ಗ್ರಾಮ ವಾಸ್ತವ್ಯ ಕಾರ್ಯಕ್ರಮ ಪಟ್ಟಿ
Team Udayavani, Jun 14, 2019, 5:48 AM IST
ಕಲಬುರಗಿ: ಸಿಎಂ ಕುಮಾರಸ್ವಾಮಿ ಜೂ.21 ಹಾಗೂ 22ರಂದು ಯಾದಗಿರಿ, ಕಲಬುರಗಿ ಜಿಲ್ಲೆಗಳಿಗೆ ಗ್ರಾಮ ವಾಸ್ತವ್ಯಕ್ಕಾಗಿ ಭೇಟಿ ನೀಡಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜೂ.20ರಂದು ಸಂಜೆ 7:20ಕ್ಕೆ ಬೆಂಗಳೂರಿ ನಿಂದ ರೈಲಿನ ಮೂಲಕ ಹೊರಟು 21ರಂದು ಬೆಳಗ್ಗೆ 3:48ಕ್ಕೆ ಯಾದಗಿರಿಗೆ ಆಗಮಿಸಿ, ಪರಿವೀಕ್ಷಣಾ ಮಂದಿರದಲ್ಲಿ ವಾಸ್ತವ್ಯ ಮಾಡುವರು. ಬೆಳಗ್ಗೆ 7:30ಕ್ಕೆ ಯಾದಗಿರಿ ಯಿಂದ ಗುರಮಠಕಲ್ ತಾಲೂಕಿನ ಚಂಡರಕಿಗೆ ಭೇಟಿ ನೀಡಿ, ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಜನತಾ ದರ್ಶನ ನಡೆಸಿ, ಸಾರ್ವಜನಿಕರಿಂದ ಮನವಿ ಸ್ವೀಕರಿಸಿ, ಕುಂದು ಕೊರತೆಗಳನ್ನು ಆಲಿಸಲಿದ್ದಾರೆ.
ಸಂಜೆ 6:30ರಿಂದ ರಾತ್ರಿ 8:30ರವರೆಗೆ ರೈತರಿಗೆ ಮಾಹಿತಿ, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಶಿಕ್ಷಕರು, ವಿದ್ಯಾರ್ಥಿಗಳೊಂದಿಗೆ ಭೋಜನ ಮಾಡುವರು. ನಂತರ ಚಂಡರಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡುವರು.
22ರಂದು ಬೆ. 7:30ಕ್ಕೆ ಚಂಡರಕಿ ಯಿಂದ ಹೊರಟು 10ಕ್ಕೆ ಕಲಬುರಗಿ ತಾಲೂಕಿನ ಹೇರೂರು (ಬಿ) ಗ್ರಾಮಕ್ಕೆ ಭೇಟಿ ನೀಡಿ, ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಜನತಾ ದರ್ಶನ, ಸಾರ್ವಜನಿಕರಿಂದ ಕುಂದುಕೊರತೆ ಆಲಿಸು ವರು. ಸಂಜೆ 6:30 ರಿಂದ ರಾತ್ರಿ 8ರವರೆಗೆ ರೈತರಿಗೆ ಮಾಹಿತಿ, ಸ್ಥಳೀಯ ಮಕ್ಕಳ ಸಾಂಸ್ಕೃ ತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಭೋಜನ ಮಾಡು ವರು. ನಂತರ ಹೇರೂರ (ಬಿ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡುವರು. 23ರಂದು ಬೆಳಗ್ಗೆ 9ಕ್ಕೆ ಗ್ರಾಮ ದಿಂದ ಹೊರಟು ಬೆಳಗ್ಗೆ 10:15ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬೆಳಗ್ಗೆ 11ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.