ಮಾತೃಭಾಷೆ ಉಳಿಸಿ ಬೆಳೆಸೋಣ: ನದಾಫ್‌


Team Udayavani, Mar 31, 2018, 11:15 AM IST

gul-1.jpg

ಸೊಲ್ಲಾಪುರ: ಪ್ರತಿಯೊಬ್ಬ ಕನ್ನಡಿಗರು ತಮ್ಮ ಮಾತೃಭಾಷೆ ಉಳಿಸಿ, ಬೆಳೆಸಲು ಪ್ರಯತ್ನಿಸಬೇಕು. ನಾವೆಲ್ಲಿದ್ದರೂ ಕನ್ನಡಿಗರು ಎನ್ನುವ ಮನೋಭಾವ ನಮ್ಮದಾಗಬೇಕು ಎಂದು ಅಫಜಲಪುರ ತಾಲೂಕು ಕಸಾಪ ಅಧ್ಯಕ್ಷ ಡಿ.ಎಂ. ನದಾಫ್‌ ಹೇಳಿದರು. 

ಅಕ್ಕಲಕೋಟ ತಾಲೂಕಿನ ದುಧನಿಯ ಶಾಂತಲಿಂಗೇಶ್ವರ ವಿರಕ್ತಮಠದಲ್ಲಿ ನಡೆದ ಅಕ್ಕಲಕೋಟ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. 12ನೇ ಶತಮಾನದ ಸೊನ್ನಲಿಗೆ ಶರಣ ಸಿದ್ಧರಾಮೇಶ್ವರರು ಕನ್ನಡದಲ್ಲಿಯೇ ಸಾವಿರಾರು ವಚನ ಬರೆಯುವ ಮೂಲಕ ಈ ಭಾಗದಲ್ಲಿ ಕನ್ನಡ ಉಳಿಸಿ ಬೆಳೆಸಿದ್ದಾರೆ. ಅಲ್ಲದೆ ಗುಡ್ಡಾಪುರದ ದಾನೇಶ್ವರಿ ಮತ್ತು ಪಂಢರಪುರದ ವಿಠ್ಠಲನು ಮೂಲತಃ ಕರ್ನಾಟಕದವರಾಗಿದ್ದು ಮಹಾರಾಷ್ಟ್ರದಲ್ಲಿ ನೆಲೆಸಿದ್ದಾರೆ ಎಂದು ಹೇಳಿದರು.

ಕಸಾಪ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಬಸವರಾಜ ಮಸೂತಿ ಮಾತನಾಡಿ, ಇದೇ ಮೊದಲಬಾರಿಗೆ ಮಹಾರಾಷ್ಟ್ರದ ಮುಂಬೈ, ದಕ್ಷಿಣ ಸೊಲ್ಲಾಪುರ, ಜತ್ತ ಹಾಗೂ ಅಕ್ಕಲಕೋಟದಲ್ಲಿ ಕಸಾಪ ತಾಲೂಕು ಘಟಕ ರಚಿಸಲಾಗಿದೆ. ನಾವೆಲ್ಲರೂ ಕಸಾಪ ವತಿಯಿಂದ ಕನ್ನಡ ಭಾಷೆ ಬೆಳೆಸಲು ಪ್ರಯತ್ನಿಸೋಣ ಎಂದರು.  ಈ ಭಾಗದಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಮಹತ್ವವನ್ನು ಮಹಾರಾಷ್ಟ್ರ ಸರ್ಕಾರ ನೀಡುತ್ತಿಲ್ಲ. ಅಷ್ಟೆ ಅಲ್ಲದೆ ಇಲ್ಲಿನ ಕನ್ನಡ ಶಾಲೆಗಳು ಮುಚ್ಚುತ್ತಿವೆ. ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ಮಕ್ಕಳ ಕಲಿಕಾಮಟ್ಟ ಕುಸಿಯುತ್ತಿದೆ. ಆದ್ದರಿಂದ ಅನಿವಾರ್ಯವಾಗಿ ಪಾಲಕರು ತಮ್ಮ ಮಕ್ಕಳನ್ನು ಮರಾಠಿ ಮಾಧ್ಯಮಕ್ಕೆ ಸೇರಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು. 

ಅಧ್ಯಕ್ಷತೆ ವಹಿಸಿದ್ದದು ಧನಿ ವಿರಕ್ತಮಠದ ಪೂಜ್ಯ ಡಾ| ಶಾಂತಲಿಂಗ ಮಹಾಸ್ವಾಮೀಜಿ ಮಾತನಾಡಿ, ಮನೆ-ಮನೆಗಳಲ್ಲಿ ಮಠ-ಮಂದಿರಗಳಲ್ಲಿ ಕನ್ನಡ ಮಾತನಾಡುವುದರಿಂದ ಕನ್ನಡ ಭಾಷೆ ಬೆಳೆಯಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬ ಕನ್ನಡಿಗರು ತಮ್ಮ ಮನೆಗಳಲ್ಲಿ ಮಾತೃ ಭಾಷೆಯಲ್ಲಿ ಮಾತನಾಡಬೇಕು. ಕನ್ನಡ ಭಾಷೆ ನಮ್ಮೇಲ್ಲರ ಮಾತೃ ಭಾಷೆಯಾಗಿದ್ದು, ನಾವೆಲ್ಲರೂ ಕನ್ನಡದಲ್ಲಿಯೇ ಮಾತನಾಡುವ ಮೂಲಕ ಮಾತೃ ಭಾಷೆಯನ್ನು ಗೌರವಿಸಬೇಕು. ಅದರ ಜೊತೆಗೆ ಬೇರೆ ಭಾಷೆಗಳನ್ನು ಪ್ರೀತಿಸಬೇಕು ಎಂದರು.

ಅಕ್ಕಲಕೋಟ ತಾಲೂಕು ಕಸಾಪ ಅಧ್ಯಕ್ಷ ಮಲ್ಲಿಕಾರ್ಜುನ ಮಡ್ಡೆ ಮಾತನಾಡಿ, ಹೆಣ್ಣಿಗೆ ಮಂಗಳಸೂತ್ರ ಏಷ್ಟು ಮುಖ್ಯವೋ ಅಷ್ಟೇ ಪ್ರತಿಯೊಬ್ಬ ಕನ್ನಡಿಗರಿಗೂ ಕನ್ನಡ ಭಾಷೆ ಬಹಳ ಮಹತ್ವದ್ದಾಗಿದೆ. ನಮ್ಮ ದೇಹ ಮಹಾರಾಷ್ಟ್ರದಲ್ಲಿದ್ದರೂ ಮನಸ್ಸು ಮಾತ್ರ ಕರ್ನಾಟಕದಲ್ಲಿದೆ. ನಾವೆಲ್ಲಿದ್ದರೂ ಕನ್ನಡಿಗಕ್ಕಾಗಿ ಹೊರಾಡುತ್ತೇವೆ. ನಮಗೆ ಕರ್ನಾಟಕ ಬಿಟ್ಟಿರಬಹುದು. ಆದರೆ ನಾವು ಮಾತ್ರ ಕನ್ನಡ ಬಿಟ್ಟಿಲ್ಲ. ಕಸಾಪ ಮೂಲಕ ಕನ್ನಡ ಸೇವೆ ಮಾಡಲು ಅವಕಾಶ ದೊರೆತಿದೆ ಎಂದು ಹೇಳಿದರು. 

ಅಫಜಲಪುರದ ಪೂಜ್ಯ ಶಿವಲಿಂಗೇಶ್ವರ ಶ್ರೀ, ದುಧನಿಯ ಶ್ರೀಗಳು ಅಕ್ಕಲಕೋಟ ತಾಲೂಕು ಕಸಾಪ ಅಧ್ಯಕ್ಷ ಹಾಗೂ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ನೀಡಿದರು. ಆಳಂದ ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಕರೆ, ಸುಭಾಷ ಪರಮಶೆಟ್ಟಿ, ಸಿದ್ಧಾರಾಮ ಯಗದಿ, ರಾಜಶೇಖರ ಮಸೂತಿ, ಬಸವೇಶ್ವರ ಕರಜಗಿ, ನರಸಪ್ಪ ಬಿರಾಜದಾರ, ಬಸವರಾಜ ಆಲಮದ, ದಯಾನಂದ ಬಮನಳ್ಳಿ, ಪ್ರಕಾಶ ಗೊಬ್ಬುರ, ಪ್ರಕಾಶ ಪ್ರದಾನ, ರಾಜಶ್ರೀ ಮಸೂತಿ ಮುಖ್ಯ ಅತಿಥಿಗಳಾಗಿದ್ದರು. 

ಶಿವಚಲಕುಮಾರ ಸಾಲಿಮಠ ಸ್ವಾಗತಿಸಿದರು. ಗದಗಯ್ಯ ಹಿರೇಮಠ ನಿರೂಪಿಸಿದರು. ಗಿರಮಲ್ಲಪ್ಪ ಭರಮಾ ವಂದಿಸಿದರು.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.