ಲಿಂಗಾಯತ ಮಹಾಸಮಾವೇಶ ಯಶಸ್ಸಿಗೆ ಸಿದ್ಧತೆ
Team Udayavani, Sep 11, 2017, 7:05 AM IST
ಕಲಬುರಗಿ: ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಹಾಗೂ ಸರ್ಕಾರದ ಸವಲತ್ತು ಪಡೆಯುವುದಕ್ಕಾಗಿ
ಸೆ. 24ರಂದು ಕಲಬುರಗಿಯಲ್ಲಿ ಹಮ್ಮಿಕೊಂಡಿರುವ ಲಿಂಗಾಯತ ಮಹಾರ್ಯಾಲಿ -ಮಹಾಸಮಾವೇಶಕ್ಕೆ ಲಿಂಗಾಯತ ಧರ್ಮದಲ್ಲಿದ್ದುಕೊಂಡು ದೂರ ಉಳಿದವರೆಲ್ಲರನ್ನು ಒಗ್ಗೂಡಿಸಿ ಯಶಸ್ವಿ ಸಮಾವೇಶಕ್ಕೆ ಎಲ್ಲರೂ ಯತ್ನಿಸೋಣ ಹಾಗೂ ಇದಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣ ಪ್ರಕಾಶ ಪಾಟೀಲ ಕರೆ ನೀಡಿದರು.
ಭಾನುವಾರ ಶಹಾಬಜಾರ ಸುಲಫಲ ಮಠದಲ್ಲಿ ಲಿಂಗಾಯತ ಮಹಾ ಸಮಾವೇಶದ ಅಂಗವಾಗಿ ನಡೆದ ನಾಡಿನ ವಿವಿಧ ಮಠಾಧೀಶರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಲಿಂಗಾಯತಸ್ವತಂತ್ರ ಧರ್ಮವಾದಲ್ಲಿ ಸಿಗುವ ಸೌಲತ್ತುಗಳ ಕುರಿತು ಸಹೋದರರಿಗೆ ತಿಳಿಸಿ ಹೇಳಿ, ಅವರನ್ನು ಜತೆಗೆ ಕರೆಯುವ ನಿಟ್ಟಿನ ಪ್ರಮುಖ ಕಾರ್ಯ ನಮ್ಮಿಂದ ಹಾಗೂ ಮಠಾಧೀಶರಿಂದ ಆಗಬೇಕಿದೆ ಎಂದು ಹೇಳಿದರು.
ಲಿಂಗಾಯತಸ್ವತಂತ್ರ ಧರ್ಮ ಪಡೆಯಲು ನಮ್ಮಲ್ಲಿ ತತ್ವವಿದೆ. ಧರ್ಮದ ಮಾನ್ಯತೆಗಾಗಿ ಇರುವ ವಚನ ಸಾಹಿತ್ಯವಿದೆ. ಧರ್ಮಗ್ರಂಥ, ಧರ್ಮಗುರು ಎಲ್ಲವೂ ಇದೆ. ಹೀಗಾಗಿ ನಾಡಿನ ಮಠಾಧೀಶರು ತಮ್ಮ ಗ್ರಾಮಗಳಲ್ಲಿರುವ ಭಕ್ತರಿಗೆ
ತಿಳಿ ಹೇಳುವುದರ ಜತೆಗೆ ಸೆ. 24ರ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯಿತರನ್ನು ಸೇರಿಸಲು ಶ್ರಮಿಸಬೇಕು ಎಂದರು.
ಈ ಸಮಾವೇಶಕ್ಕೆ ರಾಜ್ಯವಲ್ಲದೇ ದೇಶದ ವಿವಿಧ ಭಾಗಗಳ ಸಮಾಜದ ಮುಖಂಡರು, ಅಭಿಮಾನಿಗಳು
ಪಾಲ್ಗೊಳ್ಳಲಿದ್ದಾರೆ. ಜತೆಗೆ ಗದಗ ತೋಂಟದಾರ್ಯ,ನಾಗನೂರು, ಚಿತ್ರದುರ್ಗ ಶ್ರೀಗಳು ನಾಡಿನ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ. ನಮ್ಮೂರು ಜಾತ್ರೆ ಹಾಗೂ ಮನೆಯಲ್ಲಿ ಕಾರ್ಯಕ್ರಮ ಇದ್ದಾಗ ಹೇಗೆ ಜನರನ್ನು ಕರೆಯಿಸಿಕೊಳುತ್ತೇವೆಯೋ ಅದೇ ರೀತಿ ಸಮಾವೇಶಕ್ಕೂ ಜನರನ್ನು ಕರೆದುಕೊಂಡು ಬರಬೇಕೆಂಬ ಒಕ್ಕೊರಲಿನ ನಿರ್ಣಯ ಕೈಗೊಳ್ಳಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ