ಲಂಬಾಣಿಗರ ವಲಸೆ ತಡೆಗೆ ಪತ್ರ ಚಳವಳಿ
Team Udayavani, Jan 16, 2019, 8:24 AM IST
ಆಳಂದ: ಲಂಬಾಣಿ ತಾಂಡಾದ ನಿವಾಸಿಗಳು ಉದ್ಯೋಗ ಆರಿಸಿ ವಲಸೆ ಹೋಗುವುದನ್ನು ತಡೆಗಟ್ಟಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂಬಿತ್ಯಾದಿ ಬೇಡಿಕೆಗೆ ಆಗ್ರಹಿಸಿ ರಾಜ್ಯ ಬಂಜಾರಾ ಕ್ರಾಂತಿ ದಳ ತಾಲೂಕು ಘಟಕದ ಕಾರ್ಯಕರ್ತರು ಪಟ್ಟಣ ಸೇರಿ ಗ್ರಾಮೀಣ ಭಾಗದಲ್ಲಿ ಪತ್ರ ಚಳವಳಿ ಮಾಡಿದರು.
ಕ್ರಾಂತಿದಳ ತಾಲೂಕು ಅಧ್ಯಕ್ಷ ವೆಂಕಟೇಶ ರಾಠೊಡ, ಸಹ ಕಾರ್ಯದರ್ಶಿ ಅಶೋಕ ರಾಠೊಡ ನೇತೃತ್ವದಲ್ಲಿ ಪತ್ರ ರವಾನಿಸಲಾಯಿತು.
ಕರ್ನಾಟಕದ ಲಂಬಾಣಿಗರ ವಲಸೆ ತಡೆಗಟ್ಟಲು ಶಾಶ್ವತ ಪರಿಹಾರವಾಗಿ ತಾಂಡಾಗಳ ಸಮಗ್ರ ಅಭಿವೃದ್ಧಿ ಮಾಡಬೇಕು. ಇದಕ್ಕಾಗಿ ತಜ್ಞರ ಸಮಿತಿ ರಚಿಸಿ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷ ಪೂರ್ತಿ ಕೆಲಸ ನೀಡಿ ಕಡ್ಡಾಯವಾಗಿ ವಾರದ ಅಂತ್ಯದಲ್ಲಿ ಕೂಲಿ ಹಣ ಪಾವತಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.
ವಲಸೆ ಇತ್ಯಾದಿ ಅಮಾನವೀಯ ಕಾರಣಗಳಿಂದಾಗಿ ತಾಂಡಾದ ಜನರು ಶಿಕ್ಷಣ, ಉದ್ಯೋಗ, ಆರೋಗ್ಯ ಮತ್ತು ಘನತೆ ಬದುಕಿನಿಂದ ವಂಚಿತರಾಗದಂತೆ ಸೂಕ್ತ ಕ್ರಮವಹಿಸಬೇಕು ಎಂದು ಒತ್ತಾಯಿಸಲಾಯಿತು.
ವಾಸಿಸುವವನೆ ನೆಲದೊಡೆಯ ಕಾಯ್ದೆ ಜಾರಿಗೊಳಿಸಿ ಭೂಮಿ ನಿವೇಶನದ ಹಕ್ಕು ಮತ್ತು ನಾಗರಿಕ ಸೌಲಭ್ಯ ಖಾತ್ರಿಗೊಳಿಸಬೇಕು ಹಾಗೂ ವಸತಿ ರಹಿತ ಬಂಜಾರಾ ಜನರಿಗೆ ಬಂಜಾರಾ ನಿಗಮ ಮಂಡಳಿಯಿಂದಲೇ ನೇರವಾಗಿ ವಸತಿ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಲಾಯಿತು.
ಕಾರ್ಯಕರ್ತ ಮಹೇಶ, ಅನೀಲ, ಸಾವನ, ಮಯೂರ, ಗೋಪಾಲ ಮತ್ತು ತಾಂಡಾದ ಯುವಕರು ಪತ್ರ ಚಳವಳಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
PU Exam ನಕಲು ಮಾಡಲು ಸಹಕಾರ ನೀಡಿಲ್ಲವೆಂದು ಪೇದೆ ಮೇಲೆಯೇ ಹಲ್ಲೆ!
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು