ಚಿತ್ತಾಪುರದಲ್ಲಿ ಎಲ್ಲಿ ನೋಡಿದ್ರೂ ಗುಂಡಿಗಳದ್ದೇ ದರ್ಶನ


Team Udayavani, Jan 5, 2019, 7:17 AM IST

7.jpg

ಚಿತ್ತಾಪುರ: ಪಟ್ಟಣದಲ್ಲೀಗ ಎಲ್ಲೆಲ್ಲೂ ರಸ್ತೆಗಳ ಮೇಲೆ ಗುಂಡಿಗಳ ದರ್ಶನವಾಗುತ್ತಿದೆ. 23 ವಾರ್ಡ್‌ಗಳಲ್ಲಿ ವಿವಿಧ ಕಾರಣಗಳಿಗಾಗಿ ರಸ್ತೆಗಳನ್ನು ಯದ್ವಾತದ್ವಾ ಅಗೆಯಲಾಗುತ್ತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತೆ  ಆಗಿದೆ.

ಅನಿಯಮಿತವಾಗಿ ನಡೆಯುತ್ತಿರುವ ರಸ್ತೆ ಅಗೆತ ಹೊಸ ಸವಾಲು ಸೃಷ್ಟಿಸಿದೆ. ಎಲ್ಲೆಡೆ ಅವ್ಯವಸ್ಥೆ ಕಂಡರೂ ಪುರಸಭೆ ಆಡಳಿತ ಏನೂ ಮಾಡಲಾಗದ ಅಸಹಾಯಕ ಸ್ಥಿತಿಯಲ್ಲಿದೆ. ಹೊಸ ಸದಸ್ಯರು ಚುನಾಯಿತರಾಗಿ ಮೂರು ತಿಂಗಳು ಗತಿಸಿದರೂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾಗಿಲ್ಲ. ಆಡಳಿತ ರಚನೆ ನನೆಗುದಿಗೆ ಬಿದ್ದಿದೆ. ಕಾಮಗಾರಿಗಳ ಬಗ್ಗೆ ಹೇಳುವವರು, ಕೇಳುವವರು ಇಲ್ಲದಂತಾಗಿದೆ. ಇದೇ ಸಮಸ್ಯೆ ಮೂಲವಾಗಿದೆ. 

ಪಟ್ಟಣ ವ್ಯಾಪ್ತಿಯಲ್ಲಿ ಏನೇ ಸಾರ್ವಜನಿಕ ಕಾಮಗಾರಿ ನಡೆದರೂ ಅದು ಸ್ಥಳೀಯ ಸಂಸ್ಥೆಯ ಗಮನಕ್ಕೆ ಬರಬೇಕು ಎನ್ನುವುದು ನಿಯಮ. ಆದರೆ ಯಾವುದೇ ಅನುಮತಿ ಇಲ್ಲದೇ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದೆ.

ಪ್ರತಿ ಕಾಮಗಾರಿ ಸಮಗ್ರ ಮಾಹಿತಿ ಪುರಸಭೆಯಲ್ಲಿ ಇರಬೇಕು. ಸಂಬಂಧಿಸಿದವರು ಮಾಹಿತಿ ಕೊಡದಿದ್ದರೆ ಅದನ್ನು ಪಡೆಯುವ ಹಾಗೂ ಲೋಪ ಕಂಡು ಬಂದರೆ ತಕ್ಷಣ ಕಾಮಗಾರಿ ಸ್ಥಗಿತಗೊಳಿಸುವ ಅಧಿಕಾರ ಪುರಸಭೆ ಆಡಳಿತಕ್ಕಿದೆ. ಆದರೆ ಇದ್ಯಾವುದೂ ತನಗೆ ಸಂಬಂಧವಿಲ್ಲವೆಂಬಂತೆ ಪುರಸಭೆ ಆಡಳಿತ ನಡೆದುಕೊಳ್ಳುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕುಡಿಯುವ ನೀರಿನ ಪೈಪ್‌ ಸರಿಪಡಿಸುವುದು, ಮೊಬೈಲ್‌ ಕೇಬಲ್‌ ಜೋಡಣೆ, ಚರಂಡಿ ನಿರ್ಮಾಣ, ಯುಜಿಡಿ
ಕೆಲಸ, ಶೌಚಾಲಯಕ್ಕೆ ಪೈಪ್‌ ಅಳವಡಿಸುವುದು ಸೇರಿದಂತೆ ಹಲವು ಕಾರಣಗಳಿಂದ ಅಚ್ಚುಕಟ್ಟಾದ ರಸ್ತೆಯನ್ನು ಮೇಲಿಂದ
ಮೇಲೆ ಅಗೆಯುವುದು ಸಾಮಾನ್ಯವಾಗಿದೆ.  ರಸ್ತೆ ಅಗೆಯುವಾಗ ತೋರುವ ಆಸಕ್ತಿ, ಕೆಲಸ ಮುಗಿದ ಬಳಿಕ ಸರಿಪಡಿಸುವಲ್ಲಿ ಕಾಣುತ್ತಿಲ್ಲ. ಅಗೆದ ಭಾಗವನ್ನು ಮಣ್ಣಿನಿಂದ ಸಮರ್ಪಕವಾಗಿ ಮುಚ್ಚದ ಕಾರಣ ಮಳೆ ನೀರು ನಿಂತು ಎಲ್ಲೆಂದರಲ್ಲಿ ಗುಂಡಿಗಳು ನಿರ್ಮಾಣವಾಗುತ್ತಿವೆ. ಇದರಿಂದ ಪಟ್ಟಣ ವ್ಯಾಪ್ತಿಯ ರಸ್ತೆಗಳು ಹದಗೆಡುತ್ತಿವೆ.

ವಿಶೇಷವಾಗಿ ದ್ವಿಚಕ್ರ ಹಾಗೂ ಲಘುವಾಹನ ಚಾಲಕರು ಇಂತಹ ರಸ್ತೆ ಮೇಲೆ ಸಂಚರಿಸಲು ಸರ್ಕಸ್‌ ಮಾಡದೇ ವಿಧಿಯಿಲ್ಲ ಎನ್ನುವಂತಾಗಿದೆ. ರಸ್ತೆ ಅಡಿತದಿಂದ ಕುಡಿಯುವ ನೀರಿನ ಪೈಪ್‌ಗ್ಳು ಹಾಳಾಗುತ್ತಿವೆ. ಕೆಲವೆಡೆ ಪೈಪ್‌ಗ್ಳು ಒಡೆದು ನೀರು ವ್ಯರ್ಥವಾಗಿ ಹರಿದುಹೋಗುತ್ತಿದೆ.

ಇದರ ಜತೆಗೆ ಬೀದಿ ದೀಪಗಳ ವ್ಯವಸ್ಥೆಗೂ ಆಗಾಗ ಧಕ್ಕೆ ಉಂಟಾಗುತ್ತಿದೆ. ಚರಂಡಿಗಳಿಲ್ಲದ ಕಾರಣ ಮೋರಿ ನೀರನ್ನು ರಸ್ತೆ ಮೇಲೆ ಬಿಡುತ್ತಿರುವುದರಿಂದ ರಸ್ತೆ ಸಂಪೂರ್ಣ ಗಲೀಜಾಗಿ ಪರಿಣಮಿಸುತ್ತಿದೆ.

ಪಟ್ಟಣದಲ್ಲಿ ಬೇಕಾಬಿಟ್ಟಿಯಾಗಿ ರಸ್ತೆಗಳನ್ನು ಅಗೆಯುತ್ತಿದ್ದಾರೆ. ಕೆಲಸವಾದ ಕೂಡಲೇ ಅದನ್ನು ಮುಚ್ಚಬೇಕು ಎನ್ನುವ ಪರಿಕಲ್ಪನೆಯೂ ಇವರಿಗಿಲ್ಲ. ಹೀಗಾಗಿ ರಸ್ತೆಗಳಲ್ಲಿ ಓಡಾಡಲು ವಾಹನ ಸವಾರರು ತೊಂದರೆ ಪಡುತ್ತಿದ್ದಾರೆ. ಹಾಳಾದ ರಸ್ತೆಗಳನ್ನು ದುರಸ್ತಿಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಿದೆ.
 ರಾಕೇಶ ಕರದಾಳ, ಸ್ಥಳೀಯ ನಿವಾಸಿ

ಪಟ್ಟಣದಲ್ಲಿ ತಮ್ಮ ಮನಸ್ಸಿಗೆ ಹೇಗೆ ಬರುತ್ತದೋ ಹಾಗೆ ರಸ್ತೆಗಳನ್ನು ಅಗೆದು ಹಾಳು ಮಾಡುತ್ತಿರುವುದರಿಂದ ತಗ್ಗುಗಳು ಬಿದ್ದಿವೆ. ಪುರಸಭೆ ಅಧಿಕಾರಿಗಳಿಗೆ ಹೇಳಿದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ. ಮೂರ್‍ನಾಲ್ಕು ತಿಂಗಳಾದ್ರೂ ಅಧ್ಯಕ್ಷ ಉಪಾಧ್ಯಕ್ಷರಿಲ್ಲದೇ ಪುರಸಭೆ ಸಂಪೂರ್ಣ ಬಣಬಣ ಕಾಣುತ್ತಿದೆ. 
 ಸುರೇಶ ಬೆನಕನಳ್ಳಿ, ಪುರಸಭೆ ವಿರೋಧ ಪಕ್ಷದ ಮಾಜಿ ನಾಯಕರು

ನಾನು ಪುರಸಭೆಗೆ ಬಂದು ಮೂರ್‍ನಾಲ್ಕು ದಿನ ಮಾತ್ರ ಆಯಿತು. ಸಮಸ್ಯೆ ನನ್ನ ಗಮನಕ್ಕೂ ಬಂದಿದೆ. ಸಂಬಂಧಪಟ್ಟ ಇಂಜಿನಿಯರ್‌ಗೆ ಕರೆ ಮಾಡಿ ತಿಳಿಸಿದ್ದೇನೆ. ಅವರು ಬಂದ ಕೂಡಲೇ ಮನೆಮನೆಗೆ ಹೋಗಿ ಪರಿಶೀಲಿಸಲಾಗುವುದು. 
 ಮನೋಜಕುಮಾರ, ಪುರಸಭೆ ಮುಖ್ಯಾಧಿಕಾರಿ

ಪಟ್ಟಣದಲ್ಲಿ ಮೊದಲು ಯುಜಿಡಿ ಕೆಲಸಕ್ಕೆಂದು ರಸ್ತೆಗಳನ್ನು ಅಗೆದರು. ಕೆಲಸವಾದ ನಂತರ ಅದನ್ನು ಮುಚ್ಚಿ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿದರು. ಇದೀಗ ಶೌಚಾಲಯಕ್ಕೆ ಪೈಪ್‌ಗ್ಳನ್ನು ಹಾಕಬೇಕು ಎಂದು ರಸ್ತೆ ಹಾಳು ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ.
 ನರಹರಿ ಕುಲಕರ್ಣಿ, ಕರವೇ ತಾಲೂಕು ಅಧ್ಯಕ್ಷ

„ಎಂ.ಡಿ. ಮಶಾಖ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.