ್ನೂ ಬಹಳಷ್ಟಿದೆ ಎಂದರು. ತಹಶೀಲ್ದಾರ ಬಸವರಾಜ ಎಂ. ಬೆಣ್ಣೆಶಿರೂರ, ಪುರಸಭೆ ಅಧ್ಯಕ್ಷ ಅಂಬಾದಾಸ ಪವಾರ, ಉಪಾಧ್ಯಕ್ಷ ಅಜಗರ ಅಲಿ ಹವಾಲ್ದಾರ, ಡಿಎಸ್ಪಿ ಚೌಧರಿ, ಎಪಿಎಂಸಿ ಅಧ್ಯಕ್ಷ ಶರಣು ಭೂಸನೂರ, ಕೆಎಂಎಫ್ ನಿರ್ದೇಶಕ ಚಂದ್ರಕಾಂತ ಭೂಸನೂರ ಕಡಗಂಚಿ, ಶಿವುಪುತ್ರ ಪಾಟೀಲ, ಅಬ್ದುಲ್ ಸಲಾಂ ಸಗರಿ, ಗ್ರೇಡ್-2 ತಹಶೀಲ್ದಾರ
ಬಿ.ಜಿ. ಕುದರಿ, ತಾಪಂ ಇಒ ಡಾ| ಸಂಜಯ ರೆಡ್ಡಿ, ಕ್ಷೇತ್ರ ಶಿಕ್ಷಣಾಧಿ ಕಾರಿ ಗುರಣ್ಣಾ ಗುಂಡಗುರತಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಸವರಾಜ ಪಾಟೀಲ ಹಾಜರಿದ್ದರು. ಪ್ರಲ್ಹಾದ ಶಿಂಧೆ ನಿರೂಪಿಸಿದರು. ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕಪಡೆದ ಸರ್ಕಾರಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಕೊಡಮಾಡುವ ಲ್ಯಾಪ್ ಟಾಪ್ನ್ನು ಶಾಸಕರು ವಿತರಿಸಿದರು. ನಂತರ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಜಾಫರ್ ಅನ್ಸಾರಿ ವಂದಿಸಿದರು. 19ರಂದು ಪರಿಸರ ಆಂದೋಲನ:
ಪಟ್ಟಣದ ಜೂನಿಯರ್ ಕಾಲೇಜು ಮೃದಾನದಲ್ಲಿ ಆ.19ರಂದು ಐದು ಸಾವಿರ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಸಸಿಗಳನ್ನು ವಿತರಿಸಿ ಪರಿಸರ ಸಂರಕ್ಷಣೆ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ಬಿ.ಆರ್. ಪಾಟೀಲ ಇದೇ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!