ಅಲ್ಪ ಮಳೆ: ನಳನಳಿಸುತ್ತಿವೆ ಬೆಳೆ


Team Udayavani, Jul 1, 2018, 10:21 AM IST

gul.jpg

ಚಿಂಚೋಳಿ: ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮವಾಗಿ ಬಿಸಿಲಿನ ತಾಪದಿಂದ ಬಾಡುತ್ತಿರುವ ಮುಂಗಾರು ಬೆಳೆಗಳು ಇದೀಗ ಚೇತರಿಕೆಗೊಳ್ಳುತ್ತಿರುವುದರಿಂದ ರೈತರ ಮೊಗದಲ್ಲಿ ಸಂತಸವನ್ನುಂಟು ಮಾಡಿದೆ.

ತಾಲೂಕಿನಲ್ಲಿ ಪ್ರಸಕ್ತ ಸಾಲಿನ ಜೂನ್‌ ಮೊದಲ ವಾರದಲ್ಲಿ ಗುಡುಗು, ಮಿಂಚಿನ ಮಳೆ ಬಿದ್ದಿರುವುದರಿಂದ ರೈತರು ಮುಂಗಾರಿನ ಬೆಳೆಗಳಾದ ಹೆಸರು, ತೊಗರಿ, ಉದ್ದು, ಸೋಯಾ ಮತ್ತು ಸಜ್ಜೆ, ಸೂರ್ಯಕಾಂತಿ ಬಿತ್ತನೆ ಮಾಡಿದ್ದರು.
ಕಳೆದ ಹದಿನೈದು ದಿವಸಗಳಿಂದ ಮಳೆ ಆಗದೇ ಖಡಕ್‌ ಬಿಸಿಲಿನ ತಾಪದಿಂದ ರೈತರು ಮುಂಗಾರು ಬಿತ್ತನೆ ಸ್ಥಗಿತಗೊಳಿಸಿದ್ದರು. ಕೆಲವು ಕಡೆ ಬಿತ್ತನೆ ಮಾಡಿದ ಬೆಳೆಗಳು ಮೊಳಕೆಯೊಡೆದ್ದರಿಂದ ಬಿಸಿಲಿನ ತಾಪ ಮತ್ತು ತೇವಾಂಶ ಕೊರತೆಯಿಂದಾಗಿ ಬೆಳೆಗಳು ಬಾಡುತ್ತಿರುವುದರಿಂದ ರೈತರ ಮೊಗದಲ್ಲಿ ಆತಂಕ ಸೃಷ್ಟಿಯಾಗಿತ್ತು.

ಕಳೆದ ಶುಕ್ರವಾರ ಮತ್ತು ಶನಿವಾರ ಅಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಪರಿಣಾಮವಾಗಿ ಇದೀಗ ಮುಂಗಾರು ಬೆಳೆಗಳಲ್ಲಿ ಚೇತರಿಕೆ ಕಾಣತೊಡಗಿದೆ.  ತಾಲೂಕಿನ ಐನಾಪುರ, ಚಿಮ್ಮನಚೋಡ, ನಿಡಗುಂದಾ, ಸುಲೇಪೇಟ, ಕೋಡ್ಲಿ,
ಚಂದನಕೇರಾ, ರಟಕಲ್‌, ಮಿರಿಯಾಣ, ಕುಂಚಾವರಂ, ಕನಕಪುರ, ಗಡಿಕೇಶ್ವಾರ, ರುದನೂರ, ಮೋಘಾ ಗ್ರಾಮಗಳ ಸುತ್ತಲಿನ ಹಳ್ಳಿಗಳಲ್ಲಿ ಬೆಳೆಗಳು ಇದೀಗ ನಳ ನಳಿಸುತ್ತಿವೆ.

ಸಲಗರ ಬಸಂತಪುರ, ಸಾಲೇಬೀರನಳ್ಳಿ, ತುಮಕುಂಟಾ, ನಾಗಾಇದಲಾಯಿ, ದೇಗಲಮಡಿ, ಕೊರವಿ, ಹೊಡೇಬೀರನಳ್ಳಿ ಗ್ರಾಮಗಳಲ್ಲಿ ಇನ್ನು ಬಿತ್ತನೆ ಕಾರ್ಯ ನಡೆಯುತ್ತಿವೆ ಎಂದು ಕೃಷಿ ಇಲಾಖೆ ತಿಳಿಸಿದೆ. ತಾಲೂಕಿನಲ್ಲಿ ಶೇ. 68 ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಈಗ ಕೇವಲ ತೊಗರಿ ಬಿತ್ತನೆ ಹೆಚ್ಚು ನಡೆಯುತ್ತಿದೆ. 

ಜುಲೈ ತಿಂಗಳಲ್ಲಿ ಬೆಳೆಗಳಲ್ಲಿ ಹುಲ್ಲು ಕೀಳುವ ಕೆಲಸ ಪ್ರಾರಂಭ ಆಗಲಿದೆ. ಸದ್ಯ ಎಲ್ಲ ಹಳ್ಳಿಗಳಲ್ಲಿ ಮುಂಗಾರಿನ ಬೆಳೆಗಳು ಮಳೆಯಿಂದ ಚೇತರಿಕೆಗೊಂಡು ಅಲ್ಲಲ್ಲಿ ನಳನಳಿಸುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.